ಗದಗ: ಜಾತಿ ಸಮೀಕ್ಷೆ ಹೆಸರಿನಲ್ಲಿ ಸರ್ಕಾರ ವೀರಶೈವ ಲಿಂಗಾಯತ ಸಮಾಜ ಒಡೆಯುವ ಹುನ್ನಾರ ನಡೆಸಿದ್ದು, ಇದರ ವಿರುದ್ಧ ಒಗ್ಗಟ್ಟು ಪ್ರದರ್ಶಿಸಲು ಸ್ವಾಮೀಜಿಗಳ ಮುಂದಾಳತ್ವದಲ್ಲಿ ಸೆ.19 ರಂದು ಹುಬ್ಬಳ್ಳಿಯಲ್ಲಿ ಏಕತಾ ಸಮಾವೇಶ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಕತಾ ಸಮಾವೇಶಕ್ಕೆ ಸ್ವಾಮೀಜಿಗಳು ಮುಂದಾಳತ್ವ ವಹಿಸಿದ್ದಾರೆ. ಅದಕ್ಕೆ ಅಖಿಲ ಭಾರತ ವೀರಶೈವ ಮಹಾಸಭಾ ಕೈಜೊಡಿಸಿದೆ. ನಾನು ವೀರಶೈವ ಮಹಾಸಭಾ ಜತೆಗೆ ಮಾತನಾಡುತ್ತಿದೇನೆ. ಸಮಾಜದಲ್ಲಿ ಒಡೆಯುವ ರಣತಂತ್ರ ಸರ್ಕಾರ ಮಾಡುತ್ತಿದೆ. ಸರ್ಕಾರದ ವಿರುದ್ಧ ಇಡೀ ಸಮಾಜ ಒಂದುಗೂಡಿಸುವುದು ಅವಶ್ಯವಾಗಿ ಬೇಕಾಗಿದೆ.
ಸರ್ಕಾರ ಕ್ರಿಶ್ಚಿಯನ್ ಅಂತಾ ಎಲ್ಲ ಜಾತಿಯಲ್ಲಿ ಉಲ್ಲೇಖ ಮಾಡಿದೆ. ಲಿಂಗಾಯತರು, ಬ್ರಾಹ್ಮಣರು, ಒಕ್ಕಲಿಗರು, ಎಸಿ ಎಸ್ಟಿ, ಒಬಿಸಿಯನ್ನು ಬಿಟ್ಟಿಲ್ಲ.ಯಾವುದೇ ಸಮೀಕ್ಷೆಯಲ್ಲಿ ಮತಾಂತರಕ್ಕೆ ಬೇರೆ ಕೋಡ್ ಇಲ್ಲ.ಆದರೆ, ಈಗ ಯಾರು ಹುಟ್ಟು ಹಾಕಿದ್ದಾರೊ ಗೊತ್ತಿಲ್ಲ. ಕಾಂತರಾಜು ಕಮಿಟಿ ಏನು ಸಂವಿಧಾನದ ಪ್ರಕಾರ ಆಗಿತ್ತಾ ಸಿದ್ದರಾಮಯ್ಯನವರೇ ಕಾಂತರಾಜು ಕಮಿಟಿ ಮಾಡಿದ್ದು ಅದೇನು ದೊಡ್ಡ ಸ್ಯಾಂಟಿಟಿನಾ ಎಂದು ಪ್ರಶ್ನಿಸಿದರು.
ಬೇರೆ ಜಾತಿಯಲ್ಲಿ ಉಪಜಾತಿ ಸೃಷ್ಟಿ ಮಾಡಿದ್ದಾರೆ. ವೀರಶೈವ ಲಿಂಗಾಯತ, ಲಿಂಗಾಯತ ವೀರಶೈವ ಅಂತಾ ಮಾಡಿದ್ದಾರೆ. ಇಂತಹ ನೂರಾರು ಉದಾಹರಣೆಗಳು ಆಗಿವೆ. ಎಲ್ಲ ಸಮಾಜದಲ್ಲಿ ಗೊಂದಲ ಹಿಡಿಸಿದ್ದಾರೆ. ಸಮಾಜವನ್ನು ಒಡೆದು ಚೂರು ಚೂರು ಮಾಡಿದ್ದಾರೆ. ಇದೊಂದು ಕೇವಲ ಹೈಕಮಾಂಡ್ ಒಲೈಸುವಂತಹ ರಾಜಕೀಯ ನಿರ್ಧಾರ ಸಿದ್ದರಾಮಯ್ಯ ಮಾಡಿದ್ದಾರೆ.
ರಾಜ್ಯ ಸರ್ಕಾರಕ್ಕೆ ಮನೆ ಮನೆಗೆ ಹೋಗಿ ಗಣತಿ ಮಾಡುವ ಅಧಿಕಾರ ಇಲ್ಲ. ಸೆನ್ಸಸ್ ಆಕ್ಟ್ ಇದೆ. ಕೇಂದ್ರ ಸರ್ಕಾರಕ್ಕೆ ಗಣತಿ ಮಾಡುವ ಅಧಿಕಾರ ಇದೆ. ಇದರಿಂದ ಗೊಂದಲ ಉಂಟಾಗಿದೆ. ಗೊಂದಲ ನಿವಾರಣೆ ಮಾಡಿ, ಕಾನೂನು ಬದ್ಧವಾಗಿ ಮಾಡುವವರೆಗೂ ಗೊಂದಲ ಇದ್ದೆ ಇರುತ್ತದೆ. ಕೇಂದ್ರ ಸರ್ಕಾರ ಜನಗಣತಿ ಜತೆಗೆ ಜಾತಿ ಗಣತಿ ಮಾಡುವುದಾಗಿ ಈಗಾಗಲೇ ಹೇಳಿದೆ ಎಂದು ಹೇಳಿದರು.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…