Featured

ಸಚಿವ ಸುನಿಲ್‌ ಕುಮಾರ್‌ ವಿರುದ್ಧ ಅವಹೇಳನಕಾರಿ ಬರಹ : ಆರೋಪಿಗಳಿಗೆ ದಂಡ ವಿಧಿಸಿದ ಕೋರ್ಟ್‌ – Vishwanews24

ಸಚಿವ ಸುನಿಲ್‌ ಕುಮಾರ್‌ ವಿರುದ್ಧ ಅವಹೇಳನಕಾರಿ ಬರಹ : ಆರೋಪಿಗಳಿಗೆ ದಂಡ ವಿಧಿಸಿದ ಕೋರ್ಟ್‌

ಬೆಂಗಳೂರು: ಇಂಧನ, ಕನ್ನಡ ಮತ್ತು ಸಂಸ್ಕ್ರತಿ ಸಚಿವ ವಿ ಸುನಿಲ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಬರಹ ಪ್ರಕಟಿಸಿದ್ದ ಕಾರ್ಕಳದ ಇಬ್ಬರು ಸ್ಥಳೀಯ ಮುಖಂಡರಿಗೆ ಬೆಂಗಳೂರಿನ ೧೨ ನೇ ಸಿಟಿ ಸಿವಿಲ್ ನ್ಯಾಯಾಲಯ ದಂಡ ವಿಧಿಸುವ ಜತೆಗೆ ಬಹಳ ಬೇಷರತ್ ಕ್ಷಮೆಯಾಚನೆಗೆ ಸೂಚಿಸಿದೆ.

ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಕಾರ್ಕಳದ ಯೋಗೇಶ್ ನಯನಾ ಇನ್ನಾ ಹಾಗೂ ರಾಧಾಕೃಷ್ಣ ನಾಯಕ್ ಎಂಬುವರು ಸುನಿಲ್ ಕುಮಾರ್ ವಿರುದ್ಧ ಫೇಸಬುಕ್ ಹಾಗೂ ಇತರೆ ಜಾಲತಾಣದಲ್ಲಿ ಅವಹೇಳನಕಾರಿ, ಸುಳ್ಳು ಹಾಗೂ ದುರುದ್ದೇಶಪೂರಿತ ಬರಹವನ್ನು ಪ್ರಕಟಿಸಿದ್ದರು.

ಈ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ನ್ಯಾಯಾಲಯದ ಮೊರೆ ಹೋದ ಸುನಿಲ್ ಕುಮಾರ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳು ಬೇಷರತ್ ಕ್ಷಮೆ ಯಾಚಿಸುವ ಜತೆಗೆ ತಲಾ ೨೫ ಸಾವಿರ ರೂ. ದಂಡ ಸಲ್ಲಿಸಬೇಕು. ಜತೆಗೆ ಆಧಾರ ರಹಿತ, ಅಪ್ರಮಾಣಿಕೃತ, ದುರುದ್ದೇಶಪೂರಿತ ಬರಹಗಳನ್ನು ಜಾಲತಾಣದಲ್ಲಿ ಪ್ರಕಟಿಸದಂತೆ ಪ್ರತಿಬಂಧ ವಿಧಿಸಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ‌ ನೀಡಿರುವ ಸಚಿವ ಸುನಿಲ್ ಕುಮಾರ್, ” ನನ್ನ ವಿರುದ್ಧ ಜಾಲಾತಾಣದಲ್ಲಿ ಕೆಲವರು ವ್ಯವಸ್ಥಿತ ಅಪಪ್ರಚಾರ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದೆ. ಈಗ ನನ್ನ ಪರ ತೀರ್ಪು ಬಂದಿದೆ. ಮಾನಹಾನಿಕಾರಿ ಬರಹಗಳನ್ನು ಜಾಲತಾಣದಲ್ಲಿ ಪ್ರಕಟಿಸುವವರಿಗೆ ಇದೊಂದು ಪಾಠ ಎಂದು ಹೇಳಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

15 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

15 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago