Featured

ಸನ್ಮಾನ್ಯ ಮೋದಿ ಇತಿಹಾಸದಲ್ಲಿ ಅಜರಾಮರವಾಗಿ ಉಳಿಯುತ್ತಾರೆ ಎನ್ನಲು ಸಂತೋಷ ಮತ್ತು ಹೆಮ್ಮೆ ಆಗುತ್ತದೆ: ಪ್ರೊ.ಕೆ ಎಸ್ ಭಗವಾನ್ -Vishwanews24

ಮೈಸೂರು : ನಮ್ಮ ಪ್ರಧಾನಿ ನರೇಂದ್ರ ಮೋದಿ ಒಳ್ಖೆಯ ಕೆಲಸ ಮಾಡಿದ್ದಾರೆ, ಅದನ್ನು ಮೆಚ್ಚಲೇಬೇಕು. ವಾಜಪೇಯಿ ಮಾಡದಂತಹ ಕೆಲಸವನ್ನು ಮೋದಿ ಮಾಡಿದ್ದಾರೆ. ಇದಕ್ಕೆ ನಾನು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದೇನೆ ಎಂದು ಪ್ರೊ.ಕೆ ಎಸ್ ಭಗವಾನ್ ಹೇಳಿದ್ದಾರೆ.

ಜಮ್ಮು ಕಾಶ್ಮೀರ ವಿಚಾರದಲ್ಲಿ ಕೇಂದ್ರ ಸರ್ಕಾರದ ನಿರ್ಧಾರದ ಕುರಿತು ಪ್ರತಿಕ್ರಿಯಿಸಿದ ಅವರು, ಒಳ್ಳೆ ಕೆಲಸ ಮಾಡಿದರೆ ಅದನ್ನು ಮೆಚ್ಚಬೇಕು. ನಮ್ಮ ಪ್ರಧಾನಿ ಮೋದಿ ಒಳ್ಳೆಯ ಕೆಲಸ ಮಾಡಿದ್ದಾರೆ. ವಾಜಪೇಯಿ ಮಾಡದಂತ ಕೆಲಸವನ್ನು ಮೋದಿ ಮಾಡಿದ್ದಾರೆ. ಇದಕ್ಕೆ ನಾನು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದೇನೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ಆರ್ಟಿಕಲ್ 370ನ್ನು ರದ್ದತಿ ಮೂಲಕ, ರಾಷ್ಟ್ರವನ್ನು ಹಾಗೂ 72 ವರ್ಷಗಳಿಂದ ಸಂಕಟದಲ್ಲಿ ನರಳುತ್ತಿದ್ದ ಕಾಶ್ಮೀರದ ಜನತೆಯನ್ನು ನಮ್ಮ ನೆಚ್ಚಿನ ಪ್ರಧಾನಿ ಸಂತಸಪಡಿಸಿದ್ದಾರೆ. ಅಲ್ಲಿ, ಕೋಟಿಗಟ್ಟಲೆ ಖರ್ಚು ಮಾಡುತ್ತಿದ್ದ ಹಣವನ್ನು ಇನ್ನುಮುಂದೆ ಜನತೆಯ ಕಲ್ಯಾಣಕ್ಕಾಗಿ, ಅಭಿವೃದ್ಧಿಗಾಗಿ ಬಳಸಲು ಅನುಕೂಲ’ ಎಂದು ಹೇಳಿದ್ದಾರೆ.

ಇಡೀ ದೇಶವನ್ನು ಒಂದೇ ಸಂವಿಧಾನದ ಅಡಿ ತಂದಿರುವುದು ಬಹಳ ಶ್ಲಾಘನೀಯ ಕಾರ್ಯ. ಇದಕ್ಕಾಗಿ ಇಡೀ ರಾಷ್ಟ್ರ ತಹ ತಹಿಸುತ್ತಿತ್ತು. ಸನ್ಮಾನ್ಯ ಮೋದಿ ಇತಿಹಾಸದಲ್ಲಿ ಅಜರಾಮರವಾಗಿ ಉಳಿಯುತ್ತಾರೆ ಎನ್ನಲು ಸಂತೋಷ ಮತ್ತು ಹೆಮ್ಮೆ ಆಗುತ್ತದೆ. ಜೈ ನರೇಂದ್ರ ಮೋದಿ!’ ಎಂದು ಭಗವಾನ್‌ ಹೊಗಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಅವರು, ‘ಈ ಪತ್ರವನ್ನು ಕುಹಕದಿಂದಾಗಲೀ, ವ್ಯಂಗ್ಯದಿಂದಾಗಲೀ ಬರೆದಿಲ್ಲ. ಕಾಶ್ಮೀರ ವಿಷಯದಲ್ಲಿ ಕೇಂದ್ರ ಸರ್ಕಾರದ ನಿರ್ಧಾರ ಸರಿಯಾಗಿದೆ. ಹಾಗಾಗಿ, ಮುಕ್ತ ಮನಸ್ಸಿನಿಂದ ಶ್ಲಾಘಿಸಿದ್ದೇನೆ’ ಎಂದರು

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

9 hours ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

9 hours ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

10 hours ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

10 hours ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

13 hours ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

13 hours ago