ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಸಿಎಂ ನಾಯಕತ್ವ ಬದಲಾಗದಿದ್ದರೂ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ರಚನೆ ಆಗುವುದು ಬಹುತೇಕ ಖಚಿತ ಎಂಬುದು ಆ ಪಕ್ಷದ ಪ್ರಮುಖ ನಾಯಕರ ಮಾತುಗಳಿಂದಲೇ ಖಚಿತವಾಗುತ್ತಿದೆ.
ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರು ಸಂಪುಟ ಸರ್ಜರಿ ಮಾಡಿಯೇ ದೆಹಲಿಗೆ ತೆರಳುತ್ತಾರೆ ಅಥವಾ ದೆಹಲಿಗೆ ಹೋದ ಕೂಡಲೇ ತೆಗೆದುಕೊಳ್ಳುತ್ತಾರೆ ಎಂದು ಹೇಳಲಾಗುತ್ತಿದೆ.
ಅದಕ್ಕೆ ಪುಷ್ಟಿ ನೀಡುವಂತೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಕೂಡ ಹೇಳಿದ್ದಾರೆ.
ಅಮಿತ್ ಶಾ ಅವರನ್ನು ನಾನು ಇನ್ನೂ ಭೇಟಿ ಮಾಡಿಲ್ಲ, ಸಚಿವ ಸಂಪುಟ ವಿಸ್ತರಣೆ ಇನ್ನೆರಡು-ಮೂರು ದಿನಗಳಲ್ಲಿ ಆಗಬುಹುದು ಎಂಬ ವಿಶ್ವಾಸ ನನಗಿದೆ. ಆ ಬಗ್ಗೆ ಅಂತಿಮ ತೀರ್ಮಾನವನ್ನು ಅಮಿತ್ ಶಾ ತೆಗೆದುಕೊಂಡೇ ಇಲ್ಲಿಗೆ ಬಂದಿದ್ದಾರೆ ಎಂದು ನಾನು ಭಾವಿಸಿದ್ದೇನೆ ಎಂದು ಯಡಿಯೂರಪ್ಪ ಬೆಂಗಳೂರಿನಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡುತ್ತಾ ಹೇಳಿದರು.
ಸಿಎಂ ಬದಲಾವಣೆ ಇಲ್ಲ: ಸಚಿವ ಸಂಪುಟ ವಿಸ್ತರಣೆ ಆಗುತ್ತದೆಯೇ ಹೊರತು ಸಿಎಂ ಬದಲಾವಣೆ ಇಲ್ಲ, ಅವುಗಳೆಲ್ಲ ಊಹಾಪೋಹಗಳಷ್ಟೆ ಎಂದರು.
ಕಾಪು ಬೀಚ್ ನಲ್ಲಿ ತೀವ್ರ ಕಡಲು ಕೊರೆತ : ಸಾರ್ವಜನಿಕರು ಬೀಚ್ ಗೆ ತೆರಳದಂತೆ ಜಿಲ್ಲಾಡಳಿತ ಮನವಿ ಉಡುಪಿ :…
ಮಲ್ಪೆ ಬಂದರಿನಲ್ಲಿ ಸುಗಮ ಮೀನುಗಾರಿಕಾ ಚಟುವಟಿಕೆಗೆ ಅಗತ್ಯ ಕ್ರಮವಹಿಸಿ : ಅಧಿಕಾರಿಗಳಿಗೆ ಯಶ್ಪಾಲ್ ಸುವರ್ಣ ಸೂಚನೆ ಉಡುಪಿ: ಮಲ್ಪೆ ಬಂದರಿನಲ್ಲಿ…
ಮಹಾರಾಷ್ಟ್ರದಲ್ಲಿ ನಕಲಿ ಪನ್ನೀರ್ ಸಂಪೂರ್ಣ ನಿಷೇಧ : ಮಾರಾಟ ಮಾಡಿದರೆ ಜೈಲು ಶಿಕ್ಷೆ,ಭಾರಿ ದಂಡ ಮುಂಬೈ : ಆಹಾರದಲ್ಲಿ ಹೆಚ್ಚುತ್ತಿರುವ…
ಕಾಕ್ರೋಚ್ ಜನತಾ ಪಾರ್ಟಿ ಸದ್ಯಕ್ಕೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ : ಅಭಿಜೀತ್ ದೀಪ್ಕೆ ಮುಂಬೈ : ಕಾಕ್ರೋಚ್ ಜನತಾ ಪಾರ್ಟಿ…
ಉದ್ಯಾವರ : ಪಾಪನಾಶಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಉಡುಪಿ: ಉದ್ಯಾವರದ ಪಿತ್ರೋಡಿಯ ಪಾಪನಾಶಿನಿ ನದಿಯಲ್ಲಿ ಆಗಸ್ಟ್ 5…
ಕಾರ್ಕಳ ರೆಂಜಾಳದಲ್ಲಿ ಭೂಕುಸಿತದ ಆತಂಕ : ಡಿಸಿ ಸ್ವರೂಪಾ ಟಿ.ಕೆ ಭೇಟಿ, ಪರಿಶೀಲನೆ ಉಡುಪಿ: ಕಾರ್ಕಳ ತಾಲೂಕಿನಲ್ಲಿ ಕಳೆದ ಎರಡು…