ಬೆಂಗಳೂರು: ಒಂದೇ ವಾಹನದಲ್ಲಿ ಅನ್ಯ ಕೋಮಿನ ಯುವಕ ಯುವತಿಯರು ಜೊತೆಯಾಗಿ ಪ್ರಯಾಣಿಸಿದರು ಎಂಬ ಕಾರಣಕ್ಕೆ ಮಂಗಳೂರಿನ ಸುರತ್ಕಲ್ ಬಳಿ ಹಿಂದೂ ಸಂಘಟನೆ ಯುವಕರು ತಡೆದು ಪ್ರಶ್ನಿಸಿ, ನಿಂದಿಸಿದ ಘಟನೆಯ ಕುರಿತಾಗಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿನಲ್ಲಿ ಇರುವುದು ಬಿಜೆಪಿ ಸರ್ಕಾರನಾ? ತಾಲಿಬಾನ್ಗಳದ್ದಾ? ಎಂದು ಪ್ರಶ್ನಿಸಿದ್ದಾರೆ.
ಈ ಬಗ್ಗೆ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು, ” ಸನ್ಮಾನ್ಯ ಕರ್ನಾಟಕದ ಮುಖ್ಯಮಂತ್ರಿಗಳೇ , ಮಂಗಳೂರಿನಲ್ಲಿ ಇರುವುದು ಬಿಜೆಪಿ ಆಡಳಿತದ ಸರ್ಕಾರನಾ? ತಾಲಿಬಾನ್ಗಳದ್ದಾ? ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ : ಉಡುಪಿ: ಕ್ರೈಸ್ತ ಸಮುದಾಯ ಎಂದಿಗೂ ಕೂಡ ಅಮಿಷದ ಅಥವಾ ಬಲವಂತದ ಮತಾಂತರವನ್ನು ವಿರೋಧಿಸುತ್ತದೆ : ಕ್ರೈಸ್ತ ಹಕ್ಕುಗಳ ಒಕ್ಕೂಟ -Vishwanews24
ಮಂಗಳೂರಿನ ಸುರತ್ಕಲ್ ಬಳಿ ಕಾಲೇಜೊಂದರ ವಿದ್ಯಾರ್ಥಿ ವಿದ್ಯಾರ್ಥಿನಿಯರು ಮಲ್ಪೆ ಬೀಚ್ ಗೆ ತಿರುಗಾಡಲು ಬಂದು ವಾಪಾಸಾಗುವ ವೇಳೆ ಸುರತ್ಕಲ್ ಟೋಲ್ ಗೇಟ್ ಬಳಿ ಸಂಘಟನೆಯೊಂದರ ಕಾರ್ಯಕರ್ತರು ಕಾರಿನಲ್ಲಿ ಎರಡು ಕೋಮಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಜೊತೆಯಾಗಿ ತೆರಳಿದ್ದಾರೆ ಎಂಬ ಮಾಹಿತಿಯ ಮೇರೆಗೆ ತಡೆದು ಪ್ರಶ್ನಿಸಿ, ನಿಂದಿಸಿದ್ದರು. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಘಟನೆಗೆ ಸಂಬಂಧ ಈಗಾಗಲೇ ವಿದ್ಯಾರ್ಥಿ ಸವಿಯೊ ಟಿ ಅಲೋನ್ಸೊ (20) ಸಲ್ಲಿಸಿದ ದೂರಿನ ಆಧಾರದ ಮೇಲೆ, ಸುರತ್ಕಲ್ ಪೊಲೀಸರು ಐವರು ಬಂಧಿಸಿದ್ದಾರೆ.
ಇದನ್ನೂ ಓದಿ : ಜನರಲ್ಲಿ ಆತ್ಮವಿಶ್ವಾಸ ತುಂಬಲು ಪೊಲೀಸರಿಗೆ ಹೃದಯವಂತಿಕೆ ಬೇಕೇ ಹೊರತು ಕಠಿಣ ನಿರ್ಧಾರಗಳಲ್ಲ : ಗೃಹ ಸಚಿವ ಅರಗ ಜ್ಞಾನೆಂದ್ರ -Vishwanews24
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]