Featured

ಸಚಿವ ಸುನಿಲ್‌ ಕುಮಾರ್‌ ವಿರುದ್ಧ ಅವಹೇಳನಕಾರಿ ಬರಹ : ಆರೋಪಿಗಳಿಗೆ ದಂಡ ವಿಧಿಸಿದ ಕೋರ್ಟ್‌ – Vishwanews24

ಸಚಿವ ಸುನಿಲ್‌ ಕುಮಾರ್‌ ವಿರುದ್ಧ ಅವಹೇಳನಕಾರಿ ಬರಹ : ಆರೋಪಿಗಳಿಗೆ ದಂಡ ವಿಧಿಸಿದ ಕೋರ್ಟ್‌

ಬೆಂಗಳೂರು: ಇಂಧನ, ಕನ್ನಡ ಮತ್ತು ಸಂಸ್ಕ್ರತಿ ಸಚಿವ ವಿ ಸುನಿಲ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಬರಹ ಪ್ರಕಟಿಸಿದ್ದ ಕಾರ್ಕಳದ ಇಬ್ಬರು ಸ್ಥಳೀಯ ಮುಖಂಡರಿಗೆ ಬೆಂಗಳೂರಿನ ೧೨ ನೇ ಸಿಟಿ ಸಿವಿಲ್ ನ್ಯಾಯಾಲಯ ದಂಡ ವಿಧಿಸುವ ಜತೆಗೆ ಬಹಳ ಬೇಷರತ್ ಕ್ಷಮೆಯಾಚನೆಗೆ ಸೂಚಿಸಿದೆ.

ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಕಾರ್ಕಳದ ಯೋಗೇಶ್ ನಯನಾ ಇನ್ನಾ ಹಾಗೂ ರಾಧಾಕೃಷ್ಣ ನಾಯಕ್ ಎಂಬುವರು ಸುನಿಲ್ ಕುಮಾರ್ ವಿರುದ್ಧ ಫೇಸಬುಕ್ ಹಾಗೂ ಇತರೆ ಜಾಲತಾಣದಲ್ಲಿ ಅವಹೇಳನಕಾರಿ, ಸುಳ್ಳು ಹಾಗೂ ದುರುದ್ದೇಶಪೂರಿತ ಬರಹವನ್ನು ಪ್ರಕಟಿಸಿದ್ದರು.

ಈ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ನ್ಯಾಯಾಲಯದ ಮೊರೆ ಹೋದ ಸುನಿಲ್ ಕುಮಾರ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳು ಬೇಷರತ್ ಕ್ಷಮೆ ಯಾಚಿಸುವ ಜತೆಗೆ ತಲಾ ೨೫ ಸಾವಿರ ರೂ. ದಂಡ ಸಲ್ಲಿಸಬೇಕು. ಜತೆಗೆ ಆಧಾರ ರಹಿತ, ಅಪ್ರಮಾಣಿಕೃತ, ದುರುದ್ದೇಶಪೂರಿತ ಬರಹಗಳನ್ನು ಜಾಲತಾಣದಲ್ಲಿ ಪ್ರಕಟಿಸದಂತೆ ಪ್ರತಿಬಂಧ ವಿಧಿಸಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ‌ ನೀಡಿರುವ ಸಚಿವ ಸುನಿಲ್ ಕುಮಾರ್, ” ನನ್ನ ವಿರುದ್ಧ ಜಾಲಾತಾಣದಲ್ಲಿ ಕೆಲವರು ವ್ಯವಸ್ಥಿತ ಅಪಪ್ರಚಾರ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದೆ. ಈಗ ನನ್ನ ಪರ ತೀರ್ಪು ಬಂದಿದೆ. ಮಾನಹಾನಿಕಾರಿ ಬರಹಗಳನ್ನು ಜಾಲತಾಣದಲ್ಲಿ ಪ್ರಕಟಿಸುವವರಿಗೆ ಇದೊಂದು ಪಾಠ ಎಂದು ಹೇಳಿದ್ದಾರೆ.

Vishwa News 24

Recent Posts

ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ – vishwanews24

ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ ಉಡುಪಿ: ಇಂದ್ರಾಳಿ…

5 hours ago

ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ – vishwanews24

ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು…

6 hours ago

ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ  ಕಾಂಗ್ರೆಸ್ ಪ್ರತಿಭಟನೆ – vishwanews24

ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ  ಕಾಂಗ್ರೆಸ್ ಪ್ರತಿಭಟನೆ ಕೇಂದ್ರ ಸರಕರದ ಅಸ್ಪಷ್ಟ ವಿದೇಶಾಂಗ…

6 hours ago

ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ ಉಡುಪಿ : ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳನ್ನು -ಉತ್ತರ ಕನ್ನಡ,…

6 hours ago

ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ -vishwanews24

ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ ಶಿರ್ವ : ಆತ್ಮ ನಿರ್ಭರ ಭಾರತ ರಾಷ್ಟ್ರೀಯ ಪ್ರಶಸ್ತಿಗೆ…

7 hours ago

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ -vishwanews24

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ…

7 hours ago