ಬೆಂಗಳೂರು: ಸದ್ಯಕ್ಕೆ ನೈಟ್ ಕರ್ಫ್ಯೂ ಹಾಗೂ ಕಠಿಣ ನಿರ್ಬಂಧಗಳು ಜಾರಿಗೊಳಿಸುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು,ಸದ್ಯಕ್ಕೆ ನೈಟ್ ಕರ್ಫ್ಯೂ ಕೂಡ ಇಲ್ಲ ಬದಲಾಗಿ ಒಂದು ವಾರದ ಬೆಳವಣಿಗೆ ಗಮನಿಸಿ ಬಳಿಕ ನಿರ್ಧಾರ ಮಾಡ್ತೇವೆ ಎಂದರು. ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮುಖ್ಯಸ್ಥ ಡಾ. ಸುದರ್ಶನ್ ಅವರ ಜೊತೆ ಚರ್ಚೆ ಮಾಡಿದ್ದೇವೆ. ಓಮಿಕ್ರಾನ್ ಬಗ್ಗೆ ಈಗಿರೋ ಪರಿಸ್ಥಿತಿ ನೋಡಿದಾಗ ಗಾಬರಿ ಅವಶ್ಯಕತೆಯಿಲ್ಲ. ಆದರೂ ಮುನ್ನೆಚ್ಷರಿಕೆ ಕ್ರಮ ಕೈಗೊಳ್ಳಬೇಕು ಎಂದರು.
ವಸತಿ ನಿಲಯಗಳಲ್ಲಿ ಸೋಂಕು ಪತ್ತೆ ವಿಚಾರವಾಗಿ ಮಾತನಾಡಿ, ಹಾಸ್ಟೆಲ್ ಗಳಿಗೆ ವಿಶೇಷ ಮಾರ್ಗಸೂಚಿ ಕೈಗೊಳ್ಳಲಾಗಿದೆ. ಒಂದೇ ಬಾರಿ ಎಲ್ಲರೂ ಊಟಕ್ಕೆ ಕೂರದಂತೆ ಸೂಚನೆ ನೀಡಲಾಗಿದೆ ಹಾಗೂ ವಾರ್ಡನ್, ಅಡುಗೆಯವರಿಗೆ ೨ ಡೋಸ್ ಲಸಿಕೆ ಆಗಬೇಕು. ಐಸೋಲೇಶನ್ ರೂಂ ಮಾಡಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
೩ ಜನರಿಗೆ ಬಂದ್ರೂ ಕ್ಲಸ್ಟರ್ ಅಂತ ನಿರ್ಧಾರ ಮಾಡಿದ್ದೇವೆ. ಕ್ಲಸ್ಟರ್ ಮ್ಯಾನೇಜ್ಮೆಂಟ್ಗೆ ಸೂಚನೆ ಕೊಟ್ಟಿದ್ದೇವೆ. ವ್ಯಾಕ್ಸಿನ್ ಡ್ರೈವ್ ಮಾಡಲು ಸಚಿವರ ಸಲಹೆ. ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳಲು ನಿರ್ಧಾರ ಮಾಡಲಾಗಿದೆ ಎಂದರು. ಇನ್ನು ಗಡಿ ಭಾಗದಲ್ಲಿರುವ ಕಟ್ಟೆಚ್ಚರ ಮುಂದುವರೆಯಲಿದೆ. ಕೇರಳ ವಿದ್ಯಾರ್ಥಿಗಳಿಗೆ ನಿರ್ಬಂಧ ಮುಂದುವರಿಯಲಿದೆ. ಆರ್ ಟಿಪಿಸಿಆರ್ ಟೆಸ್ಟ್ ಸೇರಿ ಇತರ ನಿರ್ಬಂಧಗಳು ಮುಂದುವರಿಯುತ್ತದೆ ಎಂದ ಅವರು ಒಂದು ವಾರದ ನಂತರ ಕ್ರಿಸ್ಮಸ್, ಹೊಸ ವರ್ಷಕ್ಕೆ ನಿಯಮಾವಳಿ ರೂಪಿಸುವ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದರು.
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…
ನಾಳೆ SSLC ಫಲಿತಾಂಶ ಪ್ರಕಟ ಬೆಂಗಳೂರು: ನಾಳೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…
ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ…