Featured

ಸಣ್ಣ ಗಲಾಟೆ ನಡೆದಿದ್ದು ನಿಜ, ಆದ್ರೆ ದರ್ಶನ್ ಯಾರಿಗೂ ಹೊಡೆದಿಲ್ಲ: ಹೋಟೆಲ್ ಮಾಲೀಕ  ಸಂದೇಶ್ ನಾಗರಾಜ್ ಪುತ್ರ ಸ್ಪಷ್ಟನೆ -Vishwanews24

ಸಣ್ಣ ಗಲಾಟೆ ನಡೆದಿದ್ದು ನಿಜ, ಆದ್ರೆ ದರ್ಶನ್ ಯಾರಿಗೂ ಹೊಡೆದಿಲ್ಲ: ಹೋಟೆಲ್ ಮಾಲೀಕ  ಸಂದೇಶ್ ನಾಗರಾಜ್ ಪುತ್ರ ಸ್ಪಷ್ಟನೆ -Vishwanews24

ಮೈಸೂರು: ಸಣ್ಣದಾಗಿ ಗಲಾಟೆ ನಡೆದಿದ್ದು ನಿಜ, ಆದರೆ ದರ್ಶನ್ ಯಾರಿಗೂ ಹೊಡೆದಿಲ್ಲ. ನಮ್ಮ ಕಾರ್ಮಿಕರಿಗೆ ಬೈದಿದ್ದಾರೆ ಅಷ್ಟೇ ಎಂದು ಸಂದೇಶ್ ದಿ ಪ್ರಿನ್ಸ್ ಮಾಲೀಕ ಸಂದೇಶ್ ನಾಗರಾಜ್ ಅವರ ಪುತ್ರ ಸ್ಪಷ್ಟಪಡಿಸಿದ್ದಾರೆ.

ಹೋಟೇಲಿನಲ್ಲಿ ವೇಟರ್ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪ ಸಂಬಂಧ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಸಣ್ಣ ಜಗಳ ಆಗಿದ್ದು ನಿಜ, ಆದರೆ ಹೊಡೆದಿಲ್ಲ ಬೈದಿದ್ದಾರೆ ಅಷ್ಟೆ. ಅಂದು ನಾನು ಕೂಡ ಇದ್ದೆ. ಬೈಬೇಡಪ್ಪ ನಮ್ಮ ಕಾರ್ಮಿಕರಿಗೆ. ನಮಗೆ ಕೆಲಸಗಾರರು ಸಿಗುವುದಿಲ್ಲ. ನೀನು ಯಾವುದೋ ಟೆನ್ಶನ್ ನಲ್ಲಿ ನಮ್ಮವರಿಗೆ ಯಾಕೆ ಬೈತೀಯಾ ಎಂದಿದ್ದೆ. ಅದಕ್ಕೆ ಅವನು ಕೋಪ ಕೂಡ ಮಾಡಿಕೊಂಡಿದ್ದ ಎಂದರು.

ನಾವು ಶೂಟಿಂಗ್ ನಲ್ಲೂ ಜಗಳ ಆಡುತ್ತೇವೆ. ನಾನು ತಪ್ಪು ಮಾಡಿದಾಗ ಅವನು ಹೇಳುತ್ತಾನೆ, ಅವನು ತಪ್ಪು ಮಾಡಿದಾಗ ನಾನು ಹೇಳ್ತೇನೆ. ಫ್ರೆಂಡ್ ಶಿಪ್ ನಲ್ಲಿ ಇದೆಲ್ಲ ಮಾಮೂಲಿ. ಆದರೆ ಗಲಾಟೆ ಸಂಬಂಧ ತೋಟದಲ್ಲಿ ಏನೇನು ಆಗಿದೆ ಎಂದು ಗೊತ್ತಿಲ್ಲ. ನನ್ನ ಕಾರ್ಮಿಕರಿಗೆ ಏನಾದರೂ ಆದರೆ ನಾನು ಬಿಡ್ತೀನಾ ಎಂದು ಪ್ರಶ್ನಿಸಿದರು.

ಸಣ್ಣ ಮಟ್ಟಿನ ಜಗಳ ನಡೆದಿದೆ. ಈ ಘಟನೆ ನಡೆದು ಒಂದು ತಿಂಗಳು ಕಳೆದಿದೆ. ಈ ಬಗ್ಗೆ ನಮ್ಮ ತಂದೆಯವರಿಗೆ ಏನೂ ಗೊತ್ತಿಲ್ಲ. ಹೋಟೆಲ್ ನಡೆಸುತ್ತಿರುವುದು ನಾನು, ಹೀಗಾಗಿ ಅವರಿಗೂ ಈ ಘಟನೆಗೂ ಸಂಬಂಧವಿಲ್ಲ ಎಂದರು.

ಮೊದಲ ಬಾರಿಗೆ ಮೀಡಿಯಾ ಮುಂದೆ ಬಂದಿದ್ದೇನೆ. ಯಾಕಂದ್ರೆ ಇದನ್ನು ಹೀಗೆ ಬಿಟ್ಟರೆ ನಮ್ಮ ಹೋಟೆಲ್ ಹಾಗೂ ಹೀರೋಗೆ ಕೆಟ್ಟ ಹೆಸರು ಬರುತ್ತೆ. ಅಲ್ಲದೆ ನಮ್ಮ ಕಾರ್ಮಿಕರಿಗೂ ಕೆಟ್ಟ ಹೆಸರು ಬರುತ್ತದೆ. ಈ ಹಿನ್ನೆಲೆಯಲ್ಲಿ ದಯವಿಟ್ಟು ಇದನ್ನು ಇಲ್ಲಿಗೆ ಬಿಟ್ಟುಬಿಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

3 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

3 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

3 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

4 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago