ಮೈಸೂರು : ನಮ್ಮ ಪ್ರಧಾನಿ ನರೇಂದ್ರ ಮೋದಿ ಒಳ್ಖೆಯ ಕೆಲಸ ಮಾಡಿದ್ದಾರೆ, ಅದನ್ನು ಮೆಚ್ಚಲೇಬೇಕು. ವಾಜಪೇಯಿ ಮಾಡದಂತಹ ಕೆಲಸವನ್ನು ಮೋದಿ ಮಾಡಿದ್ದಾರೆ. ಇದಕ್ಕೆ ನಾನು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದೇನೆ ಎಂದು ಪ್ರೊ.ಕೆ ಎಸ್ ಭಗವಾನ್ ಹೇಳಿದ್ದಾರೆ.
ಜಮ್ಮು ಕಾಶ್ಮೀರ ವಿಚಾರದಲ್ಲಿ ಕೇಂದ್ರ ಸರ್ಕಾರದ ನಿರ್ಧಾರದ ಕುರಿತು ಪ್ರತಿಕ್ರಿಯಿಸಿದ ಅವರು, ಒಳ್ಳೆ ಕೆಲಸ ಮಾಡಿದರೆ ಅದನ್ನು ಮೆಚ್ಚಬೇಕು. ನಮ್ಮ ಪ್ರಧಾನಿ ಮೋದಿ ಒಳ್ಳೆಯ ಕೆಲಸ ಮಾಡಿದ್ದಾರೆ. ವಾಜಪೇಯಿ ಮಾಡದಂತ ಕೆಲಸವನ್ನು ಮೋದಿ ಮಾಡಿದ್ದಾರೆ. ಇದಕ್ಕೆ ನಾನು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದೇನೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
‘ಆರ್ಟಿಕಲ್ 370ನ್ನು ರದ್ದತಿ ಮೂಲಕ, ರಾಷ್ಟ್ರವನ್ನು ಹಾಗೂ 72 ವರ್ಷಗಳಿಂದ ಸಂಕಟದಲ್ಲಿ ನರಳುತ್ತಿದ್ದ ಕಾಶ್ಮೀರದ ಜನತೆಯನ್ನು ನಮ್ಮ ನೆಚ್ಚಿನ ಪ್ರಧಾನಿ ಸಂತಸಪಡಿಸಿದ್ದಾರೆ. ಅಲ್ಲಿ, ಕೋಟಿಗಟ್ಟಲೆ ಖರ್ಚು ಮಾಡುತ್ತಿದ್ದ ಹಣವನ್ನು ಇನ್ನುಮುಂದೆ ಜನತೆಯ ಕಲ್ಯಾಣಕ್ಕಾಗಿ, ಅಭಿವೃದ್ಧಿಗಾಗಿ ಬಳಸಲು ಅನುಕೂಲ’ ಎಂದು ಹೇಳಿದ್ದಾರೆ.
ಇಡೀ ದೇಶವನ್ನು ಒಂದೇ ಸಂವಿಧಾನದ ಅಡಿ ತಂದಿರುವುದು ಬಹಳ ಶ್ಲಾಘನೀಯ ಕಾರ್ಯ. ಇದಕ್ಕಾಗಿ ಇಡೀ ರಾಷ್ಟ್ರ ತಹ ತಹಿಸುತ್ತಿತ್ತು. ಸನ್ಮಾನ್ಯ ಮೋದಿ ಇತಿಹಾಸದಲ್ಲಿ ಅಜರಾಮರವಾಗಿ ಉಳಿಯುತ್ತಾರೆ ಎನ್ನಲು ಸಂತೋಷ ಮತ್ತು ಹೆಮ್ಮೆ ಆಗುತ್ತದೆ. ಜೈ ನರೇಂದ್ರ ಮೋದಿ!’ ಎಂದು ಭಗವಾನ್ ಹೊಗಳಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಅವರು, ‘ಈ ಪತ್ರವನ್ನು ಕುಹಕದಿಂದಾಗಲೀ, ವ್ಯಂಗ್ಯದಿಂದಾಗಲೀ ಬರೆದಿಲ್ಲ. ಕಾಶ್ಮೀರ ವಿಷಯದಲ್ಲಿ ಕೇಂದ್ರ ಸರ್ಕಾರದ ನಿರ್ಧಾರ ಸರಿಯಾಗಿದೆ. ಹಾಗಾಗಿ, ಮುಕ್ತ ಮನಸ್ಸಿನಿಂದ ಶ್ಲಾಘಿಸಿದ್ದೇನೆ’ ಎಂದರು
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…