ಬೆಂಗಳೂರು: ಮತಾಂಧ ಶಕ್ತಿಗಳು ಅಮಾಯಕರ ಸಮಾಧಿ ಮೇಲೆ ಸೌಧ ಕಟ್ಟುವುದನ್ನು ನಿಲ್ಲಿಸಿ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಶಿವಮೊಗ್ಗದ ಬಜರಂಗದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ವಿಚಾರವಾಗಿ ಟ್ವೀಟ್ ಮಾಡಿದ ಅವರು, ಶಿವಮೊಗ್ಗದಲ್ಲಿ ಹತ್ಯೆಯಾದ ಮೃತ ಹರ್ಷನ ಸೋದರಿ ಅಶ್ವಿನಿಯ ಮಾತೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಎಂದು ಬರೆದು ಕನ್ನಡ ಪತ್ರಿಕೆಯೊಂದರಲ್ಲಿ ಪ್ರಕಟವಾದ ಸುದ್ದಿಯನ್ನು ಹಂಚಿಕೊಂಡಿದ್ದಾರೆ.
ಮೃತ ಹರ್ಷನ ಸೋದರಿ ವ್ಯಕ್ತಪಡಿಸಿರುವ ಅಭಿಪ್ರಾಯ ಅತ್ಯಂತ ಪ್ರಸ್ತುತ. ಕೆಲ ಮತಾಂಧ ಶಕ್ತಿಗಳು ಮುಗ್ದರ ತಲೆಯಲ್ಲಿ ಮತಾಂಧತೆಯನ್ನು ತುಂಬುತ್ತಾ ಕೋಮುದ್ವೇಷ ಹರಡುತ್ತಿದ್ದಾರೆ. ಆದರೆ ಅಮಾಯಕರೇ ಈ ಮತಾಂಧ ಶಕ್ತಿಗಳ ಷಡ್ಯಂತ್ರದ ಬಲಿ ಎಂದು ಟ್ವೀಟ್ ಮಾಡಿದ್ದಾರೆ.
ಇನ್ನು ಸಮಾಜಕ್ಕೆ ಬೇಕಿರುವುದು ಧರ್ಮದ ಶಾಂತಿ ಸಂದೇಶವೇ ಹೊರತು ಕೊಚ್ಚು, ಕೊಲ್ಲು ಸಂಸ್ಕಾರವಲ್ಲ ಎಂದು ಅವರು ಹೇಳಿದ್ದಾರೆ.
ಕೊಂದು ಉಳಿಸಿಕೊಳ್ಳುವ ಧರ್ಮ ಯಾವುದಾದರೂ ಇದೆಯೆ? ಎಂದು ಪೂರ್ಣಚಂದ್ರ ತೇಜಸ್ವಿ ಪ್ರಶ್ನಿಸಿದ್ದರು. ಪೂಚಂತೆ ಮಾತನ್ನು ಎಲ್ಲಾ ಧರ್ಮದ ಮತಾಂಧ ಶಕ್ತಿಗಳು ಅರಿತುಕೊಳ್ಳಬೇಕು ಎಂದು ಹೇಳಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…