ಮೈಸೂರು : ನಮ್ಮ ಪ್ರಧಾನಿ ನರೇಂದ್ರ ಮೋದಿ ಒಳ್ಖೆಯ ಕೆಲಸ ಮಾಡಿದ್ದಾರೆ, ಅದನ್ನು ಮೆಚ್ಚಲೇಬೇಕು. ವಾಜಪೇಯಿ ಮಾಡದಂತಹ ಕೆಲಸವನ್ನು ಮೋದಿ ಮಾಡಿದ್ದಾರೆ. ಇದಕ್ಕೆ ನಾನು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದೇನೆ ಎಂದು ಪ್ರೊ.ಕೆ ಎಸ್ ಭಗವಾನ್ ಹೇಳಿದ್ದಾರೆ.
ಜಮ್ಮು ಕಾಶ್ಮೀರ ವಿಚಾರದಲ್ಲಿ ಕೇಂದ್ರ ಸರ್ಕಾರದ ನಿರ್ಧಾರದ ಕುರಿತು ಪ್ರತಿಕ್ರಿಯಿಸಿದ ಅವರು, ಒಳ್ಳೆ ಕೆಲಸ ಮಾಡಿದರೆ ಅದನ್ನು ಮೆಚ್ಚಬೇಕು. ನಮ್ಮ ಪ್ರಧಾನಿ ಮೋದಿ ಒಳ್ಳೆಯ ಕೆಲಸ ಮಾಡಿದ್ದಾರೆ. ವಾಜಪೇಯಿ ಮಾಡದಂತ ಕೆಲಸವನ್ನು ಮೋದಿ ಮಾಡಿದ್ದಾರೆ. ಇದಕ್ಕೆ ನಾನು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದೇನೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
‘ಆರ್ಟಿಕಲ್ 370ನ್ನು ರದ್ದತಿ ಮೂಲಕ, ರಾಷ್ಟ್ರವನ್ನು ಹಾಗೂ 72 ವರ್ಷಗಳಿಂದ ಸಂಕಟದಲ್ಲಿ ನರಳುತ್ತಿದ್ದ ಕಾಶ್ಮೀರದ ಜನತೆಯನ್ನು ನಮ್ಮ ನೆಚ್ಚಿನ ಪ್ರಧಾನಿ ಸಂತಸಪಡಿಸಿದ್ದಾರೆ. ಅಲ್ಲಿ, ಕೋಟಿಗಟ್ಟಲೆ ಖರ್ಚು ಮಾಡುತ್ತಿದ್ದ ಹಣವನ್ನು ಇನ್ನುಮುಂದೆ ಜನತೆಯ ಕಲ್ಯಾಣಕ್ಕಾಗಿ, ಅಭಿವೃದ್ಧಿಗಾಗಿ ಬಳಸಲು ಅನುಕೂಲ’ ಎಂದು ಹೇಳಿದ್ದಾರೆ.
ಇಡೀ ದೇಶವನ್ನು ಒಂದೇ ಸಂವಿಧಾನದ ಅಡಿ ತಂದಿರುವುದು ಬಹಳ ಶ್ಲಾಘನೀಯ ಕಾರ್ಯ. ಇದಕ್ಕಾಗಿ ಇಡೀ ರಾಷ್ಟ್ರ ತಹ ತಹಿಸುತ್ತಿತ್ತು. ಸನ್ಮಾನ್ಯ ಮೋದಿ ಇತಿಹಾಸದಲ್ಲಿ ಅಜರಾಮರವಾಗಿ ಉಳಿಯುತ್ತಾರೆ ಎನ್ನಲು ಸಂತೋಷ ಮತ್ತು ಹೆಮ್ಮೆ ಆಗುತ್ತದೆ. ಜೈ ನರೇಂದ್ರ ಮೋದಿ!’ ಎಂದು ಭಗವಾನ್ ಹೊಗಳಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಅವರು, ‘ಈ ಪತ್ರವನ್ನು ಕುಹಕದಿಂದಾಗಲೀ, ವ್ಯಂಗ್ಯದಿಂದಾಗಲೀ ಬರೆದಿಲ್ಲ. ಕಾಶ್ಮೀರ ವಿಷಯದಲ್ಲಿ ಕೇಂದ್ರ ಸರ್ಕಾರದ ನಿರ್ಧಾರ ಸರಿಯಾಗಿದೆ. ಹಾಗಾಗಿ, ಮುಕ್ತ ಮನಸ್ಸಿನಿಂದ ಶ್ಲಾಘಿಸಿದ್ದೇನೆ’ ಎಂದರು
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…