ಬೆಂಗಳೂರು, : ರಾಜಕೀಯಕ್ಕೆ ಬಂದ ಮಹಿಳೆಯರನ್ನು ಸಂಶಯದಿಂದ ನೋಡುವ ರೀತಿಯಲ್ಲಿ ಸಚಿವ ಸುಧಾಕರ್ ಹೇಳಿಕೆ ನೀಡಿದ್ದು, ಇದರ ವಿರುದ್ಧ ಮಹಿಳಾ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಚಿವ ಸುಧಾಕರ್ ಅವರು ಸಚಿವ ಸ್ಥಾನದಿಂದ ಕೆಳಗಿಳಿಯಬೇಕೆಂದು ಒತ್ತಾಯಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ. ಪುಷ್ಪಾ ಅಮರನಾಥ್, ಮಹಿಳೆ ರಾಜಕೀಯಕ್ಕೆ ಯಾಕೆ ಬರಬೇಕೆಂಬ ಪ್ರಶ್ನೆ ಹಿಂದೆ ಇತ್ತು. ಎಲ್ಲಾ ಪಕ್ಷದಲ್ಲೂ ಶಾಸಕಿಯರಿದ್ದಾರೆ. ಉತ್ತಮ ಕಾರ್ಯ ನಿರ್ವಹಿಸುವ ಮೂಲಕ ಗಮನ ಸೆಳೆದುಕೊಂಡಿದ್ದಾರೆ. ಆದರೆ, ಜನಪ್ರತಿನಿಧಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ಆಕ್ಷೇಪನಾರ್ಹವಾಗಿದೆ. ಇಂತಹ ಹೇಳಿಕೆ ನೀಡಿರುವ ಸಚಿವ ಸುಧಾಕರ್ ಸಚಿವರಲ್ಲ, ಶಾಸಕರಾಗಿ ಇರಲು ಕೂಡ ಅರ್ಹರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನ್ಯಾಯಾಲಯದ ಮೊರೆ ಹೋಗಿರುವ ಎಲ್ಲಾ ಆರು ಸಚಿವರು ನೈತಿಕತೆ, ಯೋಗ್ಯತೆ ಕಳೆದಿದ್ದೀರಿ. ನೀವು ತಪ್ಪು ಮಾಡಿ ಕೋರ್ಟ್ ಮೊರೆ ಹೋಗಿದ್ದೀರಿ. ಅವರು ಮಂಚಕ್ಕೆ ಬೆಲೆ ಕೊಡುವ ನಾಲಾಯಕ್ ಸಚಿವ ಎಂದು ಕಿಡಿಕಾರಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…