ಸಚಿವ ಕೋಟ ವಿರುದ್ಧ ಕಿಡಿಗೆಡಿಗಳ ಅಂತರ್ಜಾಲ ಅಪಪ್ರಚಾರಕ್ಕೆ ವ್ಯಾಪಕ ಖಂಡನೆ
ಕೋಟ: ದ.ಕ ಜಿಲ್ಲಾಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ಅವಹೇಳನ ಬರಹವನ್ನು ಫೇಸ್ಬುಕ್ ಖಾತೆಯಲ್ಲಿ ಹರಿಬಿಟ್ಟ ಅನಿಲ್ ಕುಮಾರ್ ಶೆಟ್ಟಿ ಎನ್ನುವನ ವಿರುದ್ಧ ವ್ಯಾಪಕ ಟೀಕೆ ಹಾಗೂ ಖಂಡನೆ ವ್ಯಕ್ತವಾಗಿದ್ದು ಅದರಂತೆ ಬುಧವಾರ ಕೋಟ ಶ್ರೀ ನಾರಾಯಣ ಗುರು ಸೇವಾ ಸಂಘ ಆಕ್ರೋಶ ವ್ಯಕ್ತಪಡಿಸಿ ಕೋಟ ಆರಕ್ಷಕ ಠಾಣೆಗೆ ತೆರಳಿ ಠಾಣಾಧಿಕಾರಿ ಸಂತೋಷ್ ಬಿ.ಪಿ ಇವರಿಗೆ ದೂರು ನೀಡಿದೆ. ಈ ಬಗ್ಗೆ ಶೀಘ್ರ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದೆ.ಸಚಿವ ಕೋಟ ಈ ವರೆಗೆ ರಾಜ್ಯದಲ್ಲೆ ಸಭ್ಯ ರಾಜಕಾರಣಿ ಎಂದು ಗುರುತಿಸಿಕೊಂಡಿದ್ದಾರೆ.ಅಂತವರ ಬಗ್ಗೆ ಇಲ್ಲಸಲ್ಲದ ಆರೋಪ ಅವಹೇಳನ ಮಾಡುವವರ ವಿರುದ್ಧ ಸಮುದಾಯ ಅಥವಾ ಅವರ ಅಭಿಮಾನಿಗಳು ಸಹಿಸಿಕೊಂಡು ಕೂರುವುದಿಲ್ಲ ಈ ರೀತಿಯ ಬರಹಯುಕ್ತ ಪೋಸ್ಟ್ರ್ ಇನ್ನು ಮುಂದೆಯೂ ಯಾರ ಬಗ್ಗೆಯೂ ಮಾಡಕೂಡದು ಆ ರೀತಿಯ ಶಿಕ್ಷೆ ವಿಧಿಸಬೇಕು ಎಂದು ಸಂಘದ ಅಧ್ಯಕ್ಷ ಜಿ.ಸದಾನಂದ ಪೂಜಾರಿ ತಮ್ಮ ಆಕ್ರೋಶದಲ್ಲಿ ವ್ಯಕ್ತಪಡಿಸಿದ್ದಾರೆ.ಈ ಸಂದರ್ಭದಲ್ಲಿ ಸಂಘದ ಪ್ರಧಾನಕಾರ್ಯದರ್ಶಿ ಪ್ರಸಾದ್ ಬಿಲ್ಲವ,ಕಾರ್ಯದರ್ಶಿ ಮನೋಹರ್ ಪೂಜಾರಿ, ಯುವ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ,ಸಂತೋಷ್ ಪೂಜಾರಿ ತೆಕ್ಕಟ್ಟೆ ಉಪಸ್ಥಿತರಿದ್ದರು
ಕೋಟ.ಜ೨೦ ಅವಹೇಳನ ಮನವಿ
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…