Featured

ಸಚಿವ ಸತೀಶ್‌ ಜಾರಕಿಹೊಳಿ ನಿವಾಸಗಳ ಮೇಲೆ ಇ.ಡಿ ದಾಳಿ – vishwanews24

ಅಬಕಾರಿ ಹಗರಣ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣ

ಸಚಿವ ಸತೀಶ್‌ ಜಾರಕಿಹೊಳಿ ನಿವಾಸಗಳ ಮೇಲೆ ಇ.ಡಿ ದಾಳಿ

ಬೆಂಗಳೂರು: ಅಬಕಾರಿ ಹಗರಣ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸಗಳು ಸೇರಿದಂತೆ ಹಲವು ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

ಸಚಿವರು, ಅವರ ಆಪ್ತರು ಹಾಗೂ ಬೆಂಬಲಿಗರ ಮನೆಗಳು ಮತ್ತು ಕಚೇರಿಗಳನ್ನು ಗುರಿಯಾಗಿಸಿಕೊಂಡು ಏಕಕಾಲಕ್ಕೆ ಸುಮಾರು 14 ಕಡೆಗಳಲ್ಲಿ ಇ.ಡಿ. ಅಧಿಕಾರಿಗಳ ತಂಡಗಳು ಶೋಧ ನಡೆಸುತ್ತಿವೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ :

ಕಳೆದ ಜೂನ್ ನಲ್ಲಿ ಸತೀಶ್ ಜಾರಕಿಹೊಳಿ ಅವರ ಆಪ್ತ ಸಂಬಂಧಿ ಹಾಗೂ ಅಬಕಾರಿ ಇಲಾಖೆಯ ಅಧಿಕಾರಿಯಾಗಿದ್ದ ವೈ. ಮಂಜುನಾಥ್ ಅವರ ನಿವಾಸದ ಮೇಲೆ ED ಅಧಿಕಾರಿಗಳು ದಾಳಿ ನಡೆಸಿದ್ದರು. ಅದರ ಮುಂದುವರಿದ ಭಾಗವಾಗಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ, ಬಾರ್ ಲೈಸೆನ್ಸ್ ಅಕ್ರಮ ಹಾಗೂ ಹಣಕಾಸು ವ್ಯವಹಾರಗಳ ಸಂಪರ್ಕದ ಹಿನ್ನೆಲೆಯಲ್ಲಿ ಈ ಶೋಧ ನಡೆಸಲಾಗುತ್ತಿದೆ. ಮನೆಗಳಲ್ಲಿರುವ ಪ್ರಮುಖ ದಾಖಲೆಗಳು, ಆಸ್ತಿ ಪತ್ರಗಳು ಹಾಗೂ ಬ್ಯಾಂಕ್ ಖಾತೆಗಳ ವಿವರಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ತನಿಖೆಗೆ ಸಂಬಂಧಿಸಿದ ಪ್ರಮುಖ ದಾಖಲೆಗಳು ಹಾಗೂ ಇತರ ಸಾಕ್ಷ್ಯಗಳನ್ನು ವಶಕ್ಕೆ ಪಡೆಯುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ :

ಈ ಹಿನ್ನೆಲೆಯಲ್ಲಿ ಸಚಿವರ ನಿವಾಸದ ಸುತ್ತಮುತ್ತ ಬಿಗಿ ಭದ್ರತೆ ಕಲ್ಪಿಸಲಾಗಿದೆ.

Vishwa News 24

Recent Posts

ಸತೀಶ್​​ ಜಾರಕಿಹೊಳಿಗೆ ಇಡಿ ದಾಳಿ ರಾಜಕೀಯ ಪ್ರೇರಿತ ; ಅವರು ಯಾವುದೇ ತಪ್ಪು ಮಾಡಿಲ್ಲ : ಸಿಎಂ ಡಿಕೆಶಿ – vishwanews24

ಸತೀಶ್​​ ಜಾರಕಿಹೊಳಿ ಅವರ ಬೆಳವಣಿಗೆ ಬಿಜೆಪಿಯವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ.. ನಮ್ಮ ಕುಟುಂಬಸ್ಥರು ವಿದೇಶದಲ್ಲಿ ಬಿಸಿನೆಸ್ ಮಾಡುವುದು ತಪ್ಪಾ?.. ಅವರ ಜೊತೆ…

51 minutes ago

ಬೆಂಗಳೂರು: ರೀಲ್ಸ್ ವಿಚಾರಕ್ಕೆ ಗಲಾಟೆ; ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ – vishwanews24

ಬೆಂಗಳೂರು: ರೀಲ್ಸ್ ವಿಚಾರಕ್ಕೆ ಗಲಾಟೆ; ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಬೆಂಗಳೂರು: ರೀಲ್ಸ್‌ ನೋಡುತ್ತಿದ್ದ ವಿಚಾರಕ್ಕೆ ಪತ್ನಿಯನ್ನು ಕೊಂದು ಪತಿ…

58 minutes ago

ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ – vishwanews24

ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ ;  ಪ್ರಕರಣಕ್ಕೆ ಮಹತ್ವದ ತಿರುವು ಬೆಂಗಳೂರು: ಬೆಂಗಳೂರಿನ…

1 hour ago

ಉಡುಪಿ: ಪಡಿತರ ಚೀಟಿದಾರರಿಗೆ ಇ-ಕೆವೈಸಿ ಕಡ್ಡಾಯ ; ಸೆಪ್ಟೆಂಬರ್ 30 ಕೊನೆಯ ದಿನ – vishwanews24

ಉಡುಪಿ: ಪಡಿತರ ಚೀಟಿದಾರರಿಗೆ ಇ-ಕೆವೈಸಿ ಕಡ್ಡಾಯ ; ಸೆಪ್ಟೆಂಬರ್ 30 ಕೊನೆಯ ದಿನ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ನ್ಯಾಯಬೆಲೆ…

2 hours ago

ಮೈಸೂರು ಕಂಬಳದ ಕುರಿತು ಇದುವರೆಗೆ ಯಾವುದೇ ಅಧಿಕೃತ ಸಂವಹನ ನಡೆದಿಲ್ಲ : ದೇವಿಪ್ರಸಾದ್ ಶೆಟ್ಟಿ ಬೆಳಪು – vishwanews24

ಮೈಸೂರು ಕಂಬಳಕ್ಕೆ ಅಧಿಕೃತ ಆಹ್ವಾನ ಬಂದ ಬಳಿಕವಷ್ಟೇ ಅಂತಿಮ ನಿರ್ಧಾರ: ದೇವಿಪ್ರಸಾದ್ ಶೆಟ್ಟಿ ಬೆಳಪು ಮೂಡುಬಿದಿರೆ: ಮೈಸೂರಿನಲ್ಲಿ ಕಂಬಳ ಆಯೋಜಿಸುವ…

2 hours ago

ಬೆಂಗಳೂರು: ಆಹಾರ ಮತ್ತು ದಿನಬಳಕೆ ವಸ್ತುಗಳ ಮಾರಾಟ ಅಂಗಡಿಗಳ ಮೇಲೆ ಆರೋಗ್ಯ ಅಧಿಕಾರಿಗಳ ದಾಳಿ – vishwanews24

ಬೆಂಗಳೂರು: ಆಹಾರ ಮತ್ತು ದಿನಬಳಕೆ ವಸ್ತುಗಳ ಮಾರಾಟ ಅಂಗಡಿಗಳ ಮೇಲೆ ಆರೋಗ್ಯ ಅಧಿಕಾರಿಗಳ ದಾಳಿ ಬೆಂಗಳೂರು: ನಗರದ ವಿವಿಧೆಡೆ ಆಹಾರ…

2 hours ago