Featured

ಸನಾತನ ಧರ್ಮ ಶಾಂತಿಯ ಸಂದೇಶ ಸಾರುತ್ತದೆ ಹೊರತು , ಡೆಂಗ್ಯೂ, ಮಲೇರಿಯಾದಂತೆ ರೋಗ ಹರಡುವ ಸೊಳ್ಳೆಯಲ್ಲ : ಉದಯನಿಧಿ ಹೇಳಿಕೆಗೆ ಪ್ರಮೋದ್‌ ಮುತಾಲಿಕ್‌ ತಿರುಗೇಟು  – Vishwanews24

ಸನಾತನ ಧರ್ಮ ಶಾಂತಿಯ ಸಂದೇಶ ಸಾರುತ್ತದೆ ಹೊರತು , ಡೆಂಗ್ಯೂ, ಮಲೇರಿಯಾದಂತೆ ರೋಗ ಹರಡುವ ಸೊಳ್ಳೆಯಲ್ಲ : ಉದಯನಿಧಿ ಹೇಳಿಕೆಗೆ ಪ್ರಮೋದ್‌ ಮುತಾಲಿಕ್‌ ತಿರುಗೇಟು

ಧಾರವಾಡ: ಸನಾತನ ಧರ್ಮ ಶಾಂತಿಯ ಸಂದೇಶ ಸಾರುತ್ತದೆ ಹೊರತು, ಅದು ಡೆಂಗ್ಯೂ, ಮಲೇರಿಯಾದಂತೆ ರೋಗ ಹರಡುವ ಸೊಳ್ಳೆಯಲ್ಲ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌  ತಿಳಿಸಿದ್ದಾರೆ.

ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುತಾಲಿಕ್‌, ಸನಾತನ ಧರ್ಮ  ಡೆಂಗ್ಯೂ, ಮಲೇರಿಯಾ ಇದ್ದಂತೆ ಎಂಬ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಹೇಳಿಕೆಗೆ ತಿರುಗೇಟು ಕೊಟ್ಟಿದ್ದಾರೆ.

ಉದಯನಿಧಿ ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಸನಾತನ ಧರ್ಮವನ್ನ ಡೆಂಗ್ಯೂ, ಮಲೇರಿಯಾದಂತೆ ನಾಶ ಮಾಡಬೇಕು ಎಂದು ಹೇಳುವುದು ಜಾತಿಗಳ ಮಧ್ಯೆ ವೈಷಮ್ಯ ಮೂಡಿಸುತ್ತದೆ. ಇದನ್ನು ನಾವು ಖಂಡಿಸುತ್ತೇವೆ. ಉದಯನಿಧಿ ಇನ್ನೂ ಬಚ್ಚ, ಇನ್ನೂ ಕಣ್ಣೇ ಬಿಟ್ಟಿಲ್ಲ, ಆದ್ರೆ ಅತ್ಯಂತ ಕೀಳುಮಟ್ಟದ ಹೇಳಿಕೆ ನೀಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸನಾತನ ಧರ್ಮ ಶಾಂತಿಯ ಸಂದೇಶ ಸಾರುತ್ತದೆಯೇ ಹೊರತು, ಅದು ಡೆಂಗ್ಯೂ, ಮಲೇರಿಯಾದಂತೆ ರೋಗ ಹರಡುವ ಸೊಳ್ಳೆಯಲ್ಲ. ಸನಾತನ ಧರ್ಮ ಗಂಧದ ಮರ ಇದ್ದಂತೆ. ಅದನ್ನು ನಾಶ ಮಾಡಲು ಹೋದಷ್ಟೂ ಸುಗಂಧ ಹರಡುತ್ತದೆ ಎಂದು ಹೇಳಿದ್ದಾರೆ.

ಪೆರಿಯಾರ್‌ನಿಂದ ಹಿಡಿದು ಇಲ್ಲಿಯವರೆಗೂ ನಾಸ್ತಿಕವಾದ ಮಾಡುತ್ತಾ ಬಂದಿದ್ದಾರೆ. ಇವರ ಈ ಹೇಳಿಕೆಯಿಂದ ದೊಡ್ಡ ಅನಾಹುತ ಆಗುತ್ತದೆ. ನಿಮ್ಮ ರಾಜಕೀಯ ವ್ಯವಸ್ಥೆ ನಾಶವಾಗುತ್ತದೆ. ಅವರು ತಮ್ಮ ಹೇಳಿಕೆಯನ್ನ ವಾಪಸ್ ಪಡೆಯಬೇಕು. ಈ ಸಂಬಂಧ ಅವರ ವಿರುದ್ಧ ಧಾರವಾಡ, ಬೆಂಗಳೂರು ಹಾಗೂ ಕಲಬುರ್ಗಿ ಕೋರ್ಟ್‌ಗಳಲ್ಲಿ ಕೇಸ್ ದಾಖಲಿಸಲಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಉದಯನಿಧಿ ಸ್ಟಾಲಿನ್ ಹೇಳಿದ್ದೇನು?
ಲೇಖಕರ ಸಮಾವೇಶವೊಂದರಲ್ಲಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್, ಸನಾತನನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು. ಈ ಪರಿಕಲ್ಪನೆಯು ಅಂತರ್ಗತವಾಗಿ ಹಿಂದುಳಿದಿದೆ. ಇದು ಜಾತಿ ಮತ್ತು ಆಧಾರದ ಮೇಲೆ ಜನರನ್ನು ವಿಭಜಿಸುತ್ತದೆ. ಮೂಲಭೂತವಾಗಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತದೆ ಎಂದು ಹೇಳಿದ್ದರು.

Vishwa News 24

Recent Posts

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

1 hour ago

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

2 hours ago

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

2 hours ago

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

2 hours ago

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

2 hours ago

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾ.ಪಂ ಸಿಬ್ಬಂದಿ ವಜಾ – vishwanews24

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…

2 hours ago