Featured

ಸಮಗ್ರ ಗ್ರಾಮಾಭಿವೃದ್ಧಿಗಾಗಿ ಬಿಜೆಪಿ ಬೆಂಬಲಿತ ಗ್ರಾ.ಪಂ. ಅಭ್ಯರ್ಥಿಗಳನ್ನು ಗೆಲ್ಲಿಸಿ ಶಾಸಕ ರಘುಪತಿ ಭಟ್ -Vishwanews24

ಸಮಗ್ರ ಗ್ರಾಮಾಭಿವೃದ್ಧಿಗಾಗಿ ಬಿಜೆಪಿ ಬೆಂಬಲಿತ ಗ್ರಾ.ಪಂ. ಅಭ್ಯರ್ಥಿಗಳನ್ನು ಗೆಲ್ಲಿಸಿ ಶಾಸಕ ರಘುಪತಿ ಭಟ್ -Vishwanews24

ಉಡುಪಿ : ಗ್ರಾಮಗಳಉದ್ಧಾರವೇ ದೇಶದಉದ್ಧಾರ.ಇಂದು ಗ್ರಾಮ ಪಂಚಾಯತ್‌ಸಹಿತ ವಿವಿಧ ಸ್ತರದ ಸ್ಥಳೀಯಾಡಳಿತ ಸಂಸ್ಥೆಗಳು, ರಾಜ್ಯ ಮತ್ತು ಕೇಂದ್ರದಲ್ಲಿಬಿಜೆಪಿನೇತೃತ್ವದ ಅಭಿವೃದ್ಧಿ ಪರಆಡಳಿತವಿದೆ.ಈ ಪರ್ವ ಕಾಲದಲ್ಲಿ ಗ್ರಾಮಗಳ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಅಭ್ಯರ್ಥಿಗಳನ್ನು ಗರಿಷ್ಠ ಸಂಖ್ಯೆಯಲ್ಲಿ ಗೆಲ್ಲಿಸಿಕೊಡುವಮೂಲಕ ಜನತೆ ಗ್ರ‍್ರಾಮಾಭಿವೃದ್ಧಿಗೆ ತಮ್ಮ ಅಮೂಲ್ಯ ಕೊಡುಗೆ ನೀಡಬೇಕುಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ಹೇಳಿದರು.

ಅವರು ಪಂದುಬೆಟ್ಟುನಲ್ಲಿ ನಡೆದ ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಕ್ಷದ ಪ್ರಮುಖರು, ಗ್ರಾ.ಪಂ. ಚುನಾವಣಾ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಅಭಿವೃದ್ಧಿಗೆ ಇನ್ನೊಂದು ಹೆಸರು ಬಿಜೆಪಿ ಎಂಬ ರೀತಿಯಲ್ಲಿ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಸರಕಾರಗಳು ವಿನೂತನ ಜನಪರ ಯೋಜನೆಗಳ ಅನುಷ್ಠಾನಮತ್ತು ವಿಶಿಷ್ಟ ಕಾರ್ಯಸಾಧನೆಗಳ ಮೂಲಕಸರ್ವಸ್ಪರ್ಶಿ ಸರ್ವವ್ಯಾಪಿಯಾಗಿದಾಖಲೆಯ ಅಭಿವೃದ್ಧಿಯತ್ತ ದಾಪುಗಾಲುಹಾಕುತ್ತಿವೆ. ಉಜ್ವಲ ಉಚಿತ ಗ್ಯಾಸ್‌ವಿತರಣೆ, ಕೃಷಿ ಸಮ್ಮಾನ್ ಯೋಜನೆ, ಕೊರೊನಾ ಸಂಕಷ್ಟ ಸಂದರ್ಭದಲ್ಲಿ ಸಹಾಯಹಸ್ತ,ಆರ್ಥಿಕಪುನಶ್ಚೇತನಕ್ಕೆಸಹಾಯಧನ,ಸ್ವೋಉದ್ಯೋಗ ಸೃಷ್ಠಿಸುವಆತ್ಮನಿರ್ಬರಭಾರತ ಯೋಜನೆ,ರೈತ ಸ್ನೇಹಿಯಾಗಿರುವ ನೂತನ ಕೇಂದ್ರಕೃಷಿಕಾಯ್ದೆ, ಭೂಸುಧಾರಣೆ ತಿದ್ದುಪಡಿ ಕಾಯ್ದೆ, ಗೋಹತ್ಯೆ ನಿಷೇಧ ಮಸೂದೆ,ಗ್ರಾಮಾಂತರ ರಸ್ತೆಗಳಉನ್ನತೀಕರಣ ಇವೇ ಮುಂತಾದಜನಪರ, ಅಭಿವೃದ್ಧಿಪರನಡೆ ಜನಮಾನಸದಲ್ಲಿಬಿಜೆಪಿ ನೇತೃತ್ವದಆಡಳಿತದಲ್ಲಿಭರವಸೆಮೂಡಿಸಿವೆಎಂದರು.

ಗ್ರಾಮ ಪಂಚಾಯತ್ ಚುನಾವಣೆ ಕಾರ್ಯಕರ್ತರನ್ನು ನಾಯಕರನ್ನಾಗಿಸುವ ಚುನಾವಣೆ. ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರಕಾರ ಆಡಳಿತಕ್ಕೆ ಬಂದ ಬಳಿಕ ಗ್ರಾಮಾಂತರ ಪ್ರದೇಶಗಳಲ್ಲಿ

ಹಿಂದೆಂದೂ ಕಂಡು ಕೇಳರಿಯದರೀತಿಯಲ್ಲಿ ಅಭಿವೃದ್ಧಿಯಶಖೆ ಆರಂಭಗೊAಡಿದೆ. ಕಡೆಕಾರು-ಅಂಬಲಪಾಡಿ ಪ್ರದೇಶದಲ್ಲಿ ರೂ.೫ ಕೋಟಿ ಅನುದಾನದಲ್ಲಿ ನದಿದಂಡೆ ರಚನೆ ಕಾಮಗಾರಿಗೆ ಟೆಂಡರ್ ಮಂಜೂರಾತಿಗೊAಡು ಕಾಮಗಾರಿ ಪ್ರಾರಂಭಗೊAಡಿದೆ.ವಾರಾಹಿ ಕುಡಿಯುವನೀರಿನ ಯೋಜನೆಯು ೨೦೨೨ ಮಾರ್ಚ್ನಲ್ಲಿ ಸಂಪೂರ್ಣಗೊಳ್ಳಲಿದ್ದು ಉಡುಪಿ ನಗರದಿಂದ ಅಂಬಲಪಾಡಿ ಗ್ರಾ.ಪಂ. ಸಹಿತ ಉಡುಪಿ ವಿಧಾನಸಭಾ ಕ್ಷೇತ್ರದ ಎಲ್ಲ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಗೂ ನಿರಂತರ ಶುದ್ಧ ನೀರುಪೂರೈಕೆಗೆ ಸುವ್ಯವಸ್ಥೆಮಾಡಲಾಗುವುದು.ಅಂಬಲಪಾಡಿ ಗ್ರಾ.ಪ.ವ್ಯಾಪ್ತಿಯ ಕಸ ನಿರ್ವಹಣೆಯನ್ನು ಉಡುಪಿ ನಗರಸಭೆಯ ಮಾದರಿಯಲ್ಲೇ ಕರ್ವಾಲುಘಟಕದ ಮೂಲಕನಿರ್ವಹಿಸಲು ಕ್ರಮ ಕೈಗೊಳ್ಳಲಾಗುವುದು.ಅಂಬಲಪಾಡಿ ಗ್ರಾ.ಪಂ.ಗೆ ಸಂಪರ್ಕ ಕೊಂಡಿಯಾಗಿರುವ ಆದಿವುಡುಪಿ-ಮಲ್ಪೆ ರಾಜ್ಯ ಹೆದ್ದಾರಿಯನ್ನು ೧೦೦ ಫೀಟ್ ಅಗಲೀಕರಣಗೊಳಿಸಿ ಅಭಿವೃದ್ಧಿಪಡಿಸಲು ರೂ.೯೧ ಕೋಟಿ ಅನುದಾನ ಮಂಜೂರಾಗಿದ್ದು ಭೂಸ್ವಾಧೀನ ಪ್ರಕ್ರಿಯೆ ಪ್ರಗತಿಯಲ್ಲಿದೆ. ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯಸರಕಾರಗಳು ಹಾಗೂ ಎಲ್ಲ ಸ್ತರದ ಜನಪ್ರತಿನಿಧಿಗಳ ಸಹಕಾರದೊಂದಿಗೆ ಎಲ್ಲಾಅಭಿವೃದ್ಧಿ ಕೆಲಸ ಕಾರ್ಯಗಳುಇನ್ನಷ್ಟು ವೇಗ ಪಡೆಯಲಿವೆ.ಅಭಿವೃದ್ಧಿಯೇಬಿಜೆಪಿ ಗೆಲುವಿಗೆ ಶ್ರೀರಕ್ಷೆಯಾಗಿರುವಈ ಸಂದರ್ಭದಲ್ಲಿಪಕ್ಷದ ಕಾರ್ಯಕರ್ತರು ಸರಕಾರದ ಸಾಧನೆಗಳನ್ನುಮನೆಮನೆಗೆ ತಲುಪಿಸಿಬಿಜೆಪಿ ಬೆಂಬಲಿತ ಎಲ್ಲಾ ಅಭ್ಯರ್ಥಿಗಳಅಂತರದಗೆಲುವಿಗೆ ಕಂಕಣಬದ್ಧರಾಗಿ ಶ್ರಮಿಸಬೇಕು ಎಂದು ಶಾಸಕ ಭಟ್ ಕರೆ ನೀಡಿದರು.

ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಸಭೆಯ ಅಧ್ಯಕ್ಷತೆವಹಿಸಿ ಅಭ್ಯರ್ಥಿಗಳಿಗೆ ಶುಭಹಾರೈಸಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ ಮತ್ತು ಅಂಬಲಪಾಡಿ ಗ್ರಾ.ಪಂ. ಚುನಾವಣಾ ಉಸ್ತುವಾರಿ ಗಿರೀಶ್ ಎಮ್. ಅಂಚನ್ ಚುನಾವಣಾ ಪ್ರಚಾರಹಾಗೂ ಗೆಲುವಿನ ಕಾರ್ಯತಂತ್ರಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಉಡುಪಿ ಜಿ.ಪಂ. ಅಧ್ಯಕ್ಷ ದಿನಕರ ಬಾಬು,ಬಿಜೆಪಿ ಜಿಲ್ಲಾ ಕೋಶಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ, ಜಿಲ್ಲಾ ಸಹವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು,ಬಿಜೆಪಿ ಉಡುಪಿ ನಗರ ಉಪಾಧ್ಯಕ್ಷ ವೆಂಕಟರಮಣ ಕಿದಿಯೂರು, ನಗರ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಮಣಿಪಾಲ್, ಚುನಾವಣಾ ಸಹ ಉಸ್ತುವಾರಿ ರೋಷನ್ ಶೆಟ್ಟಿ, ಬಿಜೆಪಿ ಅಂಬಲಪಾಡಿ-ಕಡೆಕಾರು ಮಹಾಶಕ್ತಿಕೇಂದ್ರದ ಅಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ಸಹ ಸಂಚಾಲಕ ಉಮೇಶ್ ಪೂಜಾರಿ ಕುತ್ಪಾಡಿ, ಶಕ್ತಿ ಕೇಂದ್ರಗಳ ಅಧ್ಯಕ್ಷರಾದ ನಾಗರಾಜ್ ಕರ್ಕೇರ ಕಿದಿಯೂರು, ವಿಜಯ ಶೆಟ್ಟಿ ಕಪ್ಪೆಟ್ಟು, ಪಕ್ಷದಪ್ರಮುಖರು,ವಿವಿಧ ಸ್ತರದ ಪದಾಧಿಕಾರಿಗಳು,ಮಾಜಿ ಗ್ರಾ.ಪಂ. ಸದಸ್ಯರು,ಗ್ರಾ.ಪಂ. ಚುನಾವಣಾ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ’ ವಜ್ರಾಭರಣ ಅನಾವರಣ -vishwanews24

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…

1 day ago

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು – vishwanews24

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…

1 day ago

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ – vishwanews24

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…

1 day ago

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…

1 day ago

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ – vishwanews24

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…

1 day ago

ಪಾಟ್ನಾ: ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ : ತಪ್ಪಿದ ಭಾರೀ ಅನಾಹುತ – vishwanews24

ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…

1 day ago