ಬೆಂಗಳೂರು: ಐಟಿ ದಾಳಿ ವೇಳೆ ಸಿಕ್ಕಿರುವ ಆಸ್ತಿ ಬಗ್ಗೆ ದಾಖಲಾತಿ ಒದಗಿಸುವಲ್ಲಿ ಜಲಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ವಿಫಲರಾಗಿದ್ದಾರೆ ಎಂದು ಐಟಿ ಇಲಾಖೆ ಮೂಲಗಳು ಮಾಹಿತಿ ನೀಡಿವೆ.
ದಾಳಿ ನಡೆದು 10 ತಿಂಗಳಾದರೂ ಐಟಿ ತನಿಖಾಧಿಕಾರಿಗಳು ಅಂತಿಮ ವರದಿ ಸಲ್ಲಿಸಿಲ್ಲ. ಗಂಭೀರ ಪ್ರಕರಣಗಳ ತನಿಖೆಗೆ ಐಟಿ ಅಧಿಕಾರಿಗಳು ಗರಿಷ್ಠ 4ರಿಂದ 5 ತಿಂಗಳು ತೆಗೆದುಕೊಳ್ಳುತ್ತಾರೆ. ಆದರೆ, ಈ ಪ್ರಕರಣದಲ್ಲಿ ದಾಳಿ ನಡೆದು 10 ತಿಂಗಳಾದರೂ ತನಿಖೆ ಪೂರ್ಣಗೊಳಿಸಿಲ್ಲ. ಸಚಿವರು ವಿಚಾರಣೆಗೆ ಹಾಜರಾದಾಗಲೆಲ್ಲ ದಾಖಲೆ ಸಲ್ಲಿಕೆಗೆ ಸಮಯಾವಕಾಶ ಕೇಳುತ್ತಿರುವುದರಿಂದ ವಿಳಂಬವಾಗುತ್ತಿದೆ ಎನ್ನಲಾಗುತ್ತಿದೆ.
402 ಕೋಟಿ ರೂ. ಆಸ್ತಿ ಹೊಂದಿರುವ ಬಗ್ಗೆ ಸಚಿವರು ವಿಚಾರಣೆ ವೇಳೆ ಒಪ್ಪಿಕೊಂಡಿದ್ದರು. ಲೆಕ್ಕಪರಿಶೋಧಕರ ಮೂಲಕ ಇದಕ್ಕೆ ಸೂಕ್ತ ದಾಖಲೆ ನೀಡುವುದಾಗಿ ತಿಳಿಸಿದ್ದರು. ಆದರೆ, ತನಿಖಾಧಿಕಾರಿಗಳು ವಶಪಡಿಸಿಕೊಂಡ ದಾಖಲೆಗಳನ್ನು ಪರಿಶೀಲಿಸಿದಾಗ, ಸಚಿವರು ವಿಚಾರಣೆ ವೇಳೆ ಒಪ್ಪಿಕೊಂಡಿರುವುದಕ್ಕಿಂತ ಅಧಿಕ ಪ್ರಮಾಣದ ಅಕ್ರಮ ಆಸ್ತಿ ಹೊಂದಿರುವುದು ತನಿಖೆಯಲ್ಲಿ ತಿಳಿದು ಬಂದಿದೆ. ಅಲ್ಲದೆ ಕೆಲ ವ್ಯವಹಾರ ಗಳ ಆದಾಯದ ಬಗ್ಗೆ ಸುಳ್ಳು ಮಾಹಿತಿ ನೀಡಿರುವುದು ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಐಟಿ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಿಯಲ್ ಎಸ್ಟೇಟ್ನಲ್ಲಿ -ಠಿ;102 ಕೋಟಿ
ನಾನು ರೈತನಾಗಿದ್ದು, ಸ್ವಂತ ರಿಯಲ್ ಎಸ್ಟೇಟ್ ವ್ಯವಹಾರ ಇದೆ. ಬೆಂಗಳೂರಿನಲ್ಲೂ ಕೆಲ ಆಸ್ತಿಯಿದೆ. ಗ್ರಾನೈಟ್ ಕ್ವಾರಿಗಳು ಇವೆ. ಇದರಿಂದ ನನಗೆ ಆದಾಯ ಬರುತ್ತಿದೆ. ಈಗಿನ ದೊಡ್ಡ ಆದಾಯ ಅಂದರೆ ಜಂಟಿ ಪಾಲುದಾರಿಕೆ ಹೊಂದಿದ್ದೇನೆ. ಇದರ ಆದಾಯ ಕೈ ಸೇರಿಲ್ಲ ಎಂದು ವಿಚಾರಣೆ ವೇಳೆ ಸಚಿವರು ತಿಳಿಸಿದ್ದಾರೆ. ಧವನಂ ಕನ್ಸ್ಟ್ರಕ್ಷನ್ಸ್ ಜತೆ ಪಾಲುದಾರಿಕೆ ಹೊಂದಿದ್ದೆ. 2005ರಲ್ಲಿ ಷೇರುಗಳ ಹಂಚಿಕೆ ಮಾಡಿಕೊಳ್ಳಲಾಗಿತ್ತು. ಮುಂಗಡ ಹಣದಲ್ಲಿ ಯಾವುದೇ ಲಾಭ ಪಡೆದುಕೊಳ್ಳಲಾಗಲಿಲ್ಲ. ಪ್ರಾಜೆಕ್ಟ್ ಮುಗಿದ ಬಳಿಕ ಲಾಭ ಬಂದರೆ ಆದಾಯ ತೆರಿಗೆ ಪಾವತಿ ಮಾಡಿಕೊಡುತ್ತೇನೆ. ನನಗೆ ಮತ್ತು ನನ್ನ ಪತ್ನಿಗೆ ಕೆಲ ರಿಯಲ್ ಎಸ್ಟೇಟ್ ಕಂಪನಿಗಳ ಒಪ್ಪಂದದಲ್ಲಿ 102.46 ಕೋಟಿ ರೂ. ಆದಾಯ ಬಂದಿದೆ. ಇದರ ಆದಾಯ ತೆರಿಗೆ ಪಾವತಿಸಬೇಕಾಗಿದೆ ಎಂದು ಸಚಿವರು ಐಟಿ ಅಧಿಕಾರಿಗಳಿಗೆ ತಿಳಿಸಿದ್ದರು ಎನ್ನಲಾಗಿದೆ.
ಆದಾಯ ತೆರಿಗೆ ಇಲಾಖೆಯ ಬಲೆಗೆ ಸಿಲುಕಿಕೊಂಡಿರುವ ನೀರಾವರಿ ಮತ್ತು ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಗೆ ಇದೀಗ ಮತ್ತಷ್ಟು ಟೆನ್ಶನ್ ಶುರುವಾಗಿದೆ.
ಐಟಿ ದಾಳಿಯಲ್ಲಿ ಸಿಕ್ಕ ಸಂಪತ್ತಿನ ದಾಖಲೆಗಳು ಮತ್ತು ಹಣದ ಬಗ್ಗೆ ಇನ್ನೂ ಸ್ಪಷ್ಟ ಉತ್ತರ ನೀಡಲಿಲ್ಲ. ಶೋಧದ ಬಳಿಕ ಡಿಕೆಶಿ ಕುಟುಂಬವನ್ನು ಕರೆಸಿಕೊಂಡಿದ್ದ ಅಧಿಕಾರಿಗಳು ನಾನಾ ಪ್ರಶ್ನೆಗಳನ್ನು ಕೇಳಿದ್ದರು. ಇಷ್ಟೊಂದು ಸಂಪತ್ತು ಎಲ್ಲಿಂದ ಬಂತು..? ಇಷ್ಟೊಂದು ಹಣ ಎಲ್ಲಿತ್ತು? ಅನ್ನೋದ್ರ ಬಗ್ಗೆ ಡಿಕೆಶಿ ಸಮರ್ಪಕ ಉತ್ತರ ನೀಡಿಲ್ಲ ಎಂದು ತಿಳಿದುಬಂದಿದೆ.
ಅಷ್ಟೇ ಅಲ್ಲದೇ ಕರ್ನಾಟಕ ವಿಧಾನಸಭಾ ಚುನವಾಣೆ ಸಂದರ್ಭದಲ್ಲಿ ಗುಜರಾತ್ ನ ಕಾಂಗ್ರೆಸ್ ಶಾಸಕರನ್ನು ಇರಿಸಲಾಗಿದ್ದ ಬಿಡದಿಯ ಈಗಲ್ ಟನ್ ರೆಸಾರ್ಟ್ ನಲ್ಲಿ ಡಿ.ಕೆ ಶಿವಕುಮಾರ್ ಚೀಟಿ ಹರಿಯುತ್ತಿದ್ದಾಗ ಐಟಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದರು. ಆ ಚೀಟಿಯಲ್ಲಿ ಏನಿತ್ತು..? ಅನ್ನೋದನ್ನ ಕೂಡ ಡಿಕೆಶಿ ಇದುವರೆಗೂ ಸ್ಪಷ್ಟಪಡಿಸಿಲ್ಲ.
ರೆಸಾರ್ಟ್ ನಲ್ಲಿ ಸಿಕ್ಕ ಹಾಳೆಗಳಲ್ಲಿ ಹಲವು ಲೆಕ್ಕಗಳನ್ನು ಬರೆಯಲಾಗಿದೆ. ಅವೆಲ್ಲವೂ ಏನು ಅನ್ನೋದು ಪ್ರಶ್ನೆಯಾಗಿ ಉಳಿದಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 2ರಂದು ಮತ್ತೊಮ್ಮೆ ವಿಚಾರಣೆ ಹಾಜರಾಗಿ ಉತ್ತರ ಕೊಡಿ ಎಂದು ಐಟಿ ಇಲಾಖೆ ಡಿಕೆಶಿಗೆ ಸೂಚಿಸಿದೆ.
ಈ ಹಿಂದೆ ಐಟಿ ಕೇಳಿದ್ದ ಹಲವು ಪ್ರಶ್ನೆಗಳಿಗೆ ಉತ್ತರಿಸಲು ಡಿ.ಕೆ.ಶಿವಕುಮಾರ್ ಸಮಯ ಕೇಳಿದ್ದರು. ಆದರೆ ಕೊಟ್ಟ ಸಮಯ ಮುಗಿದಿರುವ ಹಿನ್ನೆಲೆಯಲ್ಲಿ ವಿಚಾರಣೆ ಗೆ ಹಾಜರಾಗುವಂತೆ ಐಟಿ ನೋಟಿಸ್ ನೀಡಿತ್ತು. ಈಗ ಐಟಿ ಕೇಳಿರುವ ಎಲ್ಲಾ ಪ್ರಶ್ನೆಗಳಿಗೆ ಡಿ.ಕೆ.ಶಿವಕುಮಾರ್ ಉತ್ತರಿಸಲೇಬೇಕಾದ ಅನಿವಾರ್ಯತೆ ಬಂದಿದೆ. ಒಂದು ವೇಳೆ ಉತ್ತರಿಸದೇ ಹೋದರೆ ಮತ್ತೆ ಕೇಸ್ ದಾಖಲಾಗುವ ಸಾಧ್ಯತೆ ಇದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…