Featured

ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಅಸಮಾಧಾನವನ್ನು ವ್ಯಕ್ತಪಡಿಸಿದ ಸುಳ್ಯ ಶಾಸಕ ಎಸ್ ಅಂಗಾರ -Vishwanews24

ಸುಳ್ಯ: ಸುಳ್ಯ ಶಾಸಕ ಎಸ್ ಅಂಗಾರ ಅವರು ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ನಾನು ನಮ್ಮ ಕ್ಷೇತ್ರದಿಂದ ಸಚಿವನಾಗಬೇಕು ಎಂಬುವುದು ನಮ್ಮ ಜಿಲ್ಲೆ ಮತ್ತು ಕ್ಷೇತ್ರದ ಜನರ ಅಪೇಕ್ಷೆಯಾಗಿದೆ. ಆದರೆ ಕಳೆದ ಅನೇಕ ವರ್ಷಗಳಿಂದ ಸಂಘಟನೆಯಲ್ಲಿ ತತ್ವ ಮತ್ತು ಸಿದ್ಧಾಂತವನ್ನು ನಂಬಿ ನಾನು ಕೆಲಸ ಮಾಡಿಕೊಂಡು ಬರುತ್ತಿದ್ದೇನೆ. ಇಂದು ತತ್ವ ನಿಷ್ಠೆಗಳಿಗೆ ಮಹತ್ವ ಇಲ್ಲವೆಂದರೆ ನಾವು ಏನು ಮಾಡುವುದಕ್ಕೆ ಆಗಲ್ಲ ಎಂದು ಬೇಸರ ವ್ಯಕ್ತಪಡಿಸಿದರು..

ಪ್ರಮಾಣ ವಚನದಲ್ಲಿ ಪ್ರಥಮ ಹಂತದ 17 ಸಚಿವರ ಪಟ್ಟಿಯನ್ನು ಬಿಡುಗಡೆಗೊಳಿಸಿದ ಮುಖ್ಯಮಂತ್ರಿ, ಕೊನೆ ಕ್ಷಣದವರಗೂ ಸಚಿವ ಮಂತ್ರಿ ದೊರಕಬಹುದು ಎಂದು ಬಯಸಿದ್ದ ಶಾಸಕರಿಗೆ ನಿರಾಸೆಯುಂಟಾಗಿದೆ. ಸುಳ್ಯ ಕ್ಷೇತ್ರದಲ್ಲಿ ಆರು ಬಾರಿ ಗೆದ್ದಿರುವ ಎಸ್ ಅಂಗಾರರಿಗೆ ಸಚಿವ ಸ್ಥಾನ ದೊರಕಬಹುದು ಎಂದು ಸಾಕಷ್ಟು ನಿರೀಕ್ಷೆಗಳು ಕಾರ್ಯಕರ್ತರಲ್ಲಿತ್ತು. ಆದರೆ ಇಂದು ಬಿಡುಗಡೆಗೊಳಿಸಿದ ಸಚಿವರ ಅಂತಿಮ ಪಟ್ಟಿ ಮೌನ ಮುರಿಯುವಂತೆ ಮಾಡಿದೆ.

ನಾವು ತತ್ವ ನಿಷ್ಠೆಯನ್ನು ಬಿಡುವುದಕ್ಕೆ ಆಗಲ್ಲ. ಸಂಘಟನೆಯ ಪ್ರಮುಖ ಭಾಗ ಮತ್ತು ಸಂಘಟನೆ ಯಶಸ್ವಿಯಾಗಿ ನಡೆಯಬೇಕಾದರೆ ತತ್ವ ನಿಷ್ಠೆಯೇ ಅತ್ಯಂತ ಪ್ರಮುಖವಾಗಿದೆ. ಆದ ಕಾರಣ ಇಂದು ನಮಗೆ ಸಚಿವ ಸ್ಥಾನ ಸಿಗದೇ ಇರಬಹುದು. ಆದರೆ ಸಂಘಟನೆಯಲ್ಲಿ ಯಾವುದೇ ರೀತಿಯ ಮನಸ್ತಾಪ ಇಲ್ಲ. ಕೆಲವು ಘಟನೆಗಳು ಈ ರೀತಿ ಆಗುತ್ತವೆ. ಅದಕ್ಕೆ ನಾವು ಏನು ಮಾಡುವುದಕ್ಕೆ ಆಗಲ್ಲ. ಇಂದು ನಮ್ಮ ಕ್ಷೇತ್ರದ ಜನರು ನಮ್ಮ ಮೇಲಿನ ಅಭಿಮಾನ ಗೌರವದಿಂದ ಬಂದಿದ್ದರು. ಹೀಗಾಗಿ ಅವರಿಗೆಲ್ಲ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು.

 

 

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

11 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

11 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

12 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

12 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

12 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

13 hours ago