ಹೊಸದಿಲ್ಲಿ: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈ ವರ್ಷದ ಮಾರ್ಚ್ಗೆ ಅಧಿಕಾರ ಪಡೆದುಕೊಂಡು ನಾಲ್ಕು ವರ್ಷ ಪೂರ್ಣಗೊಳಿಸಲಿದ್ದಾರೆ. ಈ ಮಧ್ಯೆ ನಡೆದಿರುವ ಸಮೀಕ್ಷೆಯೊಂದು ಹೊರಬಿದ್ದಿದ್ದು,, ದೇಶದ ಅತ್ಯುತ್ತಮ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಹೊರಹೊಮ್ಮಿದ್ದಾರೆ. ಸತತ ನಾಲ್ಕು ಬಾರಿಯ ಅತ್ಯುತ್ತಮ ಮುಖ್ಯಮಂತ್ರಿ ಎನ್ನುವ ಪಟ್ಟವನ್ನು ಯೋಗಿ ಆದಿತ್ಯನಾಥ್ ಅಲಂಕರಿಸಿಕೊಂಡಿದ್ದಾರೆ.
ಇಂಡಿಯಾ ಟುಡೆ ಗ್ರೂಪ್-ಕಾರ್ವಿ ಇನ್ಸೈಟ್ಸ್ ಮೂಡ್ ಆಫ್ ದಿ ನೇಷನ್ (ಎಂಒಟಿಎನ್) ನಡೆಸಿದ 2021ರ ಸಾಲಿನ ಸಮೀಕ್ಷೆಯಲ್ಲಿ ಶೇ.25ರಷ್ಟು ಮತಗಳನ್ನು ಯೋಗಿ ಆದಿತ್ಯನಾಥ್ ಪಾಲಾಗಿದೆ. ಅತ್ಯುತ್ತಮ ಹಾಗೂ ಉತ್ತಮ ಸಾಧನೆ ತೋರಿದ ಮುಖ್ಯಮತ್ರಿ ಯಾರು ಎನ್ನುವ ಪ್ರಶ್ನೆಗೆ ಅನೇಕರು ಯೋಗಿ ಆದಿತ್ಯನಾಥ್ ಎಂದಿದ್ದಾರೆ. ಇನ್ನು ಸಮೀಕ್ಷೆಯ ಪ್ರಕಾರ, ಶೇಕಡಾ 54 ರಷ್ಟು ಜನರು ಆದಿತ್ಯನಾಥ್ ಅವರ ಮತಾಂತರ ವಿರೋಧಿ ಕಾನೂನನ್ನು ಬೆಂಬಲಿಸಿದರೆ, 58 ಪ್ರತಿಶತದಷ್ಟು ಜನರು ಅಂತರ್ ಧರ್ಮದ ವಿರುದ್ಧದ ಕಾನೂನುಗಳ ವಿರುದ್ಧ ಮತ ಚಲಾಯಿಸಿದ್ದಾರೆ.
ಇದನ್ನೂ ಓದಿ :ಕೋಸ್ಟಲ್ವುಡ್ : ಬಿಡುಗಡೆಯ ತಯಾರಿಯಲ್ಲಿ ಮೂರು ತುಳು ಸಿನಿಮಾಗಳು ..Vishwanews24
ಇನ್ನು ಸಮೀಕ್ಷೆಯ ಪ್ರಕಾರ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶೇ 14 ರಷ್ಟು ಮತಗಳನ್ನು ಗಳಿಸುವ ಮೂಲಕ ಎರಡನೇ ಅತ್ಯುತ್ತಮ ಮುಖ್ಯಮಂತ್ರಿಯಾಗಿ ಹೊರಹೊಮ್ಮಿದ್ದಾರೆ. ಇನ್ನು ಅವರ ನಂತರ ಪಶ್ಚಿಮ ಬಂಗಾಳ ಮಮತಾ ಬ್ಯಾನರ್ಜಿ ಮೂರನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷದ ಜೆಡಿಯು ಕಳಪೆ ಸಾಧನೆ ತೋರಿದ್ದರೂ ಸತತ ನಾಲ್ಕನೇ ಅವಧಿಗೆ ಬಿಹಾರ ಮುಖ್ಯಮಂತ್ರಿಯಾದ ನಿತೀಶ್ ಕುಮಾರ್ 6 ಶೇಕಡಾ ಮತಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ, ನಂತರ ಜಗನ್ ಮೋಹನ್ ರೆಡ್ಡಿ ಐದನೇ ಸ್ಥಾನ ಪಡೆದಿದ್ದಾರೆ.
ಇದನ್ನೂ ಓದಿ :ನಟಿ ಅಮೂಲ್ಯ ದಂಪತಿಯಿಂದ ರಾಮ ಮಂದಿರ ನಿರ್ಮಾಣಕ್ಕೆ 2.50 ಲಕ್ಷ ರೂಪಾಯಿ ದೇಣಿಗೆ -Vishwanews24
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…