ಮೈಸೂರು : ನಮ್ಮ ಪ್ರಧಾನಿ ನರೇಂದ್ರ ಮೋದಿ ಒಳ್ಖೆಯ ಕೆಲಸ ಮಾಡಿದ್ದಾರೆ, ಅದನ್ನು ಮೆಚ್ಚಲೇಬೇಕು. ವಾಜಪೇಯಿ ಮಾಡದಂತಹ ಕೆಲಸವನ್ನು ಮೋದಿ ಮಾಡಿದ್ದಾರೆ. ಇದಕ್ಕೆ ನಾನು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದೇನೆ ಎಂದು ಪ್ರೊ.ಕೆ ಎಸ್ ಭಗವಾನ್ ಹೇಳಿದ್ದಾರೆ.
ಜಮ್ಮು ಕಾಶ್ಮೀರ ವಿಚಾರದಲ್ಲಿ ಕೇಂದ್ರ ಸರ್ಕಾರದ ನಿರ್ಧಾರದ ಕುರಿತು ಪ್ರತಿಕ್ರಿಯಿಸಿದ ಅವರು, ಒಳ್ಳೆ ಕೆಲಸ ಮಾಡಿದರೆ ಅದನ್ನು ಮೆಚ್ಚಬೇಕು. ನಮ್ಮ ಪ್ರಧಾನಿ ಮೋದಿ ಒಳ್ಳೆಯ ಕೆಲಸ ಮಾಡಿದ್ದಾರೆ. ವಾಜಪೇಯಿ ಮಾಡದಂತ ಕೆಲಸವನ್ನು ಮೋದಿ ಮಾಡಿದ್ದಾರೆ. ಇದಕ್ಕೆ ನಾನು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದೇನೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
‘ಆರ್ಟಿಕಲ್ 370ನ್ನು ರದ್ದತಿ ಮೂಲಕ, ರಾಷ್ಟ್ರವನ್ನು ಹಾಗೂ 72 ವರ್ಷಗಳಿಂದ ಸಂಕಟದಲ್ಲಿ ನರಳುತ್ತಿದ್ದ ಕಾಶ್ಮೀರದ ಜನತೆಯನ್ನು ನಮ್ಮ ನೆಚ್ಚಿನ ಪ್ರಧಾನಿ ಸಂತಸಪಡಿಸಿದ್ದಾರೆ. ಅಲ್ಲಿ, ಕೋಟಿಗಟ್ಟಲೆ ಖರ್ಚು ಮಾಡುತ್ತಿದ್ದ ಹಣವನ್ನು ಇನ್ನುಮುಂದೆ ಜನತೆಯ ಕಲ್ಯಾಣಕ್ಕಾಗಿ, ಅಭಿವೃದ್ಧಿಗಾಗಿ ಬಳಸಲು ಅನುಕೂಲ’ ಎಂದು ಹೇಳಿದ್ದಾರೆ.
ಇಡೀ ದೇಶವನ್ನು ಒಂದೇ ಸಂವಿಧಾನದ ಅಡಿ ತಂದಿರುವುದು ಬಹಳ ಶ್ಲಾಘನೀಯ ಕಾರ್ಯ. ಇದಕ್ಕಾಗಿ ಇಡೀ ರಾಷ್ಟ್ರ ತಹ ತಹಿಸುತ್ತಿತ್ತು. ಸನ್ಮಾನ್ಯ ಮೋದಿ ಇತಿಹಾಸದಲ್ಲಿ ಅಜರಾಮರವಾಗಿ ಉಳಿಯುತ್ತಾರೆ ಎನ್ನಲು ಸಂತೋಷ ಮತ್ತು ಹೆಮ್ಮೆ ಆಗುತ್ತದೆ. ಜೈ ನರೇಂದ್ರ ಮೋದಿ!’ ಎಂದು ಭಗವಾನ್ ಹೊಗಳಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಅವರು, ‘ಈ ಪತ್ರವನ್ನು ಕುಹಕದಿಂದಾಗಲೀ, ವ್ಯಂಗ್ಯದಿಂದಾಗಲೀ ಬರೆದಿಲ್ಲ. ಕಾಶ್ಮೀರ ವಿಷಯದಲ್ಲಿ ಕೇಂದ್ರ ಸರ್ಕಾರದ ನಿರ್ಧಾರ ಸರಿಯಾಗಿದೆ. ಹಾಗಾಗಿ, ಮುಕ್ತ ಮನಸ್ಸಿನಿಂದ ಶ್ಲಾಘಿಸಿದ್ದೇನೆ’ ಎಂದರು
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…