ರಾಜ್ಯ ನ್ಯೂಸ್

ಸಚಿವ ಸ್ಥಾನ ವಂಚಿತ ಎಂ.ಬಿ.ಪಾಟೀಲ್ ರಾಜೀನಾಮೆ..?!

ಬೆಂಗಳೂರು: ಎಂ.ಬಿ ಪಾಟೀಲ್ ಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆಯಲ್ಲಿ ತನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಲು ಮುಂದಾಗಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ತನ್ನ ಮೊದಲ ಸಚಿವರ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಅದರಲ್ಲಿ ಸಚಿವ ಎಂ.ಬಿ ಪಾಟೀಲ್ ಹೆಸರು ಇತ್ತು. ಆದರೆ ಇಂದು ಪ್ರಮಾಣವಚನ ಸ್ವೀಕರಿಸುವ ಶಾಸಕರ ಪಟ್ಟಿಯಲ್ಲಿ ಹೆಸರು ಇಲ್ಲದ ಕಾರಣ ಎಂಬಿ ಪಾಟೀಲ್ ಶಾಸಕ ಸ್ಥಾನ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.

ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆಯಲ್ಲಿ ಸದಾಶಿವನಗರದಲ್ಲಿರುವ ಶಾಸಕರ ನಿವಾಸ ಮುಂದೆ ಎಂ.ಬಿ ಪಾಟೀಲ್ ಮನೆ ಮುಂದೆ ಬೆಂಬಲಿಗರು ಪ್ರತಿಭಟನೆ ಮುಂದಾಗಿದ್ದರು. ಮನೆಯ ಮುಂದೆ ಪ್ರತಿಭಟನೆಗೆ ಅವಕಾಶ ನೀಡದ ಕಾರಣ ಪಾಟೀಲ್ ಅಭಿಮಾನಿಗಳು ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.ಈ ಹಿಂದಿನ ಸರಕಾರದಲ್ಲಿ ಸಿದ್ದರಾಮಯ್ಯರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಮಾಜಿ ಸಚಿವರಾದ ಎಂ.ಬಿ. ಪಾಟೀಲ್ ರಿಗೆ ಈ ಬಾರಿ ಸಚಿವ ಸ್ಥಾನ ಸಿಗದೇ ಇದ್ದಿದ್ದು ಅವರ ಬೆಂಬಲಿಗರಲ್ಲಿ ಆಕ್ರೋಶ ಮೂಡಿಸಿದ್ದು ಇವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿವೆ. ಇದಕ್ಕೆ ಪುಷ್ಠಿ ನೀಡುವಂತೆ ಎಂ.ಬಿ. ಪಾಟೀಲ್ ಅವರು ಇಂದು ಮಧ್ಯಾಹ್ನ 1.15 ಕ್ಕೆ ಸ್ಪೀಕರ್ ಭೇಟಿಗೆ ಅವಕಾಶ ಕೇಳಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ.ಇನ್ನು ಸಚಿವ ಸ್ಥಾನದಿಂದ ವಂಚಿತರಾಗಿರುವ ಬಿ.ಸಿ.ಪಾಟೀಲ್, ಪರಮೇಶ್ವರ್ ನಾಯ್ಕ್, ಸತೀಶ್ ಜಾರಕಿಹೋಳಿ, ಡಾ.ಅಜಯ್ ನಾಯಕ್ ಅವರೂ ಸಹ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದು ಕಾಂಗ್ರೆಸ್ ನಲ್ಲಿ ದುಡ್ಡಿದ್ದವರಿಗೆ ಮಾತ್ರ ಸಚಿವ ಸ್ಥಾನ ಎಂದು ಶಾಸಕ ಬಿ.ಸಿ ಪಾಟೀಲ್ ಹೈಕಮಾಂಡ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜೊತೆಗೆ ಮತ್ತೊಬ್ಬ ಸಚಿವ ಸ್ಥಾನ ವಂಚಿತ ಎಚ್.ಎಂ.ರೇವಣ್ಣ ಇದು ಕುರುಬ ಸಮಾಜಕ್ಕೆ ಮಾಡಿರೋ ಅಗೌರವ ಎಂದು ಕಿಡಿ ಕಾರಿದ್ದಾರೆ. ಇನ್ನು ಶಾಸಕ ಕೃಷ್ಣ ಭೈರೇಗೌಡ ರವರು ಎಂ.ಬಿ.ಪಾಟೀಲ್ ರವರ ಬೆಂಗಳೂರು ನಿವಾಸಕ್ಕೆ ತೆರಳಿ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

21 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

21 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

22 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

22 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

23 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

24 hours ago