ಸಮಸ್ತ ಹಿಂದೂ ಸಮಾಜ ಬಿಲ್ಲವ ಸಮಾಜದ ಜೊತೆ ನಿಂತು ಈ ಧರ್ಮ ವಿರೋಧಿಗಳ ಮುಖವಾಡವನ್ನು ಬಯಲಿಗೆಳೆಯುವಲ್ಲಿ ಕೈ ಜೋಡಿಸಿ: ಯಶ್‍ಪಾಲ್ ಸುವರ್ಣ -Vishwanews24

ಉಡುಪಿ: ಹಿಂದೂ ಧರ್ಮದಲ್ಲಿ ಜಾತಿಯಾಧಾರಿತ ಒಡಕು ಸೃಷ್ಟಿಸುವ ಹುನ್ನಾರದೊಂದಿಗೆ ರಾಜಕೀಯ ಉದ್ದೇಶದಿಂದ ಆಯೋಜಿಸಿರುವ ಬಿಲ್ಲವ ಮುಸ್ಲಿಂ ಸ್ನೇಹ ಸಮ್ಮಿಲನ ಕಾರ್ಯಕ್ರಮ ರಾಷ್ಟ್ರ ಭಕ್ತ ಬಿಲ್ಲವ ಸಮಾಜಕ್ಕೆ ಮಾಡಿದ ಅವಮಾನ ಎಂದು ಯಶ್‍ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಷ್ಟ್ರೀಯ ಚಿಂತನೆಗಳೊಂದಿಗೆ ಸನಾತನ ಹಿಂದೂ ಧರ್ಮದ ಕಟ್ಟಾಳುಗಳಾಗಿ ಕೋಟಿ ಚೆನ್ನಯ್ಯ ಮತ್ತು ಶ್ರೀ ನಾರಾಯಣ ಗುರುಗಳ ತತ್ವ ಆದರ್ಶಗಳನ್ನು ಮೈಗೂಡಿಸಿಕೊಂಡು ಬಂದಿರುವ ಬಿಲ್ಲವ ಸಮಾಜವನ್ನು ಪ್ರತ್ಯೇಕಿಸಿ ಹಿಂದೂ ಧರ್ಮವನ್ನು ಒಡೆಯುವ ಷಡ್ಯಂತ್ರವನ್ನು ಈಗಾಗಲೇ ಸ್ವಾಭಿಮಾನಿ ಬಿಲ್ಲವ ಸಮಾಜ ಮುಖಂಡರು ವಿರೋಧಿಸುತ್ತಿದ್ದಾರೆ. ಇವರ ಧ್ವನಿಯಾಗಿ ಸಮಸ್ತ ಹಿಂದೂ ಸಮಾಜ ಈ ಕಾರ್ಯಕ್ರಮವನ್ನು ವಿರೋಧಿಸಿ ಸ್ವಾಭಿಮಾನಿ ಬಿಲ್ಲವ ಸಮಾಜಕ್ಕೆ ನೈತಿಕ ಬೆಂಬಲ ನೀಡಬೇಕಾಗಿದೆ.

ಹಿಂದೂ ಧರ್ಮದ ರಕ್ಷಣೆಗಾಗಿ ತ್ಯಾಗವನ್ನು ಮಾಡಿ, ಎಲ್ಲರೊಂದಿಗೂ ಸೌಹಾರ್ದಯುತವಾಗಿ ಜೀವನ ನಡೆಸುತ್ತಾ ಸಮಾಜದ ಇತರ ಜಾತಿಗಳಿಗೆ ಮಾದರಿಯಾಗಿರುವ ಬಿಲ್ಲವ ಸಮಾಜವನ್ನು ತಮ್ಮ ರಾಜಕೀಯ ಬೇಳೆ ಬೇಯಿಸಲು ಸಮಾಜದ ಮುಖಂಡರೇ ದಾರಿತಪ್ಪಿಸಲು ಮುಂದಾಗಿರುವುದು ದುರದೃಷ್ಟಕರ.

ಇದೇ ರೀತಿ ಮುಂಬರುವ ದಿನಗಳಲ್ಲಿ ಮೊಗವೀರ, ಬಂಟ ಮೊದಲಾದ ಜಾತಿಗಳೊಂದಿಗೆ ಮುಸ್ಲಿಂ ಸ್ನೇಹ ಸಮ್ಮಿಲನ ಕಾರ್ಯಕ್ರಮಗಳನ್ನು ಆಯೋಜಿಸುವ ಬಗ್ಗೆ ತೆರೆಮರೆಯಲ್ಲಿ ಪ್ರಯತ್ನ ನಡೆಸುತ್ತಿರುವ ಬಗ್ಗೆಯೂ ಮಾಹಿತಿ ಇದ್ದು, ಈ ಸ್ನೇಹ ಸಮ್ಮಿಲನದ ಹೆಸರಲ್ಲಿ ಸಮಾಜದ ಸ್ವಾಸ್ಥ್ಯ ಕೆಡಿಸುವ ಈ ನಿರ್ಧಾರವನ್ನು ಕೂಡಲೇ ಕೈ ಬಿಟ್ಟು, ಸಮಸ್ತ ಹಿಂದೂ ಸಮಾಜ ಬಿಲ್ಲವ ಸಮಾಜದ ಜೊತೆ ನಿಂತು ಈ ಧರ್ಮ ವಿರೋಧಿಗಳ ಮುಖವಾಡವನ್ನು ಬಯಲಿಗೆಳೆಯುವಲ್ಲಿ ಕೈ ಜೋಡಿಸುವಂತೆ   ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

12 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

12 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

12 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

13 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

13 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

13 hours ago