Featured

ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿಶ್ವಕರ್ಮ ಸಮಾಜವನ್ನು ಒಡೆದು ಇಬ್ಭಾಗ ಮಾಡಲು ಮುಂದಾಗಿದ್ದಾರೆ ಎಂಬ ಆರೋಪದಲ್ಲಿ ಯಾವುದೇ ಹುರುಳಿಲ್ಲ : ಬಿಜೆಪಿ ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ನೆ.ಲ. ನರೇಂದ್ರಬಾಬು ಸ್ಪಷ್ಟನೆ – Vishwanews24

ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿಶ್ವಕರ್ಮ ಸಮಾಜವನ್ನು ಒಡೆದು ಇಬ್ಭಾಗ ಮಾಡಲು ಮುಂದಾಗಿದ್ದಾರೆ ಎಂಬ ಆರೋಪದಲ್ಲಿ ಯಾವುದೇ ಹುರುಳಿಲ್ಲ : ಬಿಜೆಪಿ ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ನೆ.ಲ. ನರೇಂದ್ರಬಾಬು ಸ್ಪಷ್ಟನೆ

ಬೆಂಗಳೂರು: ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ವಿಶ್ವಕರ್ಮ ಸಮಾಜವನ್ನು ಒಡೆದು ಇಬ್ಭಾಗ ಮಾಡಲು ಮುಂದಾಗಿದ್ದಾರೆ ಎಂಬ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಛಾದ ರಾಜ್ಯಾಧ್ಯಕ್ಷ ನೆ.ಲ. ನರೇಂದ್ರಬಾಬು ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ನರೇಂದ್ರ ಬಾಬು, ಬಿಜೆಪಿ ಮತ್ತು ರಾಜ್ಯದ ಸಚಿವರು ಯಾರನ್ನೂ ಕಡೆಗಣಿಸುವುದಿಲ್ಲ. ಸಮಾಜವನ್ನು ಒಡೆಯುವ ಕಾರ್ಯ ಮಾಡುವುದಿಲ್ಲ. ಎಲ್ಲ ಸಮಾಜಗಳನ್ನು ಒಗ್ಗೂಡಿಸಿ ಸಮಾಜದ ಸರ್ವತೋಮುಖ ಅಭಿವೃದ್ಧಿ ಮಾಡಲು ಬಿಜೆಪಿ ಶ್ರಮಿಸುತ್ತದೆ ಎಂದು ತಿಳಿಸಿದ್ದಾರೆ.

ನಂಜುಂಡಿ ಅವರನ್ನು ಪಕ್ಷವು ಕಡೆಗಣಿಸಿಲ್ಲ. ವಿಶ್ವಕರ್ಮ ಸಮಾಜದ ಸ್ವಾಮೀಜಿ ಮತ್ತು ಪ್ರಮುಖರು ಬಂದು ಮನವಿ ನೀಡಿದ್ದು, ಅದನ್ನು ಸ್ವೀಕರಿಸುವುದು ಅವರ ಕರ್ತವ್ಯ. ಅದನ್ನು ಸ್ವೀಕರಿಸಿದ್ದಾರೆ. ಅದನ್ನು ಸ್ವೀಕರಿಸಬಾರದು ಎಂದು ಹೇಳುವುದು ಸೂಕ್ತವಲ್ಲ ಎಂದು ತಿಳಿಸಿದ್ದಾರೆ.

ಸಮಾಜ ಒಡೆಯುತ್ತಿದ್ದಾರೆ ಎಂಬ ಗೊಂದಲದ ಹೇಳಿಕೆ ನೀಡಿ ಅಪಪ್ರಚಾರ ಮಾಡುವುದು ಸರಿಯಲ್ಲ. ಹಿಂದುಳಿದ ವರ್ಗಗಳ ಸಚಿವರಾಗಿ ಹಿಂದುಳಿದ ಸಮಾಜದ ಮುಖಂಡರು, ಸ್ವಾಮೀಜಿಗಳು ಯಾರೇ ಬಂದರೂ ಅವರನ್ನು ಗೌರವಭಾವದಿಂದ ನೋಡಿ ಮನವಿ ಸ್ವೀಕರಿಸಿ ಕ್ರಮ ತೆಗೆದುಕೊಳ್ಳುವುದು ಅವರ ಜವಾಬ್ದಾರಿ. ಆ ಹೊಣೆಯನ್ನು ಅವರು ನಿರ್ವಹಿಸಿದ್ದಾರೆ ಎಂದು ತಿಳಿಸಿದ್ದಾರೆ.

ನಂಜುಂಡಿಯವರು, ಬಾಬು ಪತ್ತಾರ ಸೇರಿದಂತೆ ಸಮಾಜದ ಎಲ್ಲರೂ ಒಗ್ಗಟ್ಟಾಗಿ ಸಮಾಜದ ಕುರಿತು ಚಿಂತಿಸುವುದು ಒಳಿತನ್ನು ತರುತ್ತದೆ. ಒಗ್ಗಟ್ಟಿನಲ್ಲಿ ಬಲವಿದೆಯೇ ಹೊರತು ಈ ರೀತಿಯಾಗಿ ಕ್ಷುಲ್ಲಕವಾಗಿ ಮಾತನಾಡುವುದು ಮತ್ತು ಆರೋಪಿಸುವುದು ಸೂಕ್ತವಲ್ಲ ಎಂದು ನೆ.ಲ.ನರೇಂದ್ರಬಾಬು ಮಾಧ್ಯಮ ಹೇಳಿಕೆ ಮೂಲಕ ತಿಳಿಸಿದ್ದಾರೆ.

ನಿನ್ನೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ಅಖಿಲ ಕರ್ನಾಟಕ ವಿಶ್ವಕರ್ಮ‌ ಸಮುದಾಯದ ಯುವ ಘಟಕದಿಂದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಅವರಿಗೆ ದೂರು ಸಲ್ಲಿಸಲ್ಪಟ್ಟಿತ್ತು.

 

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

7 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

7 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

7 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

22 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

22 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

22 hours ago