ಸಮಾಜದಲ್ಲಿ ಸಮಾನತೆಗಾಗಿ ಕಾಂಗ್ರೆಸ್, ಆರ್‌ಎಸ್‌ಎಸ್‌ ಎರಡನ್ನೂ ಸೋಲಿಸಬೇಕು: ನಟ ಚೇತನ್  -Vishwanews24

Featured, ರಾಜ್ಯ ನ್ಯೂಸ್

ಸಮಾಜದಲ್ಲಿ ಸಮಾನತೆಗಾಗಿ ಕಾಂಗ್ರೆಸ್, ಆರ್‌ಎಸ್‌ಎಸ್‌ ಎರಡನ್ನೂ ಸೋಲಿಸಬೇಕು: ನಟ ಚೇತನ್  -Vishwanews24

ಬೆಂಗಳೂರು: ಸಮಾಜದಲ್ಲಿ ಸಮಾನತೆಗಾಗಿ ಕಾಂಗ್ರೆಸ್‌ ಮತ್ತು ಆರ್‌ಎಸ್‌ಎಸ್‌ ಎರಡನ್ನೂ ಸೋಲಿಸಬೇಕು ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಹೇಳಿದ್ದಾರೆ.

ಈ ಕುರಿತು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ಫೋಸ್ಟ್ ಹಾಕಿಕೊಂಡಿರುವ ಅವರು ಕಾಂಗ್ರೆಸ್ ಕೂಡ ಬ್ರಾಹ್ಮಣ್ಯವನ್ನು ಸಲುಹುವ ಸಂಸ್ಥೆ ಎಂದು ಕಿಡಿಕಾರಿದ್ದಾರೆ.

‘ಕಾಂಗ್ರೆಸ್ ಪಕ್ಷದ ಸದಸ್ಯರಾದ ಕೆಬಿ ಹೆಡ್ಗೆವಾರ್ ಅವರು 1925 ರಲ್ಲಿ ಆರ್‌ಎಸ್‌ಎಸ್‌ ಸ್ಥಾಪಿಸಿದರು. ಕಾಂಗ್ರೆಸ್‌ನ ಮತ್ತೊಬ್ಬ ಸದಸ್ಯರಾದ ಬಾಲ ಗಂಗಾಧರ ತಿಲಕ್ ಅವರು ಹೆಡ್ಗೆವಾರ್ ಅವರನ್ನು ಪ್ರಭಾವಿಸಿದ್ದರು. ಕಾಂಗ್ರೆಸ್ ಮತ್ತು ಆರ್‌ಎಸ್‌ಎಸ್‌ ( ಸಂಘ ಪರಿವಾರ ) ಯಾವತ್ತಿನಿಂದಲೂ ಒಂದಕ್ಕೊಂದು ಬೆಸೆದುಕೊಂಡೇ ಇದೆ.

ಬ್ರಾಹ್ಮಣ್ಯವನ್ನು ಉಳಿಸಿಕೊಳ್ಳುವುದರಿಂದ ಕಾಂಗ್ರೆಸ್ ಮತ್ತು ಆರ್‌ಎಸ್‌ಎಸ್‌, ಎರಡಕ್ಕೂ ಲಾಭವಾಗುತ್ತದೆ. ಸಮಾನತೆಗಾಗಿ ಕಾಂಗ್ರೆಸ್ ಮತ್ತು ಸಂಘ ಎರಡನ್ನೂ ಸೋಲಿಸಬೇಕು‘ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.