ಧಾರವಾಡ: ಸನಾತನ ಧರ್ಮ ಶಾಂತಿಯ ಸಂದೇಶ ಸಾರುತ್ತದೆ ಹೊರತು, ಅದು ಡೆಂಗ್ಯೂ, ಮಲೇರಿಯಾದಂತೆ ರೋಗ ಹರಡುವ ಸೊಳ್ಳೆಯಲ್ಲ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.
ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುತಾಲಿಕ್, ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ ಎಂಬ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಹೇಳಿಕೆಗೆ ತಿರುಗೇಟು ಕೊಟ್ಟಿದ್ದಾರೆ.
ಉದಯನಿಧಿ ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಸನಾತನ ಧರ್ಮವನ್ನ ಡೆಂಗ್ಯೂ, ಮಲೇರಿಯಾದಂತೆ ನಾಶ ಮಾಡಬೇಕು ಎಂದು ಹೇಳುವುದು ಜಾತಿಗಳ ಮಧ್ಯೆ ವೈಷಮ್ಯ ಮೂಡಿಸುತ್ತದೆ. ಇದನ್ನು ನಾವು ಖಂಡಿಸುತ್ತೇವೆ. ಉದಯನಿಧಿ ಇನ್ನೂ ಬಚ್ಚ, ಇನ್ನೂ ಕಣ್ಣೇ ಬಿಟ್ಟಿಲ್ಲ, ಆದ್ರೆ ಅತ್ಯಂತ ಕೀಳುಮಟ್ಟದ ಹೇಳಿಕೆ ನೀಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸನಾತನ ಧರ್ಮ ಶಾಂತಿಯ ಸಂದೇಶ ಸಾರುತ್ತದೆಯೇ ಹೊರತು, ಅದು ಡೆಂಗ್ಯೂ, ಮಲೇರಿಯಾದಂತೆ ರೋಗ ಹರಡುವ ಸೊಳ್ಳೆಯಲ್ಲ. ಸನಾತನ ಧರ್ಮ ಗಂಧದ ಮರ ಇದ್ದಂತೆ. ಅದನ್ನು ನಾಶ ಮಾಡಲು ಹೋದಷ್ಟೂ ಸುಗಂಧ ಹರಡುತ್ತದೆ ಎಂದು ಹೇಳಿದ್ದಾರೆ.
ಪೆರಿಯಾರ್ನಿಂದ ಹಿಡಿದು ಇಲ್ಲಿಯವರೆಗೂ ನಾಸ್ತಿಕವಾದ ಮಾಡುತ್ತಾ ಬಂದಿದ್ದಾರೆ. ಇವರ ಈ ಹೇಳಿಕೆಯಿಂದ ದೊಡ್ಡ ಅನಾಹುತ ಆಗುತ್ತದೆ. ನಿಮ್ಮ ರಾಜಕೀಯ ವ್ಯವಸ್ಥೆ ನಾಶವಾಗುತ್ತದೆ. ಅವರು ತಮ್ಮ ಹೇಳಿಕೆಯನ್ನ ವಾಪಸ್ ಪಡೆಯಬೇಕು. ಈ ಸಂಬಂಧ ಅವರ ವಿರುದ್ಧ ಧಾರವಾಡ, ಬೆಂಗಳೂರು ಹಾಗೂ ಕಲಬುರ್ಗಿ ಕೋರ್ಟ್ಗಳಲ್ಲಿ ಕೇಸ್ ದಾಖಲಿಸಲಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಉದಯನಿಧಿ ಸ್ಟಾಲಿನ್ ಹೇಳಿದ್ದೇನು?
ಲೇಖಕರ ಸಮಾವೇಶವೊಂದರಲ್ಲಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್, ಸನಾತನನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು. ಈ ಪರಿಕಲ್ಪನೆಯು ಅಂತರ್ಗತವಾಗಿ ಹಿಂದುಳಿದಿದೆ. ಇದು ಜಾತಿ ಮತ್ತು ಆಧಾರದ ಮೇಲೆ ಜನರನ್ನು ವಿಭಜಿಸುತ್ತದೆ. ಮೂಲಭೂತವಾಗಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತದೆ ಎಂದು ಹೇಳಿದ್ದರು.
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…