ನವದೆಹಲಿ :ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಇಂದು ಲೋಕಸಭೆಯಲ್ಲಿ ತಮ್ಮ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದು, ಈ ಸಂದರ್ಭದಲ್ಲಿ ಸಣ್ಣ ವ್ಯಾಪಾರಿಗಳಿಗೆ ಬಂಪರ್ ನ್ಯೂಸ್ ನೀಡಿದ್ದಾರೆ.
‘ಪ್ರಧಾನಮಂತ್ರಿ ಕರ್ಮಯೋಗಿ ಮಾನ್ ಸಮ್ಮಾನ್’ ಯೋಜನೆಗೆ ಚಾಲನೆ ನೀಡಲಾಗಿದ್ದು, ಇದರ ಮೂಲಕ 3 ಕೋಟಿ ಮಂದಿ ಚಿಲ್ಲರೆ ವ್ಯಾಪಾರಸ್ಥರಿಗೆ ಪಿಂಚಣಿ ಘೋಷಣೆ ಮಾಡಿದ ಅವರು ಕರ್ಮಯೋಗಿ ಸಮ್ಮಾನ್ ಯೋಜನೆ ಜಾರಿಗೆ ಬರಲಿದೆ ಅಂತ ಹೇಳಿದರು.
ಇದೇ ವೇಳೆ ಸದೃಡ ದೇಶಕ್ಕಾಗಿ, ಸದೃಢ ನಾಗರೀಕರು ನಮ್ಮ ಧ್ಯೇಯ ಅಂತ ಹೇಳಿದರು. ಭರವೆಸೆ ಇದ್ದರೆ ಇದ್ದೆ ಅಂತ ಹೇಳಿದರು. ಇನ್ನು ಸರಕಾರಿ ಪ್ರಕ್ರಿಯೆಗಳನ್ನು ಸರಳೀಕರಣ ಮಾಡುತ್ತೇವೆ ಅಂತ ಹೇಳಿದರು. ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ, ಇಂಡಸ್ಟ್ರಿಯಲ್ ಕಾರಿಡಾರ್, ಉಡಾನ್ ಸೇರಿದಂತೆ ರೈಲ್ವೆ ಸಂಪರ್ಕ ಕ್ರಾಂತಿ ಆರ್ಥಿಕತೆಗೆ ಉತ್ತೇಜ ನೀಡಿದೆ ಅಂತ ಹೇಳಿದರು.
ಇದೇ ವೇಳೆ ಒನ್ ನೇಷನ್ ಗ್ರೀಡ್ ಮೂಲಕ ನೀರು ವಿದ್ಯುತ್ ವಿತರಣೆ ಮಾಡಲಾಗುವುದು ಅಂತ ಹೇಳಿದರು. 3 ಕೋಟಿ ಚಿಲ್ಲರೆ ವ್ಯಾಪಾರಿಗಳಿಗೆ ಪಿಂಚಣಿ ಘೋಷಣೆ ಮಾಡಿದ ಅವರು ಕರ್ಮಯೋಗಿ ಸಮ್ಮಾನ್ ಯೋಜನೆ ಜಾರಿಗೆ ಬರಲಿದೆ ಅಂತ ಹೇಳಿದರು.
ಈ ಬಜೆಟ್ನಲ್ಲಿ ಮಾಡಲಾದ ಘೋಷಣೆಗಳು:
– ಭಾರತದ ಆರ್ಥಿಕತೆ ವೇಗವಾಗಿ ಬೆಳೆಯುತ್ತಿದ್ದು, ಜನ ಸಾಮಾನ್ಯರಿಗೆ ಸರ್ಕಾರ ಹತ್ತಿರವಾಗಲು ಸರ್ಕಾರಿ ಪ್ರಕ್ರಿಯೆಗಳನ್ನು ಸರಳ ಮಾಡಲಾಗುತ್ತಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
– ಭಾರತವು ಪ್ರಸ್ತುತ ವಿಶ್ವದ ಆರನೇ ಅತಿದೊಡ್ಡ ಆರ್ಥಿಕತೆಯಾಗಿದೆ, ಇದು ಐದು ವರ್ಷಗಳ ಹಿಂದೆ 11 ನೇ ಸ್ಥಾನದಲ್ಲಿತ್ತು: ಹಣಕಾಸು ಸಚಿವೆ
– ಬಜೆಟ್ನಲ್ಲಿ ಹೊಸ ಭಾರತ(ನ್ಯೂ ಇಂಡಿಯಾ)ದತ್ತ ಗಮನ ಹರಿಸಲಾಗಿದೆ.
– ಭಾರತ 2019-20ರಲ್ಲಿ 3 ಟ್ರಿಲಿಯನ್ ದೇಶವಾಗಲಿದೆ. 5 ಟ್ರಿಲಿಯನ್ ಆರ್ಥಿಕತೆ ಯೋಜನೆ ನಮ್ಮ ಗುರಿ.
– ಗ್ರಾಮೀಣ, ನಗರ ಪ್ರದೇಶಗಳ ಬೆಳವಣಿಗೆಗಾಗಿ ಸಾರಿಗೆ ಕ್ರಾನ್ತಿಎ ಸರ್ಕಾರ ಕಟಿಬದ್ದ. ಈ ಹಿನ್ನೆಲೆಯಲ್ಲಿ ನೂತನ ಸಾರಿಗೆ ಯೋಜನೆ ಜಾರಿಗೆ ತರಲು ಸರ್ಕಾರ ಮುಂದಾಗಿದೆ.
– 300 ಕಿ.ಮೀ. ಮೆಟ್ರೋ ರೈಲು ಮಾರ್ಗಕ್ಕೆ ಅನುಮೋದನೆ.
– ಎಲೆಕ್ಟ್ರಿಕ್ ವಾಹನ ತಯಾರಿಕೆ-ಬಳಕೆಗೆ ಸರ್ಕಾರದಿಂದ ಅಗತ್ಯ ಸಹಕಾರ.
– ಒಂದು ದೇಶ, ಒಂದು ಗ್ರೀಡ್ ಯ್ಹೊಜನೆ ಮೂಲಕ ಎಲ್ಲಾ ರಾಜ್ಯಗಳಿಗೂ ಸಮಾನ ವಿದ್ಯುತ್ ಹಂಚಿಕೆ.
– ಗೃಹ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ.
– ಕರ್ಮಯೋಗಿ ಸಮ್ಮಾನ್ ಯೋಜನೆ ಅಡಿಯಲ್ಲಿ 3 ಕೋಟಿ ಚಿಲ್ಲರೆ ವ್ಯಾಪಾರಿಗಳಿಗೆ ಪಿಂಚಣಿ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…