ಬೆಂಗಳೂರು: ಸಮಾಜ ವಿರೋಧಿ ಶಕ್ತಿಗಳೊಂದಿಗೆ ಗುರುತಿಸಿಕೊಂಡು ಅಪರಾಧ ಕೃತ್ಯಗಳಲ್ಲಿ ಭಾಗವಹಿಸುವ ಯಾವುದೇ ಪೊಲೀಸ್ ಸಿಬ್ಬಂದಿ ವಿರುದ್ದ ನಿರ್ದಾಕ್ಷಿಣ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.
ಸಚಿವರು ಗುರುವಾರ ನಗರದಲ್ಲಿ ಮಾತನಾಡಿ, ಚಾಮರಾಜಪೇಟೆ ವ್ಯಾಪ್ತಿಯಲ್ಲಿ, 6.40 ಕೋಟಿ ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುವ ಟ್ರಾಫಿಕ್ ಪೊಲೀಸ್ ಠಾಣೆಯ ಶಂಕುಸ್ಥಾಪನೆ ಕಾರ್ಯ ನೆರವೇರಿಸಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ಮುಖ್ಯಮಂತ್ರಿಗಳ ನಿವಾಸದ ಬಳಿ, ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿತವಾಗಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಗಳು, ನಿಷೇಧಿತ ಗಾಂಜಾ ಮಾರಾಟ ಜಾಲದೊಂದಿಗೆ ಸಂಪರ್ಕ ಹೊಂದಿದ್ದರು ಎನ್ನಲಾದ ವಿಷಯಕ್ಕೆ ಸಂಬಂಧಿಸಿದಂತೆ, ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದರು.
ಇಂತಹ ಹೀನ ಕೃತ್ಯಗಳನ್ನು ಸಹಿಸಲಾಗುವುದಿಲ್ಲ, ಕೇವಲ ಬೆರಳಣಿಕೆ ಯಷ್ಟು ಮಂದಿ ಸಿಬ್ಬಂದಿಯಿಂದ, ಸುಮಾರು ಒಂದು ಲಕ್ಷಕ್ಕೂ ಮೀರಿ ಇರುವ ಇಲಾಖೆ ಸಿಬ್ಬಂದಿಗಳಿಗೆ ಕೆಟ್ಟ ಹೆಸರು ಬರುತ್ತದೆ” ಎಂದರು.
ಅಪರಾಧ ಜಗತ್ತನ್ನು ಬಗ್ಗು ಬಡಿಯಲು ನೇಮಕವಾದ, ಸಿಬ್ಬಂದಿಗಳು, ಅವರೊಂದಿಗೆ ಶಾಮೀಲಾಗುವುದು ಅಕ್ಷಮ್ಯ ಅಪರಾಧ ಎಂದು ಅಭಿಪ್ರಾಯಪಟ್ಟ ಸಚಿವರು “ಅಂಥವರನ್ನು ಕೇವಲ ಸೇವೆಯಿಂದ ಅಮಾನತು ಮಾಡಿದರೆ ಸಾಲದು,ಅಂಥವರು ಇಲಾಖೆಯಲ್ಲಿ ಇರಬಾರದು, ಈ ವಿಷಯಕ್ಕೆ ಸಂಬಂಧಿಸಿದಂತೆ ಸಂಪೂರ್ಣ ವರದಿ ಪಡೆದುಕೊಂಡು ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಕೆಲವು ಯುವ ಕಾಂಗ್ರೆಸ್ ನಾಯಕರು ಕಳೆದ ರಾತ್ರಿ ಹೊಡೆದಾಡಿಕೊಂಡಿದ್ದಾರೆ, ಎನ್ನಲಾದ ವಿಷಯಕ್ಕೆ ಸಂಬಂಧಿಸಿದಂತೆ, ಉತ್ತರಿಸಿ, ನಗರದ ಪೊಲೀಸರು, ಈವರೆಗೆ ಯಾವುದೇ ದೂರನ್ನು ಯಾರಿಂದಲೂ ಪಡೆದುಕೊಂಡಿಲ್ಲ, ದೂರು ದಾಖಲಾದರೆ, ನಮ್ಮ ಪೊಲೀಸರು ವಿಚಾರಣೆ ನಡೆಸುತ್ತಾರೆ ಎಂದರು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…