Featured

ಸಮರ್ಥ ಆಡಳಿತ ನೀಡಿರುವ ಕಾಂಗ್ರೆಸ್‌ನ ಎಲ್ಲಾ ಜನಪರ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ಮಂದಿಗೂ ತಲುಪಿಸಬೇಕು : ಡಿ.ಕೆ. ಶಿ – Vishwanews24

ತುಮಕೂರಿನಲ್ಲಿ ಜಯ ಗಳಿಸಿದರೆ ರಾಜ್ಯದಲ್ಲೇ ಕಾಂಗ್ರೆಸ್ ಗೆಲುವು ಸಾಧಿಸುತ್ತದೆ..

ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಶ್ರಮಿಸಬೇಕು..

ಸಿದ್ದರಾಮಯ್ಯ ನೀಡಿರುವ ಜನಪರ ಆಡಳಿತವನ್ನು ಈಗಿನ ಡಬಲ್ ಎಂಜಿನ್ ಸರ್ಕಾರ ನೀಡುತ್ತಿಲ್ಲ..

ತುಮಕೂರು: ತುಮಕೂರಿನಲ್ಲಿ ಜಯ ಗಳಿಸಿದರೆ ರಾಜ್ಯದಲ್ಲೇ ಕಾಂಗ್ರೆಸ್ ಗೆಲುವು ಸಾಧಿಸುತ್ತದೆ. ಇಲ್ಲಿ ಕಾಂಗ್ರೆಸ್‌ನ ಗೆಲುವು ಎರಡಂಕಿ ದಾಟಿದರೆ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಹೇಳಿದ್ದಾರೆ.

ನಗರದ ಹೊರವಲಯದ ಡಾ. ಎಚ್​.ಎಂ. ಗಂಗಾಧರಯ್ಯ ಮೆಮೋರಿಯಲ್​ ಹಾಲ್​ನಲ್ಲಿ ಭಾನುವಾರ ಜಿಲ್ಲಾ ಕಾಂಗ್ರೆಸ್​ ಸಮಿತಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ನವ ಸಂಕಲ್ಪ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿಷ ಕಡೆದು ಅಮೃತವನ್ನು ಸಮುದ್ರ ಮಂಥನದಲ್ಲಿ ತೆಗೆದಂತೆ ಕೆಲಸ ಆಗಬೇಕು. ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಶ್ರಮಿಸಬೇಕು. ಮುಖಂಡರು, ಕಾರ್ಯಕರ್ತರ ಪ್ರಯತ್ನದಿಂದ ಇಲ್ಲಿ ಗೆಲುವು ಸಾಧ್ಯ ಎಂದರು.

ಸ್ವಪ್ರತಿಷ್ಠೆ ಬಿಟ್ಟು ಪಕ್ಷ ಕಟ್ಟುವಲ್ಲಿ ಪ್ರತಿಯೊಬ್ಬರೂ ತೊಡಗಿಸಿಕೊಳ್ಳಬೇಕು. ಮನೆಗೆ ಬಂದ ಲಕ್ಷ್ಮಿಯನ್ನು ಒಳ ಕರೆದುಕೊಳ್ಳಿ. ಸೇವೆ, ತ್ಯಾಗದಿಂದ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂಬುದನ್ನು ಸದಾ ನೆನಪಿನಲ್ಲಿಟ್ಟುಕೊಳ್ಳಬೇಕು. ಬಿಜೆಪಿ, ಜೆಡಿಎಸ್‌ನ ದುರಾಡಳಿತವನ್ನು ಜನ ನೋಡಿದ್ದಾರೆ. ಸಿದ್ದರಾಮಯ್ಯ ನೀಡಿರುವ ಜನಪರ ಆಡಳಿತವನ್ನು ಈಗಿನ ಡಬಲ್ ಎಂಜಿನ್ ಸರ್ಕಾರ ನೀಡುತ್ತಿಲ್ಲ ಎಂಬುದನ್ನು ಜನರಿಗೆ ಅರ್ಥ ಮಾಡಿಸಬೇಕು. ಸಮರ್ಥ ಆಡಳಿತ ನೀಡಿರುವ ಕಾಂಗ್ರೆಸ್‌ನ ಎಲ್ಲಾ ಜನಪರ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ಮಂದಿಗೂ ತಲುಪಿಸಬೇಕು ಎಂದವರು ತಿಳಿಸಿದರು.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

16 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

18 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

18 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

19 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

19 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

19 hours ago