Featured

ಸಮಾಜಕ್ಕೆ ಬೇಕಿರುವುದು ಧರ್ಮದ ಶಾಂತಿ ಸಂದೇಶವೇ ಹೊರತು ಕೊಚ್ಚು, ಕೊಲ್ಲು ಸಂಸ್ಕಾರವಲ್ಲ : ದಿನೇಶ್ ಗುಂಡೂರಾವ್ – Vishwanews24

ಮತಾಂಧ ಶಕ್ತಿಗಳು ಅಮಾಯಕರ ಸಮಾಧಿ ಮೇಲೆ ಸೌಧ ಕಟ್ಟುವುದನ್ನು ನಿಲ್ಲಿಸಿ..

ಸಮಾಜಕ್ಕೆ ಬೇಕಿರುವುದು ಧರ್ಮದ ಶಾಂತಿ ಸಂದೇಶವೇ ಹೊರತು ಕೊಚ್ಚು, ಕೊಲ್ಲು ಸಂಸ್ಕಾರವಲ್ಲ..

ಕೊಂದು ಉಳಿಸಿಕೊಳ್ಳುವ ಧರ್ಮ ಯಾವುದಾದರೂ ಇದೆಯೆ..?

ಬೆಂಗಳೂರು: ಮತಾಂಧ ಶಕ್ತಿಗಳು ಅಮಾಯಕರ ಸಮಾಧಿ ಮೇಲೆ ಸೌಧ ಕಟ್ಟುವುದನ್ನು ನಿಲ್ಲಿಸಿ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಶಿವಮೊಗ್ಗದ ಬಜರಂಗದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ವಿಚಾರವಾಗಿ ಟ್ವೀಟ್‌ ಮಾಡಿದ ಅವರು, ಶಿವಮೊಗ್ಗದಲ್ಲಿ ಹತ್ಯೆಯಾದ ಮೃತ ಹರ್ಷನ ಸೋದರಿ ಅಶ್ವಿನಿಯ ಮಾತೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಎಂದು ಬರೆದು ಕನ್ನಡ ಪತ್ರಿಕೆಯೊಂದರಲ್ಲಿ ಪ್ರಕಟವಾದ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ಮೃತ ಹರ್ಷನ ಸೋದರಿ ವ್ಯಕ್ತಪಡಿಸಿರುವ ಅಭಿಪ್ರಾಯ ಅತ್ಯಂತ ಪ್ರಸ್ತುತ. ಕೆಲ ಮತಾಂಧ ಶಕ್ತಿಗಳು ಮುಗ್ದರ ತಲೆಯಲ್ಲಿ ಮತಾಂಧತೆಯನ್ನು ತುಂಬುತ್ತಾ ಕೋಮುದ್ವೇಷ ಹರಡುತ್ತಿದ್ದಾರೆ. ಆದರೆ ಅಮಾಯಕರೇ ಈ ಮತಾಂಧ ಶಕ್ತಿಗಳ ಷಡ್ಯಂತ್ರದ ಬಲಿ ಎಂದು ಟ್ವೀಟ್‌ ಮಾಡಿದ್ದಾರೆ.

ಇನ್ನು ಸಮಾಜಕ್ಕೆ ಬೇಕಿರುವುದು ಧರ್ಮದ ಶಾಂತಿ ಸಂದೇಶವೇ ಹೊರತು ಕೊಚ್ಚು, ಕೊಲ್ಲು ಸಂಸ್ಕಾರವಲ್ಲ ಎಂದು ಅವರು ಹೇಳಿದ್ದಾರೆ.

ಕೊಂದು ಉಳಿಸಿಕೊಳ್ಳುವ ಧರ್ಮ ಯಾವುದಾದರೂ ಇದೆಯೆ? ಎಂದು ಪೂರ್ಣಚಂದ್ರ ತೇಜಸ್ವಿ ಪ್ರಶ್ನಿಸಿದ್ದರು. ಪೂಚಂತೆ ಮಾತನ್ನು ಎಲ್ಲಾ ಧರ್ಮದ ಮತಾಂಧ ಶಕ್ತಿಗಳು ಅರಿತುಕೊಳ್ಳಬೇಕು ಎಂದು ಹೇಳಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

6 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

6 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

7 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

7 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

7 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

7 hours ago