ಉಡುಪಿ: ‘ಸಚಿವ ಪ್ರಮೋದ್ ಮಧ್ವರಾಜ್ ಕಡಿಮೆ ಮೌಲ್ಯದ ಆಸ್ತಿಗೆ ಹೆಚ್ಚು ಸಾಲ ಪಡೆದಿರುವುದಕ್ಕೆ ನನ್ನ ಬಳಿ ದಾಖಲೆ ಇದೆ.ನಾನು ಕ್ಷಮೆ ಯಾಚಿಸುವುದಿಲ್ಲ’ ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅಬ್ರಾಹಂ ‘ ನನ್ನ ಮೇಲೆ ಪ್ರಮೋದ್ ಮಾನನಷ್ಟ ಮೊಕದ್ದಮೆ ದಾಖಲಿಸಲಿ. ಇಲ್ಲದಿದ್ದರೆ ನಾನೇ ದಾಖಲಿಸುತ್ತೇನೆ’ ಎಂದರು.
‘ಟಿ.ಜೆ. ಅಬ್ರಹಾಂ ಅವರು ಬಹಿರಂಗವಾಗಿ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ಅವರ ವಿರುದ್ಧ 10 ಕೋ.ರೂ. ಮಾನನಷ್ಟ ಪ್ರಕರಣ ಹೂಡಲಾಗುವುದು’ ಎಂದು ಸಚಿವ ಪ್ರಮೋದ್ ಮಧ್ವರಾಜ್ ಅವರು ಉಡುಪಿಯಲ್ಲಿ ಗುರುವಾರ ಮಾಧ್ಯಮಗಳಿಗೆ ತಿಳಿಸಿದ್ದರು.
ವಕೀಲ ಎಂ. ಶಾಂತಾರಾಮ್ ಶೆಟ್ಟಿ ಅವರ ಮೂಲಕ ಮಾ. 21ರಂದು ನೋಟಿಸು ಕಳುಹಿಸಲಾಗಿದ್ದು, 3 ದಿನಗಳ ಒಳಗೆ ಅವರು ಪತ್ರಿಕಾಗೋಷ್ಠಿ ನಡೆಸಿ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…