ಧಾರವಾಡ: ಕಾಳಿ ಸ್ವಾಮೀಜಿ ಕನ್ನಡ ವಿರೋಧಿಯಾಗಿ ಮಾತನಾಡಿಲ್ಲ. ನಾನು ಅವರ ಜೊತೆ ಮಾತನಾಡಿದ್ದೇನೆ, ಕಾಳಿ ಸ್ವಾಮೀಜಿ ಕೆಂಪೇಗೌಡರಿಗೆ ಹಾಗೂ ಕುವೆಂಪು ಅವರಿಗೆ ಬೈದಿದ್ದಾರೆ ಎನ್ನಲಾಗಿದೆ, ಆದರೆ ಅವರು ಯಾವ ಸಂದರ್ಭದಲ್ಲೂ ಬೈದಿಲ್ಲ, ಈ ಸಂಬಂಧ ಏನಾದರೂ ದಾಖಲೆಗಳಿದ್ದರೆ ಬಿಡುಗಡೆ ಮಾಡಬೇಕಿತ್ತು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಧಾರವಾಡದಲ್ಲಿ ಮಾತನಾಡಿದ ಅವರು, ಕಾಳಿ ಸ್ವಾಮೀಜಿಗೆ ಮಸಿ ಬಳೆದು ಅವರ ಮೇಲೆ ದಾಳಿ ಮಾಡಿದವರ ದಾಖಲೆಗಳಿದ್ದರೆ ಬಿಡುಗಡೆ ಮಾಡಬೇಕಿತ್ತು. ಅದನ್ನು ಬಿಟ್ಟು ಈ ರೀತಿ ಸನ್ಯಾಸಿಗಳ ಮೇಲೆ ಹಲ್ಲೆ ಮಾಡುವುದು ಅಕ್ಷಮ್ಯ ಅಪರಾಧ ಎಂದಿದ್ದಾರೆ.
ಕಾಳಿ ಸ್ವಾಮೀಜಿ ಏನಾದರೂ ತಪ್ಪು ಮಾಡಿದ್ದರೆ ಕೇಸ್ ಹಾಕಬೇಕಿತ್ತು. ಅದನ್ನು ಬಿಟ್ಟು ಈ ರೀತಿ ಖಾವಿಧಾರಿಗಳಿಗೆ ಮಸಿ ಬಳೆಯುವುದು ಸರಿಯಲ್ಲ. ಇದನ್ನು ಶ್ರೀರಾಮ ಸೇನೆ ಖಂಡಿಸುತ್ತದೆ. ಸ್ವಾಮೀಜಿ ಮೇಲೆ ದಾಳಿ ಮಾಡಿದವರು ಕೂಡಲೇ ಕ್ಷಮೆ ಕೇಳಬೇಕು. ಸರ್ಕಾರ ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಇವತ್ತು ಕಾಳಿ ಸ್ವಾಮೀಜಿ ಮೇಲೆ ಈ ರೀತಿ ಹಲ್ಲೆ ನಡೆಯುತ್ತದೆ. ನಾಳೆ ಮತ್ತೊಬ್ಬರ ಮೇಲೆ ನಡೆಯುತ್ತದೆ. ಇದನ್ನು ಸರ್ಕಾರ ಹದ್ದು ಬಸ್ತಿನಲ್ಲಿಡಬೇಕು ಎಂದು ಕಿಡಿಕಾರಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…