Featured

ಸಪ್ತಪದಿ ಸಾಮೂಹಿಕ ವಿವಾಹ : ತಿಂಗಳಲ್ಲಿ ಎರಡು ಬಾರಿ : ರಾಜ್ಯ ಸರ್ಕಾರ ನಿರ್ಧಾರ -Vishwanews24

ಸಪ್ತಪದಿ ಸಾಮೂಹಿಕ ವಿವಾಹ : ತಿಂಗಳಲ್ಲಿ ಎರಡು ಬಾರಿ : ರಾಜ್ಯ ಸರ್ಕಾರ ನಿರ್ಧಾರ -Vishwanews24

ಬೆಂಗಳೂರು, : ಕೊರೊನಾ ಸಾಂಕ್ರಾಮಿಕದ ಕಾರಣ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ವರ್ಷದಲ್ಲಿ ಎರಡು ಬಾರಿ ಬದಲಾಗಿ ಒಂದು ತಿಂಗಳಲ್ಲಿ ಎರಡು ಬಾರಿ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಹೆಚ್ಚಿದ ಜನಸಂಖ್ಯೆಯಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಯೋಜನೆಯನ್ನು ಜನವರಿ 2021 ರಿಂದ ಜಾರಿಗೆ ತರಲಾಗುತ್ತದೆ.

ಈ ಬಗ್ಗೆ ಮಾಹಿತಿ ನೀಡಿರುವ ಮುಜರಾಯಿ ಇಲಾಖೆಯ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರು, ಪ್ರತಿ ತಿಂಗಳು ಎರಡು ಶುಭ ಸಮಯಗಳಲ್ಲಿ ಸಾಮೂಹಿಕ ವಿವಾಹಗಳನ್ನು ನಡೆಸಲಾಗುವುದು. 15 ದಿನಗಳ ಮುಂಚಿತವಾಗಿಯೇ ಜೋಡಿಯು ನೊಂದಣಿ ಮಾಡಬೇಕು ಎಂದು ತಿಳಿಸಿದರು.

ಜನವರಿ 15 ಮತ್ತು 20 ಮತ್ತು ಫೆಬ್ರವರಿ 20 ಮತ್ತು 23 ರಂದು ಸಾಮೂಹಿಕ ವಿವಾಹಗಳನ್ನು ನಡೆಸಲು ಸರ್ಕಾರ ನಿರ್ಧರಿಸಿದೆ. ಇದರಿಂದಾಗಿ ಜನಸಂದಣಿಯನ್ನು ನಿಯಂತ್ರಿಸಲು ಸಾಧ್ಯವಿದೆ ಎಂದು ಸಚಿವರು ಹೇಳುತ್ತಾರೆ.

ಕಾರ್ಯಕ್ರಮದಲ್ಲಿ ವಧು, ಮದುಮಗ ಮತ್ತು ಅವರ ಪೋಷಕರಿಗೆ ಮಾತ್ರ ಭಾಗವಹಿಸಲು ಅವಕಾಶವಿರುತ್ತದೆ ಎಂದು ಕೂಡಾ ತಿಳಿಸಿದ್ದಾರೆ.

ಈ ವರ್ಷದ ಏಪ್ರಿಲ್ 26 ಮತ್ತು ಮೇ 24 ರಂದು ಸರ್ಕಾರವು ರಾಜ್ಯದಾದ್ಯಂತ 100 ದೇವಾಲಯಗಳಲ್ಲಿ ಸಾಮೂಹಿಕ ವಿವಾಹಗಳನ್ನು ನಡೆಸಲಾಗುವುದು ಎಂದು ಘೋಷಿಸಿತ್ತು. ಆದರೆ ಕೊರೊನಾ ಕಾರಣದಿದಿಂದಾಗಿ ಕಾರ್ಯಕ್ರಮವನ್ನು ಆರಂಭದಲ್ಲಿ ಜೂನ್ ಮತ್ತು ಜುಲೈಗೆ ಮತ್ತು ನಂತರ ನವೆಂಬರ್ ಮತ್ತು ಡಿಸೆಂಬರ್‌ಗೆ ಮುಂದೂಡಲಾಯಿತು. ಕನಿಷ್ಠ 250 ದಂಪತಿಗಳ ಮದುವೆ ನಡೆಸಲು ಸರ್ಕಾರ ಯೋಜಿಸಿತ್ತು.

ಈ ಯೋಜನೆಯಡಿ ಇತ್ತೀಚೆಗೆ ಕೇವಲ 23 ಜೋಡಿಗಳು ಮಾತ್ರ ವಿವಾಹವಾದರು. ನೋಂದಾಯಿತ ದಂಪತಿಗಳ ಮದುವೆಯನ್ನು ಸರ್ಕಾರಕ್ಕೆ ನಡೆಸಲು ಸಾಧ್ಯವಾಗದ ಕಾರಣ, ಅನೇಕ ಜೋಡಿಗಳು ಖಾಸಗಿ ಕಾರ್ಯಕ್ರಮ ನಡೆಸಿ ವಿವಾಹವಾದರು.

ಈ ಯೋಜನೆಯಂತೆ ವರನಿಗೆ ಶರ್ಟ್ ಮತ್ತು ಧೋತಿ ಜೊತೆಗೆ 5,000 ರೂ. ನಗದನ್ನು ಹಾಗೂ ವಧುವಿಗೆ ಸೀರೆ, 1,000 ರೂ ನಗದು ಮತ್ತು ಎಂಟು ಗ್ರಾಂ ತೂಕದ ಮಂಗಳಸೂತ್ರವನ್ನು ಸರ್ಕಾರ ನೀಡಲಿದೆ.

Vishwa News 24

Recent Posts

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

6 minutes ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

40 minutes ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

1 hour ago

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…

1 hour ago

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…

1 hour ago

ಕಣ್ಣೂರು: ಅನಸ್ತೇಶಿಯಾ ನೀಡಿ ಶಸ್ತ್ರಚಿಕಿತ್ಸೆ :  18 ತಿಂಗಳ ಮಗು ನಿಧನ  ; ವೈದ್ಯರ ವಿರುದ್ಧ ಪ್ರಕರಣ ದಾಖಲು – vishwanews24

ಕಣ್ಣೂರು: ಅನಸ್ತೇಶಿಯಾ ನೀಡಿ ಶಸ್ತ್ರಚಿಕಿತ್ಸೆ :  18 ತಿಂಗಳ ಮಗು ನಿಧನ  ; ವೈದ್ಯರ ವಿರುದ್ಧ ಪ್ರಕರಣ ದಾಖಲು ತಿರುವನಂತಪುರಂ:…

2 hours ago