ಸಮಾಜ ವಿರೋಧಿ ಶಕ್ತಿಗಳೊಂದಿಗೆ ಗುರುತಿಸಿಕೊಂಡು ಅಪರಾಧ ಕೃತ್ಯಗಳಲ್ಲಿ ಭಾಗವಹಿಸುವ ಯಾವುದೇ ಪೊಲೀಸ್ ಸಿಬ್ಬಂದಿ ವಿರುದ್ದ ನಿರ್ದಾಕ್ಷಿಣ ಕ್ರಮ : ಆರಗ ಜ್ಞಾನೇಂದ್ರ ಎಚ್ಚರಿಕೆ – Vishwanews24

Featured, ರಾಜ್ಯ ನ್ಯೂಸ್

ಸಮಾಜ ವಿರೋಧಿ ಶಕ್ತಿಗಳೊಂದಿಗೆ ಗುರುತಿಸಿಕೊಂಡು ಅಪರಾಧ ಕೃತ್ಯಗಳಲ್ಲಿ ಭಾಗವಹಿಸುವ ಯಾವುದೇ ಪೊಲೀಸ್ ಸಿಬ್ಬಂದಿ ವಿರುದ್ದ ನಿರ್ದಾಕ್ಷಿಣ ಕ್ರಮ : ಆರಗ ಜ್ಞಾನೇಂದ್ರ ಎಚ್ಚರಿಕೆ – Vishwanews24

ಬೆಂಗಳೂರು: ಸಮಾಜ ವಿರೋಧಿ ಶಕ್ತಿಗಳೊಂದಿಗೆ ಗುರುತಿಸಿಕೊಂಡು ಅಪರಾಧ ಕೃತ್ಯಗಳಲ್ಲಿ ಭಾಗವಹಿಸುವ ಯಾವುದೇ ಪೊಲೀಸ್ ಸಿಬ್ಬಂದಿ ವಿರುದ್ದ ನಿರ್ದಾಕ್ಷಿಣ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.

ಸಚಿವರು ಗುರುವಾರ ನಗರದಲ್ಲಿ ಮಾತನಾಡಿ, ಚಾಮರಾಜಪೇಟೆ ವ್ಯಾಪ್ತಿಯಲ್ಲಿ, 6.40 ಕೋಟಿ ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುವ ಟ್ರಾಫಿಕ್ ಪೊಲೀಸ್ ಠಾಣೆಯ ಶಂಕುಸ್ಥಾಪನೆ ಕಾರ್ಯ ನೆರವೇರಿಸಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

ಮುಖ್ಯಮಂತ್ರಿಗಳ ನಿವಾಸದ ಬಳಿ, ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿತವಾಗಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಗಳು, ನಿಷೇಧಿತ ಗಾಂಜಾ ಮಾರಾಟ ಜಾಲದೊಂದಿಗೆ ಸಂಪರ್ಕ ಹೊಂದಿದ್ದರು ಎನ್ನಲಾದ ವಿಷಯಕ್ಕೆ ಸಂಬಂಧಿಸಿದಂತೆ, ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದರು.

 ಉಡುಪಿ : ನಾರಾಯಣ ಗುರು ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ : ಕೇಂದ್ರದ ನಿಲುವು ಖಂಡಿಸಿ ಜಿಲ್ಲೆಯ ಸಮಸ್ತ ಬಿಲ್ಲವ ಸಂಘ/ಸಂಘಟನೆಗಳ ನೇತೃತ್ವದಲ್ಲಿ ಡಿಸಿಗೆ ಮನವಿ – Vishwanews24

ಇಂತಹ ಹೀನ ಕೃತ್ಯಗಳನ್ನು ಸಹಿಸಲಾಗುವುದಿಲ್ಲ, ಕೇವಲ ಬೆರಳಣಿಕೆ ಯಷ್ಟು ಮಂದಿ ಸಿಬ್ಬಂದಿಯಿಂದ, ಸುಮಾರು ಒಂದು ಲಕ್ಷಕ್ಕೂ ಮೀರಿ ಇರುವ ಇಲಾಖೆ ಸಿಬ್ಬಂದಿಗಳಿಗೆ ಕೆಟ್ಟ ಹೆಸರು ಬರುತ್ತದೆ” ಎಂದರು.

ಅಪರಾಧ ಜಗತ್ತನ್ನು ಬಗ್ಗು ಬಡಿಯಲು ನೇಮಕವಾದ, ಸಿಬ್ಬಂದಿಗಳು, ಅವರೊಂದಿಗೆ ಶಾಮೀಲಾಗುವುದು ಅಕ್ಷಮ್ಯ ಅಪರಾಧ ಎಂದು ಅಭಿಪ್ರಾಯಪಟ್ಟ ಸಚಿವರು “ಅಂಥವರನ್ನು ಕೇವಲ ಸೇವೆಯಿಂದ ಅಮಾನತು ಮಾಡಿದರೆ ಸಾಲದು,ಅಂಥವರು ಇಲಾಖೆಯಲ್ಲಿ ಇರಬಾರದು, ಈ ವಿಷಯಕ್ಕೆ ಸಂಬಂಧಿಸಿದಂತೆ ಸಂಪೂರ್ಣ ವರದಿ ಪಡೆದುಕೊಂಡು ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಕೆಲವು ಯುವ ಕಾಂಗ್ರೆಸ್ ನಾಯಕರು ಕಳೆದ ರಾತ್ರಿ ಹೊಡೆದಾಡಿಕೊಂಡಿದ್ದಾರೆ, ಎನ್ನಲಾದ ವಿಷಯಕ್ಕೆ ಸಂಬಂಧಿಸಿದಂತೆ, ಉತ್ತರಿಸಿ, ನಗರದ ಪೊಲೀಸರು, ಈವರೆಗೆ ಯಾವುದೇ ದೂರನ್ನು ಯಾರಿಂದಲೂ ಪಡೆದುಕೊಂಡಿಲ್ಲ, ದೂರು ದಾಖಲಾದರೆ, ನಮ್ಮ ಪೊಲೀಸರು ವಿಚಾರಣೆ ನಡೆಸುತ್ತಾರೆ ಎಂದರು.

ಮಂಗಳೂರು : ಜ. 21 ರಂದು ತುಳು ಕೊಡವ ಭಾಷೆಗಳ ಅಳಿವು ಉಳಿವು ಪುಸ್ತಕ ಬಿಡುಗಡೆ ಸಮಾರಂಭ – VIshwanews24

Leave a Reply