ಮೈಸೂರು : ನಮ್ಮ ಪ್ರಧಾನಿ ನರೇಂದ್ರ ಮೋದಿ ಒಳ್ಖೆಯ ಕೆಲಸ ಮಾಡಿದ್ದಾರೆ, ಅದನ್ನು ಮೆಚ್ಚಲೇಬೇಕು. ವಾಜಪೇಯಿ ಮಾಡದಂತಹ ಕೆಲಸವನ್ನು ಮೋದಿ ಮಾಡಿದ್ದಾರೆ. ಇದಕ್ಕೆ ನಾನು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದೇನೆ ಎಂದು ಪ್ರೊ.ಕೆ ಎಸ್ ಭಗವಾನ್ ಹೇಳಿದ್ದಾರೆ.
ಜಮ್ಮು ಕಾಶ್ಮೀರ ವಿಚಾರದಲ್ಲಿ ಕೇಂದ್ರ ಸರ್ಕಾರದ ನಿರ್ಧಾರದ ಕುರಿತು ಪ್ರತಿಕ್ರಿಯಿಸಿದ ಅವರು, ಒಳ್ಳೆ ಕೆಲಸ ಮಾಡಿದರೆ ಅದನ್ನು ಮೆಚ್ಚಬೇಕು. ನಮ್ಮ ಪ್ರಧಾನಿ ಮೋದಿ ಒಳ್ಳೆಯ ಕೆಲಸ ಮಾಡಿದ್ದಾರೆ. ವಾಜಪೇಯಿ ಮಾಡದಂತ ಕೆಲಸವನ್ನು ಮೋದಿ ಮಾಡಿದ್ದಾರೆ. ಇದಕ್ಕೆ ನಾನು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದೇನೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
‘ಆರ್ಟಿಕಲ್ 370ನ್ನು ರದ್ದತಿ ಮೂಲಕ, ರಾಷ್ಟ್ರವನ್ನು ಹಾಗೂ 72 ವರ್ಷಗಳಿಂದ ಸಂಕಟದಲ್ಲಿ ನರಳುತ್ತಿದ್ದ ಕಾಶ್ಮೀರದ ಜನತೆಯನ್ನು ನಮ್ಮ ನೆಚ್ಚಿನ ಪ್ರಧಾನಿ ಸಂತಸಪಡಿಸಿದ್ದಾರೆ. ಅಲ್ಲಿ, ಕೋಟಿಗಟ್ಟಲೆ ಖರ್ಚು ಮಾಡುತ್ತಿದ್ದ ಹಣವನ್ನು ಇನ್ನುಮುಂದೆ ಜನತೆಯ ಕಲ್ಯಾಣಕ್ಕಾಗಿ, ಅಭಿವೃದ್ಧಿಗಾಗಿ ಬಳಸಲು ಅನುಕೂಲ’ ಎಂದು ಹೇಳಿದ್ದಾರೆ.
ಇಡೀ ದೇಶವನ್ನು ಒಂದೇ ಸಂವಿಧಾನದ ಅಡಿ ತಂದಿರುವುದು ಬಹಳ ಶ್ಲಾಘನೀಯ ಕಾರ್ಯ. ಇದಕ್ಕಾಗಿ ಇಡೀ ರಾಷ್ಟ್ರ ತಹ ತಹಿಸುತ್ತಿತ್ತು. ಸನ್ಮಾನ್ಯ ಮೋದಿ ಇತಿಹಾಸದಲ್ಲಿ ಅಜರಾಮರವಾಗಿ ಉಳಿಯುತ್ತಾರೆ ಎನ್ನಲು ಸಂತೋಷ ಮತ್ತು ಹೆಮ್ಮೆ ಆಗುತ್ತದೆ. ಜೈ ನರೇಂದ್ರ ಮೋದಿ!’ ಎಂದು ಭಗವಾನ್ ಹೊಗಳಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಅವರು, ‘ಈ ಪತ್ರವನ್ನು ಕುಹಕದಿಂದಾಗಲೀ, ವ್ಯಂಗ್ಯದಿಂದಾಗಲೀ ಬರೆದಿಲ್ಲ. ಕಾಶ್ಮೀರ ವಿಷಯದಲ್ಲಿ ಕೇಂದ್ರ ಸರ್ಕಾರದ ನಿರ್ಧಾರ ಸರಿಯಾಗಿದೆ. ಹಾಗಾಗಿ, ಮುಕ್ತ ಮನಸ್ಸಿನಿಂದ ಶ್ಲಾಘಿಸಿದ್ದೇನೆ’ ಎಂದರು
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…
ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…
ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ - ಫಲ್ಗುಣಿ ನದಿಯಲ್ಲಿ ಶೋಧ…
ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…
ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…
ನಕಲಿ ಪಾಸ್ಪೋರ್ಟ್ ಪ್ರಕರಣ: ಮಂಗಳೂರು ಟ್ರಾವೆಲ್ ಏಜೆಂಟ್ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…