ಬೆಂಗಳೂರು, :ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಹೈಕಮಾಂಡ್ ಶಾಕ್ ನೀಡಿದ್ದು, ಆಗಸ್ಟ8 ರ ಬಳಿಕ ಸಂಪುಟ ರಚನೆ ಮಾಡಬೇಕು ಎಂದು ತಿಳಿಸಿದ್ದಾರೆ.
ಮೈತ್ರಿ ಸರ್ಕಾರ ಪತನವಾದ ಬಳಕ, ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಇದೀಗ ಹಲವು ಶಾಸಕರಲ್ಲಿ ಸಚಿವ ಸ್ಥಾನದ ಆಸೆಯು ಚಿಗುರೊಡಿದೆ. ಇದರಿಂದಾಗಿ ಸಚಿವ ಸ್ಥಾನ ಅಲಂಕರಿಸಲು ಶಾಸಕರು ತುದಿಗಾಲಲ್ಲಿ ನಿಂತಿದ್ದು, ಸಿಎಂಗೆ ಯಾರನ್ನು ಆಯ್ಕೆ ಮಾಡುವುದು ಎಂಬ ತಲೆನೋವು ಆವರಿಸಿದೆ. ಇದರ ನಡುವೆ ತವಕಿಸುತ್ತಿದ್ದ ಆಕಾಂಕ್ಷಿಗಳಿಗೆ ಹೈಕಮಾಂಡ್ ಶಾಕ್ ನೀಡುವ ಮೂಲಕ ಬ್ರೇಕ್ ಹಾಕಿದ್ದಾರೆ.
ಸಚಿವ ಸ್ಥಾನದ ಆಕಾಂಕ್ಷಿಗಳು ಸಹ ಹೈಕಮಾಂಡ್ ಮಟ್ಟದಲ್ಲಿ ಒಳಗೊಳಗೆ ಲಾಬಿ ನಡೆಸಲು ದೆಹಲಿಗೆ ಹೊರಡುವ ತಯಾರು ನಡೆಸಿದ್ದರು. ಆದರೆ ಈ ವಿಷಯ ಅರಿತು ಆಗಸ್ಟ್ 7 ರವರೆಗೂ ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬೇರೆ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಹಾಗಾಗಿ ರಾಜ್ಯ ನಾಯಕರು ದೆಹಲಿಗೆ ಬರೋದ ಬೇಡ ಎಂಬ ಸಂದೇಶವನ್ನು ರವಾನಿಸಿದೆ. ಇದರಿಂದ ಸಿಎಂ ಸೇರಿದಂತೆ ಎಲ್ಲರಿಗೂ ಶಾಕಿಂಗ್ ನ್ಯೂಸ್ನ್ನು ನೀಡಿದೆ.
ಆಗಸ್ಟ್ 8 ರ ಬಳಿಕವೇ ಸಂಪುಟ ರಚನೆ ಮಾಡಬೇಕು ಎಂದು ಹೈಕಮಾಂಡ್ ತಿಳಿಸಿದ್ದು ಈ ಬಗ್ಗೆ ಬಿಜೆಪಿ ಮೂಲಗಳು ತಿಳಿಸಿವೆ. ತಮ್ಮದೇ ಸಮುದಾಯದ ಆಪ್ತರ ತಲೆನೋವಾಗಿದೆ. ಯಡಿಯೂರಪ್ಪ ಕ್ಯಾಬಿನೆಟ್ ಸೇರಲು ಲಿಂಗಾಯತ ಸಮುದಾಯದ ಹಲವಾರು ಆಂಕಾಕ್ಷಿಗಳು ಇದ್ದು, ಹೀಗಾಗಿ ಯಾರಿಗೆ ಸಚಿವ ಸ್ಥಾನ ಕೊಡುವುದು, ಯಾರಿಗೆ ಬಿಡುವುದು ಅನ್ನೋ ಧರ್ಮ ಸಂಕಟ ಬಿಎಸ್ವೈಗೆ ಎದುರಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…