Featured

ಸಣ್ಣ ವರ್ತಕರಿಂದ 3 ವರ್ಷದ ತೆರಿಗೆ ಬಾಕಿ ವಸೂಲಾತಿ ಮಾಡುವುದಿಲ್ಲ : ಸಿಎಂ ಸ್ಪಷ್ಟನೆ  – vishwanews24

ಸಣ್ಣ ವರ್ತಕರಿಂದ 3 ವರ್ಷದ ತೆರಿಗೆ ಬಾಕಿ ವಸೂಲಾತಿ ಮಾಡುವುದಿಲ್ಲ : ಸಿಎಂ ಸ್ಪಷ್ಟನೆ

ಬೆಂಗಳೂರು: ಜಿಎಸ್‌ಟಿ ನೋಟಿಸ್‌ ಪಡೆದ ವರ್ತಕರಿಂದ 3 ವರ್ಷದ ತೆರಿಗೆ ಬಾಕಿ ವಸೂಲಾತಿ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

40 ಲಕ್ಷ ರೂ. ವ್ಯವಹಾರ ನಡೆಸಿದ್ದಕ್ಕೆ ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆಯ ವರ್ತಕರಿಗೆ ನೋಟಿಸ್‌ ಜಾರಿ ಮಾಡಿದ್ದಕ್ಕೆ ಭಾರೀ ಟೀಕೆ ವ್ಯಕ್ತವಾದ ಬೆನ್ನಲ್ಲೇ ಸಿದ್ದರಾಮಯ್ಯ  ತೆರಿಗೆ ಇಲಾಖೆಯ ಅಧಿಕಾರಿಗಳು, ವರ್ತಕ ಸಂಘದ ಪ್ರತಿನಿಧಿಗಳ ಜೊತೆ ಸಭೆ ನಡೆಸಿದರು.

ಸಭೆಯ ಬಳಿಕ ಮಾತನಾಡಿ, ನೋಟಿಸ್‌ ನೀಡಿದ ವರ್ತಕರಿಂದ ಬಾಕಿ ತೆರಿಗೆಯನ್ನು ವಸೂಲಿ ಮಾಡುವುದಿಲ್ಲ. ಆದರೆ ವರ್ತಕರು ನೋಂದಣಿ ಮಾಡಿಕೊಳ್ಳಬೇಕು. ಈಗ ಕೊಟ್ಟಿರುವ ನೋಟೀಸ್ ಮೇಲೆ ವಸೂಲಾತಿ, ಕ್ರಮ ಕೈಗೊಳ್ಳುವುದಿಲ್ಲ ಎಂದು ಹೇಳಿದರು.

ಮೂರು ವರ್ಷಗಳ ಬಾಕಿ ವಸೂಲಾತಿಗೆ ನೋಟಿಸ್ ಕೊಟ್ಟಿದ್ದರು .ಅದನ್ನ ಮುಂದುವರಿಸುವುದಿಲ್ಲ. ಕಡ್ಡಾಯ ಜಿಎಸ್‌ಟಿ ನೋಂದಣಿಗೆ ಒಪ್ಪಿದ್ದಾರೆ. ಜಿಎಸ್‌ಟಿ ಗೊಂದಲಕ್ಕೆ ಸಹಾಯವಾಣಿ ತೆರೆಯುತ್ತೇವೆ. ಜಿಎಸ್‌ಟಿ ಬಗ್ಗೆ ಜಾಗೃತಿ ಕಾರ್ಯಕ್ರಮಗಳು ಮಾಡಲು ತೀರ್ಮಾನ ಮಾಡಿದ್ದೇವೆ. ವರ್ತಕರು ಯುಪಿಐ ಬಳಸಲು ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದರು.

ಸಣ್ಣ ವ್ಯಾಪಾರಿಗಳಲ್ಲಿ ಜಿಎಸ್‌ಟಿ ನೋಟಿಸ್‌ ಕುರಿತು ಗೊಂದಲ ಇದೆ. ಸಾಲದ ಮೊತ್ತ ಕೂಡಾ ಇದರಲ್ಲಿ ಸೇರಿಕೊಂಡಿದೆ. ವೈಯಕ್ತಿಕ ವಹಿವಾಟು ಹಣ ಸಹ ಇದರಲ್ಲಿ ಸೇರಿದೆ. ಜಿಎಸ್‌ಟಿ ನೋಟಿಸ್‌ ನೀಡುವುದು ತಪ್ಪಲ್ಲ. ಆದರೆ ವ್ಯಾಪಾರಿಗಳಿಗೆ ಪರಿಹಾರ ತೆರಿಗೆ ಪಾವತಿಸಲು ಅವಕಾಶ ನೀಡಬೇಕು. ಮಧ್ಯವರ್ತಿಗಳಿಗೆ ಅವಕಾಶ ನೀಡದೆ, ವ್ಯಾಪಾರಿಗಳು ನೇರವಾಗಿ ಇಲಾಖೆ ಸಂಪರ್ಕಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಕೆಲವು ಪ್ರತಿನಿಧಿಗಳು ಮನವಿ ಮಾಡಿದ್ದಾರೆ.

ಯುಪಿಐ ಅಡಿ 40 ಲಕ್ಷ ರೂ. ಅಧಿಕ ವಹಿವಾಟು ಮಾಡಿರುವವರಿಗೆ ಮಾತ್ರ ಜಿಎಸ್ಟಿ ನೊಟೀಸ್ ನೀಡಲಾಗಿದೆ. ಆರಂಭದಲ್ಲಿ ಜಿಎಸ್‌ಟಿ ನೊಂದಣಿ ಮಾಡುವಂತೆ ನೋಟಿಸ್ ನೀಡಲಾಗಿತ್ತು. ಹಾಲು, ತರಕಾರಿ, ಮಾಂಸ, ಹಣ್ಣಿನಂತಹ ಅಗತ್ಯ ಆಹಾರ ವಸ್ತುಗಳಿಗೆ ತೆರಿಗೆ ವಿನಾಯಿತಿ ಇದ್ದು, ಅಂತಹ ವ್ಯಾಪಾರಿಗಳಿಗೆ ನೊಟೀಸ್ ಕೊಟ್ಟಿದ್ದರೂ, ಅವರಿಂದ ತೆರಿಗೆ ವಸೂಲು ಮಾಡುವುದಿಲ್ಲ. ಆದರೆ ಯಾರು ಕಾಯ್ದೆ ಪ್ರಕಾರ ತೆರಿಗೆ ಕಟ್ಟಬೇಕಾಗಿದೆಯೋ ಅವರು ಕಟ್ಟಬೇಕು ಎಂದರು.

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

15 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

18 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

18 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

18 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

18 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

18 hours ago