Featured

ಸದ್ಯಕ್ಕೆ ನೈಟ್ ಕರ್ಫ್ಯೂ ಹಾಗೂ ಕಠಿಣ ನಿರ್ಬಂಧಗಳು ಜಾರಿಗೊಳಿಸುವುದಿಲ್ಲ ; ಒಂದು ವಾರದ ಬೆಳವಣಿಗೆ ಗಮನಿಸಿ ಬಳಿಕ ನಿರ್ಧಾರ : ಸಿಎಂ ಬೊಮ್ಮಾಯಿ – Vishwanews24

ಸದ್ಯಕ್ಕೆ ನೈಟ್ ಕರ್ಫ್ಯೂ ಹಾಗೂ ಕಠಿಣ ನಿರ್ಬಂಧಗಳು ಜಾರಿಗೊಳಿಸುವುದಿಲ್ಲ ; ಒಂದು ವಾರದ ಬೆಳವಣಿಗೆ ಗಮನಿಸಿ ಬಳಿಕ ನಿರ್ಧಾರ : ಸಿಎಂ ಬೊಮ್ಮಾಯಿ

ಒಂದು ವಾರದ ನಂತರ ಕ್ರಿಸ್ಮಸ್, ಹೊಸ ವರ್ಷಕ್ಕೆ ನಿಯಮಾವಳಿ ರೂಪಿಸುವ ಬಗ್ಗೆ ನಿರ್ಧಾರ..

ಬೆಂಗಳೂರು: ಸದ್ಯಕ್ಕೆ ನೈಟ್ ಕರ್ಫ್ಯೂ ಹಾಗೂ ಕಠಿಣ ನಿರ್ಬಂಧಗಳು ಜಾರಿಗೊಳಿಸುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು,ಸದ್ಯಕ್ಕೆ ನೈಟ್ ಕರ್ಫ್ಯೂ ಕೂಡ ಇಲ್ಲ ಬದಲಾಗಿ ಒಂದು ವಾರದ ಬೆಳವಣಿಗೆ ಗಮನಿಸಿ ಬಳಿಕ ನಿರ್ಧಾರ ಮಾಡ್ತೇವೆ ಎಂದರು. ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮುಖ್ಯಸ್ಥ ಡಾ. ಸುದರ್ಶನ್ ಅವರ ಜೊತೆ ಚರ್ಚೆ ಮಾಡಿದ್ದೇವೆ. ಓಮಿಕ್ರಾನ್ ಬಗ್ಗೆ ಈಗಿರೋ ಪರಿಸ್ಥಿತಿ ನೋಡಿದಾಗ ಗಾಬರಿ ಅವಶ್ಯಕತೆಯಿಲ್ಲ. ಆದರೂ‌ ಮುನ್ನೆಚ್ಷರಿಕೆ ಕ್ರಮ ಕೈಗೊಳ್ಳಬೇಕು ಎಂದರು.

ವಸತಿ ನಿಲಯಗಳಲ್ಲಿ ಸೋಂಕು ಪತ್ತೆ ವಿಚಾರವಾಗಿ ಮಾತನಾಡಿ, ಹಾಸ್ಟೆಲ್ ಗಳಿಗೆ ವಿಶೇಷ ಮಾರ್ಗಸೂಚಿ ಕೈಗೊಳ್ಳಲಾಗಿದೆ. ಒಂದೇ ಬಾರಿ ಎಲ್ಲರೂ ಊಟಕ್ಕೆ ಕೂರದಂತೆ ಸೂಚನೆ ನೀಡಲಾಗಿದೆ ಹಾಗೂ ವಾರ್ಡನ್, ಅಡುಗೆಯವರಿಗೆ ೨ ಡೋಸ್ ಲಸಿಕೆ ಆಗಬೇಕು. ಐಸೋಲೇಶನ್ ರೂಂ ಮಾಡಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

೩ ಜನರಿಗೆ ಬಂದ್ರೂ ಕ್ಲಸ್ಟರ್ ಅಂತ ನಿರ್ಧಾರ ಮಾಡಿದ್ದೇವೆ. ಕ್ಲಸ್ಟರ್ ಮ್ಯಾನೇಜ್‌ಮೆಂಟ್‌ಗೆ ಸೂಚನೆ ಕೊಟ್ಟಿದ್ದೇವೆ. ವ್ಯಾಕ್ಸಿನ್ ಡ್ರೈವ್ ಮಾಡಲು ಸಚಿವರ ಸಲಹೆ. ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳಲು ನಿರ್ಧಾರ ಮಾಡಲಾಗಿದೆ ಎಂದರು. ಇನ್ನು ಗಡಿ ಭಾಗದಲ್ಲಿರುವ ಕಟ್ಟೆಚ್ಚರ ಮುಂದುವರೆಯಲಿದೆ. ಕೇರಳ ವಿದ್ಯಾರ್ಥಿಗಳಿಗೆ ನಿರ್ಬಂಧ ಮುಂದುವರಿಯಲಿದೆ. ಆರ್ ಟಿಪಿಸಿಆರ್ ಟೆಸ್ಟ್ ಸೇರಿ ಇತರ ನಿರ್ಬಂಧಗಳು ಮುಂದುವರಿಯುತ್ತದೆ ಎಂದ ಅವರು ಒಂದು ವಾರದ ನಂತರ ಕ್ರಿಸ್ಮಸ್, ಹೊಸ ವರ್ಷಕ್ಕೆ ನಿಯಮಾವಳಿ ರೂಪಿಸುವ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದರು.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

8 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

8 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

8 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

8 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

9 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

9 hours ago