Featured

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಹೈಕಮಾಂಡ್ ಶಾಕ್ : ಆಗಸ್ಟ8 ರ ಬಳಿಕ ಸಂಪುಟ ರಚನೆ -Vishwanews24

ಬೆಂಗಳೂರು, :ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಹೈಕಮಾಂಡ್ ಶಾಕ್ ನೀಡಿದ್ದು, ಆಗಸ್ಟ8 ರ ಬಳಿಕ ಸಂಪುಟ ರಚನೆ ಮಾಡಬೇಕು ಎಂದು ತಿಳಿಸಿದ್ದಾರೆ.

ಮೈತ್ರಿ ಸರ್ಕಾರ ಪತನವಾದ ಬಳಕ, ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಇದೀಗ ಹಲವು ಶಾಸಕರಲ್ಲಿ ಸಚಿವ ಸ್ಥಾನದ ಆಸೆಯು ಚಿಗುರೊಡಿದೆ. ಇದರಿಂದಾಗಿ ಸಚಿವ ಸ್ಥಾನ ಅಲಂಕರಿಸಲು ಶಾಸಕರು ತುದಿಗಾಲಲ್ಲಿ ನಿಂತಿದ್ದು, ಸಿಎಂಗೆ ಯಾರನ್ನು ಆಯ್ಕೆ ಮಾಡುವುದು ಎಂಬ ತಲೆನೋವು ಆವರಿಸಿದೆ. ಇದರ ನಡುವೆ ತವಕಿಸುತ್ತಿದ್ದ ಆಕಾಂಕ್ಷಿಗಳಿಗೆ ಹೈಕಮಾಂಡ್ ಶಾಕ್ ನೀಡುವ ಮೂಲಕ ಬ್ರೇಕ್ ಹಾಕಿದ್ದಾರೆ.

ಸಚಿವ ಸ್ಥಾನದ ಆಕಾಂಕ್ಷಿಗಳು ಸಹ ಹೈಕಮಾಂಡ್ ಮಟ್ಟದಲ್ಲಿ ಒಳಗೊಳಗೆ ಲಾಬಿ ನಡೆಸಲು ದೆಹಲಿಗೆ ಹೊರಡುವ ತಯಾರು ನಡೆಸಿದ್ದರು. ಆದರೆ ಈ ವಿಷಯ ಅರಿತು ಆಗಸ್ಟ್ 7 ರವರೆಗೂ ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬೇರೆ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಹಾಗಾಗಿ ರಾಜ್ಯ ನಾಯಕರು ದೆಹಲಿಗೆ ಬರೋದ ಬೇಡ ಎಂಬ ಸಂದೇಶವನ್ನು ರವಾನಿಸಿದೆ. ಇದರಿಂದ ಸಿಎಂ ಸೇರಿದಂತೆ ಎಲ್ಲರಿಗೂ ಶಾಕಿಂಗ್ ನ್ಯೂಸ್‌ನ್ನು ನೀಡಿದೆ.

ಆಗಸ್ಟ್ 8 ರ ಬಳಿಕವೇ ಸಂಪುಟ ರಚನೆ ಮಾಡಬೇಕು ಎಂದು ಹೈಕಮಾಂಡ್ ತಿಳಿಸಿದ್ದು ಈ ಬಗ್ಗೆ ಬಿಜೆಪಿ ಮೂಲಗಳು ತಿಳಿಸಿವೆ. ತಮ್ಮದೇ ಸಮುದಾಯದ ಆಪ್ತರ ತಲೆನೋವಾಗಿದೆ. ಯಡಿಯೂರಪ್ಪ ಕ್ಯಾಬಿನೆಟ್ ಸೇರಲು ಲಿಂಗಾಯತ ಸಮುದಾಯದ ಹಲವಾರು ಆಂಕಾಕ್ಷಿಗಳು ಇದ್ದು, ಹೀಗಾಗಿ ಯಾರಿಗೆ ಸಚಿವ ಸ್ಥಾನ ಕೊಡುವುದು, ಯಾರಿಗೆ ಬಿಡುವುದು ಅನ್ನೋ ಧರ್ಮ ಸಂಕಟ ಬಿಎಸ್‌ವೈಗೆ ಎದುರಾಗಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago