Featured

ಸಫಾಯಿ ಕರ್ಮಚಾರಿಗಳಿಗೆ ಸೌಲಭ್ಯ ಒದಗಿಸಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ – Vishwanews24

ಸಫಾಯಿ ಕರ್ಮಚಾರಿಗಳಿಗೆ ಸೌಲಭ್ಯ ಒದಗಿಸಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ – Vishwanews24

ಉಡುಪಿ: ಸಫಾಯಿ ಕರ್ಮಚಾರಿಗಳ ಶ್ರೇಯೋಭಿವೃದ್ದಿಗೆ ಸರ್ಕಾರ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ ನಡೆದ, ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸರ್ಕಾರ ಮ್ಯಾನ್ಯವಲ್ ಸ್ಕಾö್ಯವೆಂಜರ್ ಪದ್ದತಿಯನ್ನು ಸಂಪೂರ್ಣವಾಗಿ ನಿಷೇಧಿಸಿ, ಕಾಯಿದೆ ಹಾಗೂ ನಿಯಮಗಳನ್ನು ಜಾರಿಗೆ ತರುವುದರೊಂದಿಗೆ , ಈ ವೃತ್ತಿಯಲ್ಲಿ ತೊಲಗಿಸಬೇಕು, ಒಂದೊಮ್ಮೆ ಕಾಯಿದೆಯನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ದ ಕಾನೂನಿಡಿ ಕ್ರಮ ಕೈಗೊಳ್ಳÀಲಾಗುವುದು ಎಂದರು.

ಮ್ಯಾನ್ಯುವಲ್ ಸ್ಕಾö್ಯವೆಂಜರ್ ವೃತ್ತಿಯಿಂದ ಹೊರ ಬಂದಿರುವವರಿಗೆ ಸೂಕ್ತ ಪುರ್ನವಸತಿ ಒದಗಿಸಬೇಕು , ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮ ಪಂಚಾಯತಿಯ ವ್ಯಾಪ್ತಿಯ ಸಫಾಯಿ ಕರ್ಮಚಾರಿ ಅವರಿಗೆ ನಿವೇಶನ ಮಂಜೂರಾತಿಯನ್ನು ಪ್ರಥಮಾದ್ಯತೆಯ ಮೇಲೆ ನೀಡಬೇಕು ಎಂದು ಸೂಚಿಸಿದರು.

ಮ್ಯಾನ್ಯುವಲ್ ಸ್ಕಾö್ಯವೆಂಜರ್‌ನಿ0ದ ಮೃತಪಟ್ಟ ಕಾರ್ಮಿಕರ ಕುಟುಂಬದ ಅವಲಂಬಿತ ಸದಸ್ಯರುಗಳಿಗೆ ಗುರುತಿನ ಚೀಟಿ ಹಾಗೂ ಪುರ್ನವಸತಿ ಕಲ್ಪಿಸುವ ಕಾರ್ಯವಾಗಬೇಕು ಎಂದರು.

ಸಕ್ಕಿಂಗ್ ಹಾಗೂ ಜಟ್ಟಿಂಗ್ ಯಂತ್ರ, ವೈಯಕ್ತಿಕವಾಗಿ , ಸಫಾಯಿ ಕರ್ಮಚಾರಿಗಳ ಸ್ವ ಸಹಾಯ ಗುಂಪುಗಳಿAದ , ಖಾಸಗಿ ಏಜೆನ್ಸಿ ಗುತ್ತಿಗೆದಾರರಿಂದ ಹೊಸ ಯಂತ್ರಗಳನ್ನು ಖರೀದಿ ಮಾಡಲು ಅತಿ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ನೀಡಲಾಗುವುದು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಪೌರಕಾರ್ಮಿಕರ ಆರೋಗ್ಯದ ಹಿತದೃಷ್ಠಿಯಿಂದÀ ಪ್ರತಿ 3 ತಿಂಗಳಿಗೊಮ್ಮೆ ಸಾಮಾನ್ಯ ಅರೋಗ್ಯ ತಪಾಸಣೆ ಹಾಗೂ ವಾರ್ಷಿಕವಾಗಿ ಎರಡು ಬಾರಿ ಸಂಪೂರ್ಣ ದೇಹ ಪರೀಕ್ಷೆಯನ್ನು ಸ್ಥಳೀಯ ಸಂಸ್ಥೆಗಳು ಕಡ್ಡಾಯವಾಗಿ ಮಾಡಿಸಿ, ವರದಿಯನ್ನು ಜಿಲ್ಲಾ ಜಾಗೃತಿ ಸಮಿತಿಗೆ ನೀಡಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಲೋರ‍್ಸ್ ಹಾಗೂ ಕ್ಲೀನರ್ ಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಅರ್ಹ ವ್ಯಕ್ತಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದರು.

ಸಭೆಯಲ್ಲಿ ಅಪರ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು , ಜಾಗೃತ ಸಮಿತಿ ಸದಸ್ಯರುಗಳಾದ ವೈ.ಲಕ್ಷö್ಮಣ್ , ಗಣೇಶ್, ಅನಿತಾ, ಹಾಗೂ ಎಲ್ಲಾ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

 

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

11 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

11 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

11 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

12 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

12 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

13 hours ago