ಬೆಂಗಳೂರು: ಸದ್ಯಕ್ಕೆ ನೈಟ್ ಕರ್ಫ್ಯೂ ಹಾಗೂ ಕಠಿಣ ನಿರ್ಬಂಧಗಳು ಜಾರಿಗೊಳಿಸುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು,ಸದ್ಯಕ್ಕೆ ನೈಟ್ ಕರ್ಫ್ಯೂ ಕೂಡ ಇಲ್ಲ ಬದಲಾಗಿ ಒಂದು ವಾರದ ಬೆಳವಣಿಗೆ ಗಮನಿಸಿ ಬಳಿಕ ನಿರ್ಧಾರ ಮಾಡ್ತೇವೆ ಎಂದರು. ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮುಖ್ಯಸ್ಥ ಡಾ. ಸುದರ್ಶನ್ ಅವರ ಜೊತೆ ಚರ್ಚೆ ಮಾಡಿದ್ದೇವೆ. ಓಮಿಕ್ರಾನ್ ಬಗ್ಗೆ ಈಗಿರೋ ಪರಿಸ್ಥಿತಿ ನೋಡಿದಾಗ ಗಾಬರಿ ಅವಶ್ಯಕತೆಯಿಲ್ಲ. ಆದರೂ ಮುನ್ನೆಚ್ಷರಿಕೆ ಕ್ರಮ ಕೈಗೊಳ್ಳಬೇಕು ಎಂದರು.
ವಸತಿ ನಿಲಯಗಳಲ್ಲಿ ಸೋಂಕು ಪತ್ತೆ ವಿಚಾರವಾಗಿ ಮಾತನಾಡಿ, ಹಾಸ್ಟೆಲ್ ಗಳಿಗೆ ವಿಶೇಷ ಮಾರ್ಗಸೂಚಿ ಕೈಗೊಳ್ಳಲಾಗಿದೆ. ಒಂದೇ ಬಾರಿ ಎಲ್ಲರೂ ಊಟಕ್ಕೆ ಕೂರದಂತೆ ಸೂಚನೆ ನೀಡಲಾಗಿದೆ ಹಾಗೂ ವಾರ್ಡನ್, ಅಡುಗೆಯವರಿಗೆ ೨ ಡೋಸ್ ಲಸಿಕೆ ಆಗಬೇಕು. ಐಸೋಲೇಶನ್ ರೂಂ ಮಾಡಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
೩ ಜನರಿಗೆ ಬಂದ್ರೂ ಕ್ಲಸ್ಟರ್ ಅಂತ ನಿರ್ಧಾರ ಮಾಡಿದ್ದೇವೆ. ಕ್ಲಸ್ಟರ್ ಮ್ಯಾನೇಜ್ಮೆಂಟ್ಗೆ ಸೂಚನೆ ಕೊಟ್ಟಿದ್ದೇವೆ. ವ್ಯಾಕ್ಸಿನ್ ಡ್ರೈವ್ ಮಾಡಲು ಸಚಿವರ ಸಲಹೆ. ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳಲು ನಿರ್ಧಾರ ಮಾಡಲಾಗಿದೆ ಎಂದರು. ಇನ್ನು ಗಡಿ ಭಾಗದಲ್ಲಿರುವ ಕಟ್ಟೆಚ್ಚರ ಮುಂದುವರೆಯಲಿದೆ. ಕೇರಳ ವಿದ್ಯಾರ್ಥಿಗಳಿಗೆ ನಿರ್ಬಂಧ ಮುಂದುವರಿಯಲಿದೆ. ಆರ್ ಟಿಪಿಸಿಆರ್ ಟೆಸ್ಟ್ ಸೇರಿ ಇತರ ನಿರ್ಬಂಧಗಳು ಮುಂದುವರಿಯುತ್ತದೆ ಎಂದ ಅವರು ಒಂದು ವಾರದ ನಂತರ ಕ್ರಿಸ್ಮಸ್, ಹೊಸ ವರ್ಷಕ್ಕೆ ನಿಯಮಾವಳಿ ರೂಪಿಸುವ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…