ರಾಜ್ಯ ನ್ಯೂಸ್

ಸಚಿವ ಸಂಪುಟ ವಿಸ್ತರಣೆಗೆ ಮೈತ್ರಿ ಸರ್ಕಾರದಲ್ಲಿ ಮತ್ತೆ ಶಾಸಕರ ಭಿನ್ನಾಭಿಪ್ರಾಯ : ಕಾಂಗ್ರೆಸ್ ತಮ್ಮ ನೆರವಿಗೆ ಬಂದ ಕುರುಬ ಸಮಾಜಕ್ಕೆ ಕೈ ಕೊಡಲು ಹೊರಟಿದೆಯೇ?

ರಾಜ್ಯ ರಾಜಕೀಯ ಚುನಾವಣೆಯ ನಂತರ ದಿನದಿನಕ್ಕೂ ಒಂದಲ್ಲಾ ಒಂದು ವಿಚಾರ ಅಥವಾ ವಿವಾದದಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು , ಎಲ್ಲರ ಗಮನವನ್ನು ತನ್ನತ್ತ ಸೆಳೆಯುತ್ತಲೇ ಇದೆ. ಇದೀಗ ಖಾತೆ ಹಂಚಿಕೆಯ ವಿಷಯ ಮುಂದೆ ಬಂದ ನಂತರ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ.ಕಾಂಗ್ರೆಸ್ ಪಕ್ಷಕ್ಕೆ ಮಾನ್ಯ ಮುಖ್ಯಮಂತ್ರಿಯವರಾದ ಕುಮಾರ ಸ್ವಾಮಿಯವರು ಇಂಧನ ಇಲಾಖೆಯ ಆಫರ್ ನೀಡಿರುವ ಮಾಹಿತಿ ಬಂದಿದೆ.

ಡಿಕೆಶಿ ಅವರಿಗಾಗಿ, ಇಂಧನ ಖಾತೆಯನ್ನು ಕಾಂಗ್ರೆಸ್ ಪಕ್ಷಕ್ಕೆ ಆಫರ್ ಮಾಡಿರುವುದಾಗಿ ಹಲವರ ಅಭಿಪ್ರಾಯವಾಗಿದೆ.ಕುಮಾರಸ್ವಾಮಿ ಅವರು ತಾವು ನೀಡುತ್ತಿರುವ ಈ ಆಫರ್ ಬಗ್ಗೆ ರಾಹುಲ್ ಗಾಂಧಿಯವರೊಂದಿಗೆ ಚರ್ಚಿಸುವುದಾಗಿಯೂ ಹೇಳಿಕೆ ನೀಡಲಾಗಿದೆ. ಇದರ ಹಿಂದಿನ ಉದ್ದೇಶ ವಕ್ಕಲಿಗ ಸಮಯದಾಯದ ಬೆಂಬಲ ಪಡೆಯುವುದಾಗಿದೆ. ಆದರೆ ಇಲ್ಲಿ ಅಂದರೆ ಈ ಬಾರಿ ಕಾಂಗ್ರೆಸ್ ಗೆಲುವಿಗೆ ಕಾರಣವಾದ ಕುರುಬ ಸಮಾಜವನ್ನು ಕಡೆಗಣಿಸಲಾಗಿದೆ ಎಂದು ಆ ಸಮುದಾಯದ ಶಾಸಕರು ತಮ್ಮ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.ಖಾತೆ ಹಂಚಿಕೆಯ ವಿಷಯದಲ್ಲಿ ಸಿದ್ಧರಾಮಯ್ಯನವರೇ ತಮ್ಮ ಕುರುಬ ಸಮಾಜದ ಶಾಸಕರಿಗೆ ಮಂತ್ರಿ ಪದವಿಗೆ ಗಮನ ನೀಡುತ್ತಿಲ್ಲ ಎಂಬ ಮಾತುಗಳು ಕೇಳಿ ಬಂದಿದ್ದು, ಕಾಂಗ್ರೆಸ್ ತಮ್ಮ ನೆರವಿಗೆ ಬಂದ ಕುರುಬ ಸಮಾಜಕ್ಕೆ ಕೈ ಕೊಡಲು ಹೊರಟಿದೆಯೇ? ಎಂಬುದು ಹಲವರ ಅನುಮಾನವಾಗಿದೆ.

Vishwa News 24

Recent Posts

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ – vishwanews24

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…

20 minutes ago

ಉಡುಪಿ : ಜೂ.12 ರಂದು ನೇರ ಸಂದರ್ಶನ – vishwanews24

ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…

27 minutes ago

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ಭೇಟಿ – vishwanews24

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…

33 minutes ago

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ – vishwanews24

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…

55 minutes ago

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ – vishwanews24

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…

2 hours ago

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ – vishwanews24

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…

2 hours ago