Featured

ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಅಸಮಾಧಾನವನ್ನು ವ್ಯಕ್ತಪಡಿಸಿದ ಸುಳ್ಯ ಶಾಸಕ ಎಸ್ ಅಂಗಾರ -Vishwanews24

ಸುಳ್ಯ: ಸುಳ್ಯ ಶಾಸಕ ಎಸ್ ಅಂಗಾರ ಅವರು ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ನಾನು ನಮ್ಮ ಕ್ಷೇತ್ರದಿಂದ ಸಚಿವನಾಗಬೇಕು ಎಂಬುವುದು ನಮ್ಮ ಜಿಲ್ಲೆ ಮತ್ತು ಕ್ಷೇತ್ರದ ಜನರ ಅಪೇಕ್ಷೆಯಾಗಿದೆ. ಆದರೆ ಕಳೆದ ಅನೇಕ ವರ್ಷಗಳಿಂದ ಸಂಘಟನೆಯಲ್ಲಿ ತತ್ವ ಮತ್ತು ಸಿದ್ಧಾಂತವನ್ನು ನಂಬಿ ನಾನು ಕೆಲಸ ಮಾಡಿಕೊಂಡು ಬರುತ್ತಿದ್ದೇನೆ. ಇಂದು ತತ್ವ ನಿಷ್ಠೆಗಳಿಗೆ ಮಹತ್ವ ಇಲ್ಲವೆಂದರೆ ನಾವು ಏನು ಮಾಡುವುದಕ್ಕೆ ಆಗಲ್ಲ ಎಂದು ಬೇಸರ ವ್ಯಕ್ತಪಡಿಸಿದರು..

ಪ್ರಮಾಣ ವಚನದಲ್ಲಿ ಪ್ರಥಮ ಹಂತದ 17 ಸಚಿವರ ಪಟ್ಟಿಯನ್ನು ಬಿಡುಗಡೆಗೊಳಿಸಿದ ಮುಖ್ಯಮಂತ್ರಿ, ಕೊನೆ ಕ್ಷಣದವರಗೂ ಸಚಿವ ಮಂತ್ರಿ ದೊರಕಬಹುದು ಎಂದು ಬಯಸಿದ್ದ ಶಾಸಕರಿಗೆ ನಿರಾಸೆಯುಂಟಾಗಿದೆ. ಸುಳ್ಯ ಕ್ಷೇತ್ರದಲ್ಲಿ ಆರು ಬಾರಿ ಗೆದ್ದಿರುವ ಎಸ್ ಅಂಗಾರರಿಗೆ ಸಚಿವ ಸ್ಥಾನ ದೊರಕಬಹುದು ಎಂದು ಸಾಕಷ್ಟು ನಿರೀಕ್ಷೆಗಳು ಕಾರ್ಯಕರ್ತರಲ್ಲಿತ್ತು. ಆದರೆ ಇಂದು ಬಿಡುಗಡೆಗೊಳಿಸಿದ ಸಚಿವರ ಅಂತಿಮ ಪಟ್ಟಿ ಮೌನ ಮುರಿಯುವಂತೆ ಮಾಡಿದೆ.

ನಾವು ತತ್ವ ನಿಷ್ಠೆಯನ್ನು ಬಿಡುವುದಕ್ಕೆ ಆಗಲ್ಲ. ಸಂಘಟನೆಯ ಪ್ರಮುಖ ಭಾಗ ಮತ್ತು ಸಂಘಟನೆ ಯಶಸ್ವಿಯಾಗಿ ನಡೆಯಬೇಕಾದರೆ ತತ್ವ ನಿಷ್ಠೆಯೇ ಅತ್ಯಂತ ಪ್ರಮುಖವಾಗಿದೆ. ಆದ ಕಾರಣ ಇಂದು ನಮಗೆ ಸಚಿವ ಸ್ಥಾನ ಸಿಗದೇ ಇರಬಹುದು. ಆದರೆ ಸಂಘಟನೆಯಲ್ಲಿ ಯಾವುದೇ ರೀತಿಯ ಮನಸ್ತಾಪ ಇಲ್ಲ. ಕೆಲವು ಘಟನೆಗಳು ಈ ರೀತಿ ಆಗುತ್ತವೆ. ಅದಕ್ಕೆ ನಾವು ಏನು ಮಾಡುವುದಕ್ಕೆ ಆಗಲ್ಲ. ಇಂದು ನಮ್ಮ ಕ್ಷೇತ್ರದ ಜನರು ನಮ್ಮ ಮೇಲಿನ ಅಭಿಮಾನ ಗೌರವದಿಂದ ಬಂದಿದ್ದರು. ಹೀಗಾಗಿ ಅವರಿಗೆಲ್ಲ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು.

 

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago