ಮುಂಬೈ: ಜನರು ಕಂಗನಾ ರಣಾವತ್ ಅವರನ್ನು ಬೆಂಬಲಿಸುತ್ತಿರುವುದನ್ನು ಕಂಡು ತುಂಬಾ ಸಂತೋಷವಾಯಿತು. ಸತ್ಯಕ್ಕಾಗಿ ಸರ್ಕಾರವನ್ನೇ ಎದರು ಹಾಕಿಕೊಂಡು ಅವಳು ಮಾಡುತ್ತಿರುವ ಹೋರಾಟವನ್ನು ಕಂಡು ಹೆಮ್ಮೆಯಾಗುತ್ತಿದೆ ಎಂದು ಬಾಲಿವುಡ್ ನಟಿ ಕಂಗನಾ ರಣಾವತ್ ತಾಯಿ ಆಶಾ ರಣಾವತ್ ಹಾಗೂ ತಂದೆ ಅಮರ್ದೀಪ್ ರಣಾವತ್ ಭಾವುಕರಾದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇವಲ ಜನರು ಮಾತ್ರವಲ್ಲ ಕರ್ಣಿ ಸೇನೆ ಹಾಗೂ ಬಿಜೆಪಿ ಸೇರಿ ಹಲವು ರಾಜಕೀಯ ಪಕ್ಷಗಳು ಸಹ ಕಂಗನಾ ರಣಾವತ್ ಅವರಿಗೆ ಬೆಂಬಲ ನೀಡುತ್ತಿರುವುದನ್ನು ಕಂಡು ಸಂತೋಷವಾಗುತ್ತಿದೆ. ಸತ್ಯಕ್ಕಾಗಿ ಹೋರಾಡುತ್ತಿರುವ ಮಗಳ ಕುರಿತು ಹೆಮ್ಮೆಯಿದೆ ಎಂದು ತಿಳಿಸಿದರು.
ದಶಕಗಳಿಂದ ನಮ್ಮ ಕುಟುಂಬ ಕಾಂಗ್ರೆಸ್ಗೆ ಬೆಂಬಲ ನೀಡುತ್ತಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ನಮಗೆ ತುಂಬಾ ಸಹಾಯ ಮಾಡಿದ್ದಾರೆ. ಹೀಗಾಗಿ ಅವರಿಗೆ ಕೃತಜ್ಞರಾಗಿದ್ದೇವೆ. ಹೀಗಾಗಿ ನಾವು ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿದ್ದೇವೆ ಎಂದು ಆಶಾ ರಣಾವತ್ ಘೋಷಿಸಿದ್ದಾರೆ.
ವಿಡಿಯೋ ನೋಡಿದ ಕಂಗನಾ ರಣಾವತ್ ಅವರು ತುಂಬಾ ಭಾವಕರಾಗಿದ್ದು, ರೀಟ್ವೀಟ್ ಮಾಡಿ, ಅವರು ನನ್ನ ಕಚೇರಿ ಧ್ವಂಸಗೊಳಿಸಿದಾಗ ಅಮ್ಮನ ಎಚ್ಚರಿಕೆ ನೀಡುತ್ತಿದ್ದ ಸಂದರ್ಭ ನನ್ನ ಕಣ್ಣ ಮುಂದೆ ಬಂತು. ಅಂದಿನಿಂದ ಅವಳ ಕರೆಗಳನ್ನು ನಾನು ಸ್ವೀಕರಿಸಿರಲಿಲ್ಲ. ಇದು ನನಗೆ ಒಂದು ಕ್ಷಣ ಕಣ್ಣ ಮುಂದೆ ಬಂದು ಹೋಯಿತು. ಇಡೀ ವಿಷಯವನ್ನು ಅವರು ಕೊಂಡೊಯ್ದ ರೀತಿ ತುಂಬಾ ಆಶ್ಚರ್ಯವಾಯಿತು ಎಂದು ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ.
ಕಂಗನಾ ರಣಾವತ್ ಅವರ ಕಚೇರಿಯನ್ನು ಧ್ವಂಸಗೊಳಿಸಿದ್ದಕ್ಕೆ ಬುಧವಾರವಷ್ಟೇ ಟ್ವೀಟ್ ಮಾಡಿದ್ದ ಆಶಾ ರಣಾವತ್, ಉದ್ಧವ್ ಠಾಕ್ರೆ ಇಂದು ನನ್ನ ಮಗಳು ಕಂಗನಾಳ ಕಚೇರಿಯನ್ನು ಮಾತ್ರ ನೀವು ಪುಡಿ ಮಾಡಿಲ್ಲ. ದಿವಂಗತ ಬಾಳಾ ಸಾಹೇಬ್ ಠಾಕ್ರೆಯವರ ಆತ್ಮವನ್ನು ಪುಡಿ ಮಾಡಿದ್ದೀರಿ ಎಂದು ಕಿಡಿ ಕಾರಿದ್ದರು.
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…