Featured

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು – vishwanews24

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು

ಅಹಮದಾಬಾದ್: ಕೇವಲ ವಿವಾಹ ನೋಂದಣಿ ಮಾಡಿಸಿಕೊಂಡರೆ ಮಾತ್ರ ಹಿಂದೂ ವಿವಾಹ ಕಾನೂನುಬದ್ಧವಾಗುವುದಿಲ್ಲ. ಸಪ್ತಪದಿ ಸೇರಿದಂತೆ ಹಿಂದೂ ಸಂಪ್ರದಾಯದ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ವಿವಾಹ ಮಾನ್ಯವಾಗುತ್ತದೆ ಎಂದು ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಜೂನ್ 23ರಂದು ನೀಡಿದ ತೀರ್ಪಿನಲ್ಲಿ ನ್ಯಾಯಮೂರ್ತಿಗಳಾದ ಇಲೇಶ್ ವೋರಾ ಮತ್ತು ಆರ್.ಟಿ. ವಚ್ಛಾನಿ ಅವರ ವಿಭಾಗೀಯ ಪೀಠ, ಹಿಂದೂ ವಿವಾಹವು ಕೇವಲ ಔಪಚಾರಿಕ ಕಾರ್ಯಕ್ರಮವಲ್ಲ, ಅದು ಧಾರ್ಮಿಕ ಸಂಸ್ಕಾರ ಮತ್ತು ಪವಿತ್ರ ಬಂಧವಾಗಿದೆ ಎಂದು ಅಭಿಪ್ರಾಯಪಟ್ಟಿತ್ತು.

ಬ್ರಿಟನ್‌ನಲ್ಲಿ ನೆಲೆಸಿರುವ ಕೌಶಲ್ ಸೋನಾರ್ ಅವರು, ಅಹಮದಾಬಾದ್‌ನ ಮಹಿಳೆಯೊಬ್ಬರೊಂದಿಗೆ ತನ್ನ ವಿವಾಹ ನಡೆದಿದೆ ಎಂಬುದನ್ನು ಅಮಾನ್ಯ ಎಂದು ಘೋಷಿಸುವಂತೆ ನ್ಯಾಯಾಲಯದ ಮೆಟ್ಟಿಲೇರಿದ್ದರು. ತನ್ನ ಪೋಷಕರಿಗೆ ವಿವಾಹ ಪ್ರಮಾಣಪತ್ರ ತೋರಿಸಿ ಮಹಿಳೆ ತಾನು ಕಾನೂನುಬದ್ಧ ಪತ್ನಿ ಎಂದು ಹೇಳಿದಾಗ ಮಾತ್ರ ಈ ವಿಷಯ ತಿಳಿದಿದೆ. ಅಲ್ಲದೆ, ತಮ್ಮ ಒಪ್ಪಿಗೆಯಿಲ್ಲದೆ ವಿವಾಹ ದಾಖಲೆಗಳಲ್ಲಿ ಸಹಿ ಪಡೆಯಲಾಗಿದೆ. ಯಾವುದೇ ಹಿಂದೂ ಸಂಪ್ರದಾಯದ ವಿಧಿ-ವಿಧಾನಗಳು ನಡೆದಿಲ್ಲ ಹಾಗೂ ಪತಿ-ಪತ್ನಿಯಾಗಿ ಎಂದಿಗೂ ಒಟ್ಟಿಗೆ ವಾಸಿಸಿಲ್ಲ ಎಂದು ಅವರು ಕೋರ್ಟ್ ಗೆ ತಿಳಿಸಿದ್ದರು.

ಯಾವುದೇ ವಿವಾಹ ವಿಧಿ-ವಿಧಾನಗಳು ನಡೆದಿಲ್ಲ ಹಾಗೂ ಇಬ್ಬರೂ ಪತಿ-ಪತ್ನಿಯಾಗಿ ಬದುಕಿಲ್ಲ ಎಂದು ಮಹಿಳೆಯೇ ಕುಟುಂಬ ನ್ಯಾಯಾಲಯದ ಮುಂದೆ ಒಪ್ಪಿಕೊಂಡಿದ್ದರೂ, ಅರ್ಜಿಯನ್ನು ತಿರಸ್ಕರಿಸಿದ್ದ ಕುಟುಂಬ ನ್ಯಾಯಾಲಯದ ಆದೇಶ ತಪ್ಪಾಗಿದೆ ಎಂದು ಹೈಕೋರ್ಟ್ ಹೇಳಿದೆ. ಹಿಂದೂ ವಿವಾಹ ಕಾಯ್ದೆ, 1955ರ ಸೆಕ್ಷನ್ 7 ಅನ್ನು ನ್ಯಾಯಾಲಯವು ಉಲ್ಲೇಖಿಸಿದ್ದು, ಹಿಂದೂ ವಿವಾಹವು ಸಂಪ್ರದಾಯಬದ್ಧ ವಿಧಿ-ವಿಧಾನಗಳ ಪ್ರಕಾರ ನೆರವೇರಬೇಕು. ವಿಶೇಷವಾಗಿ ಸಪ್ತಪದಿ ಹಿಂದೂ ವಿವಾಹದ ಪ್ರಮುಖ ಮತ್ತು ಅವಿಭಾಜ್ಯ ಅಂಗವಾಗಿದೆ. ಈ ವಿಧಿ ನೆರವೇರಿದಾಗ ಮಾತ್ರ ವಿವಾಹವು ಧಾರ್ಮಿಕ, ಸಾಮಾಜಿಕ ಮತ್ತು ಕಾನೂನುಬದ್ಧ ಮಾನ್ಯತೆ ಪಡೆಯುತ್ತದೆ ಎಂದು ನ್ಯಾಯಾಲಯ ತಿಳಿಸಿದೆ.

ಹಿಂದೂ ವಿವಾಹವು ಕೇವಲ ಹಾಡು, ನೃತ್ಯ, ಔತಣಕೂಟ ಅಥವಾ ವಾಣಿಜ್ಯ ವ್ಯವಹಾರವಲ್ಲ. ಅದು ಇಬ್ಬರು ವ್ಯಕ್ತಿಗಳು ಜೀವನಪರ್ಯಂತ ಸಮಾನತೆ, ಪರಸ್ಪರ ಒಪ್ಪಿಗೆ, ಗೌರವ ಮತ್ತು ಆರೋಗ್ಯಕರ ಸಂಬಂಧದೊಂದಿಗೆ ಕುಟುಂಬ ಕಟ್ಟುವ ಪವಿತ್ರ ಸಂಸ್ಥೆಯಾಗಿದೆ. ಹಿಂದೂ ಸಂಪ್ರದಾಯದಲ್ಲಿ ಪತ್ನಿಯನ್ನು ಅರ್ಧಾಂಗಿ ಎಂದು ಪರಿಗಣಿಸಲಾಗುತ್ತದೆ. ವಿವಾಹವು ಹೊಸ ಕುಟುಂಬದ ಅಡಿಪಾಯವಾಗಿದ್ದು, ಧಾರ್ಮಿಕ ಸಂಸ್ಕಾರ ಎಂಬ ಸ್ಥಾನಮಾನ ಹೊಂದಿದೆ ಎಂದು ಹೈಕೋರ್ಟ್ ಹೇಳಿದೆ.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

15 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

18 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

18 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

19 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

19 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

19 hours ago