ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಸಿಎಂ ನಾಯಕತ್ವ ಬದಲಾಗದಿದ್ದರೂ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ರಚನೆ ಆಗುವುದು ಬಹುತೇಕ ಖಚಿತ ಎಂಬುದು ಆ ಪಕ್ಷದ ಪ್ರಮುಖ ನಾಯಕರ ಮಾತುಗಳಿಂದಲೇ ಖಚಿತವಾಗುತ್ತಿದೆ.
ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರು ಸಂಪುಟ ಸರ್ಜರಿ ಮಾಡಿಯೇ ದೆಹಲಿಗೆ ತೆರಳುತ್ತಾರೆ ಅಥವಾ ದೆಹಲಿಗೆ ಹೋದ ಕೂಡಲೇ ತೆಗೆದುಕೊಳ್ಳುತ್ತಾರೆ ಎಂದು ಹೇಳಲಾಗುತ್ತಿದೆ.
ಅದಕ್ಕೆ ಪುಷ್ಟಿ ನೀಡುವಂತೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಕೂಡ ಹೇಳಿದ್ದಾರೆ.
ಅಮಿತ್ ಶಾ ಅವರನ್ನು ನಾನು ಇನ್ನೂ ಭೇಟಿ ಮಾಡಿಲ್ಲ, ಸಚಿವ ಸಂಪುಟ ವಿಸ್ತರಣೆ ಇನ್ನೆರಡು-ಮೂರು ದಿನಗಳಲ್ಲಿ ಆಗಬುಹುದು ಎಂಬ ವಿಶ್ವಾಸ ನನಗಿದೆ. ಆ ಬಗ್ಗೆ ಅಂತಿಮ ತೀರ್ಮಾನವನ್ನು ಅಮಿತ್ ಶಾ ತೆಗೆದುಕೊಂಡೇ ಇಲ್ಲಿಗೆ ಬಂದಿದ್ದಾರೆ ಎಂದು ನಾನು ಭಾವಿಸಿದ್ದೇನೆ ಎಂದು ಯಡಿಯೂರಪ್ಪ ಬೆಂಗಳೂರಿನಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡುತ್ತಾ ಹೇಳಿದರು.
ಸಿಎಂ ಬದಲಾವಣೆ ಇಲ್ಲ: ಸಚಿವ ಸಂಪುಟ ವಿಸ್ತರಣೆ ಆಗುತ್ತದೆಯೇ ಹೊರತು ಸಿಎಂ ಬದಲಾವಣೆ ಇಲ್ಲ, ಅವುಗಳೆಲ್ಲ ಊಹಾಪೋಹಗಳಷ್ಟೆ ಎಂದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…