ಬೆಂಗಳೂರು, ಜುಲೈ 8: ಕಳೆದ ತಿಂಗಳಷ್ಟೇ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಮುಳಬಾಗಿಲು ಪಕ್ಷೇತರ ಶಾಸಕ ಎಚ್ ನಾಗೇಶ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಬಿಜೆಪಿಗೆ ಬೆಂಬಲ ಘೋಷಿಸಿದ್ದಾರೆ.
ಸರ್ಕಾರದ ಬುಡ ಅಲುಗಾಡಲು ಆರಂಭಿಸಿರುವುದರಿಂದ ಮತ್ತು ಅತೃಪ್ತ ಶಾಸಕರ ಗುಂಪಿನಲ್ಲಿ ತಮಗೆ ಸಚಿವ ಸ್ಥಾನ ದೊರೆತಿರುವುದಕ್ಕೆ ಅಸಮಾಧಾನ ಹೆಚ್ಚಾಗಿದೆ ಎಂಬ ಕಾರಣಗಳಿಂದ ಅವರು ರಾಜೀನಾಮೆ ನೀಡಿ ಸಮ್ಮಿಶ್ರ ಸರ್ಕಾರದಿಂದ ಹೊರಬರಲು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ.
ಸಮ್ಮಿಶ್ರ ಸರಕಾರದಲ್ಲಿ ಸಣ್ಣ ಕೈಗಾರಿಕೆ ಸಚಿವರಾಗಿ 20 ದಿನಗಳ ಹಿಂದೆ ಅಧಿಕಾರ ಸ್ವೀಕರಿಸಿದ್ದ ನಾಗೇಶ್ ಇಂದು ಬೆಳಗ್ಗೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಆಯೋಜಿಸಿದ್ದ ಉಪಾಹಾರ ಸಭೆಯಲ್ಲಿ ಭಾಗವಹಿಸಿರಲಿಲ್ಲ. ಅವರು ಇಂದು ಬೆಳಗ್ಗೆ ನೇರವಾಗಿ ರಾಜಭವನಕ್ಕೆ ತೆರಳಿ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಜೊತೆಗೆ ತಾನು ಬಿಜೆಪಿಯನ್ನು ಬೆಂಬಲಿಸುವುದಾಗಿ ಪತ್ರವೊಂದನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ.
ನಾಗೇಶ್ ಅವರಿಗೆ ಸಣ್ಣ ಕೈಗಾರಿಕೆಗಳ ಸಚಿವ ಸ್ಥಾನವನ್ನು ನೀಡಲಾಗಿತ್ತು. ಆದರೆ, ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಸಮ್ಮಿಶ್ರ ಸರ್ಕಾರಕ್ಕೆ ಮತ್ತೊಂದು ಆಘಾತ ನೀಡಿದೆ.
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…