Featured

ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಅಸಮಾಧಾನವನ್ನು ವ್ಯಕ್ತಪಡಿಸಿದ ಸುಳ್ಯ ಶಾಸಕ ಎಸ್ ಅಂಗಾರ -Vishwanews24

ಸುಳ್ಯ: ಸುಳ್ಯ ಶಾಸಕ ಎಸ್ ಅಂಗಾರ ಅವರು ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ನಾನು ನಮ್ಮ ಕ್ಷೇತ್ರದಿಂದ ಸಚಿವನಾಗಬೇಕು ಎಂಬುವುದು ನಮ್ಮ ಜಿಲ್ಲೆ ಮತ್ತು ಕ್ಷೇತ್ರದ ಜನರ ಅಪೇಕ್ಷೆಯಾಗಿದೆ. ಆದರೆ ಕಳೆದ ಅನೇಕ ವರ್ಷಗಳಿಂದ ಸಂಘಟನೆಯಲ್ಲಿ ತತ್ವ ಮತ್ತು ಸಿದ್ಧಾಂತವನ್ನು ನಂಬಿ ನಾನು ಕೆಲಸ ಮಾಡಿಕೊಂಡು ಬರುತ್ತಿದ್ದೇನೆ. ಇಂದು ತತ್ವ ನಿಷ್ಠೆಗಳಿಗೆ ಮಹತ್ವ ಇಲ್ಲವೆಂದರೆ ನಾವು ಏನು ಮಾಡುವುದಕ್ಕೆ ಆಗಲ್ಲ ಎಂದು ಬೇಸರ ವ್ಯಕ್ತಪಡಿಸಿದರು..

ಪ್ರಮಾಣ ವಚನದಲ್ಲಿ ಪ್ರಥಮ ಹಂತದ 17 ಸಚಿವರ ಪಟ್ಟಿಯನ್ನು ಬಿಡುಗಡೆಗೊಳಿಸಿದ ಮುಖ್ಯಮಂತ್ರಿ, ಕೊನೆ ಕ್ಷಣದವರಗೂ ಸಚಿವ ಮಂತ್ರಿ ದೊರಕಬಹುದು ಎಂದು ಬಯಸಿದ್ದ ಶಾಸಕರಿಗೆ ನಿರಾಸೆಯುಂಟಾಗಿದೆ. ಸುಳ್ಯ ಕ್ಷೇತ್ರದಲ್ಲಿ ಆರು ಬಾರಿ ಗೆದ್ದಿರುವ ಎಸ್ ಅಂಗಾರರಿಗೆ ಸಚಿವ ಸ್ಥಾನ ದೊರಕಬಹುದು ಎಂದು ಸಾಕಷ್ಟು ನಿರೀಕ್ಷೆಗಳು ಕಾರ್ಯಕರ್ತರಲ್ಲಿತ್ತು. ಆದರೆ ಇಂದು ಬಿಡುಗಡೆಗೊಳಿಸಿದ ಸಚಿವರ ಅಂತಿಮ ಪಟ್ಟಿ ಮೌನ ಮುರಿಯುವಂತೆ ಮಾಡಿದೆ.

ನಾವು ತತ್ವ ನಿಷ್ಠೆಯನ್ನು ಬಿಡುವುದಕ್ಕೆ ಆಗಲ್ಲ. ಸಂಘಟನೆಯ ಪ್ರಮುಖ ಭಾಗ ಮತ್ತು ಸಂಘಟನೆ ಯಶಸ್ವಿಯಾಗಿ ನಡೆಯಬೇಕಾದರೆ ತತ್ವ ನಿಷ್ಠೆಯೇ ಅತ್ಯಂತ ಪ್ರಮುಖವಾಗಿದೆ. ಆದ ಕಾರಣ ಇಂದು ನಮಗೆ ಸಚಿವ ಸ್ಥಾನ ಸಿಗದೇ ಇರಬಹುದು. ಆದರೆ ಸಂಘಟನೆಯಲ್ಲಿ ಯಾವುದೇ ರೀತಿಯ ಮನಸ್ತಾಪ ಇಲ್ಲ. ಕೆಲವು ಘಟನೆಗಳು ಈ ರೀತಿ ಆಗುತ್ತವೆ. ಅದಕ್ಕೆ ನಾವು ಏನು ಮಾಡುವುದಕ್ಕೆ ಆಗಲ್ಲ. ಇಂದು ನಮ್ಮ ಕ್ಷೇತ್ರದ ಜನರು ನಮ್ಮ ಮೇಲಿನ ಅಭಿಮಾನ ಗೌರವದಿಂದ ಬಂದಿದ್ದರು. ಹೀಗಾಗಿ ಅವರಿಗೆಲ್ಲ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು.

 

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago