ಕಾಪು, ಜು. 22 : ಸಮಾಜ ಸೇವಾ ವೇದಿಕೆ ಕಳತ್ತೂರು ಮತ್ತು ಸಫಿಯ ಉಮರಬ್ಬ ಫ್ಯಾಮಿಲಿ ಟ್ರಸ್ಟ್ ಚಂದ್ರನಗರ ಇವರ ನೇತೃತ್ವದಲ್ಲಿ ಚಂದ್ರನಗರ ಯು.ಎಸ್.ಎಫ್ ಕಾಂಪ್ಲೆಕ್ಸ್ ನಲ್ಲಿ ಸೌಹಾರ್ದ ಕೂಟ ಈದ್ ಆಚರಣೆ ನಡೆಯಿತು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಮಾಜ ಸೇವಾ ವೇದಿಕೆಯ ಅಧ್ಯಕ್ಷ ಮಹಮ್ಮದ್ ಫಾರೂಕ್ ಚಂದ್ರನಗರ ಮಾತನಾಡಿ, ಸಮುದಾಯದ ಸೇವೆಯಲ್ಲಿ ಸಂತೃಪ್ತಿಯನ್ನು ಕಾಣುವ ಸಮಾನ ಮನಸ್ಕ ಸದಸ್ಯರನ್ನು ಸೇರಿಸಿಕೊಂಡು ಪ್ರಾರಂಭಿಸಿರುವ ವೇದಿಕೆಯ ಮೂಲಕ ಇನ್ನಷ್ಟು ಸೇವಾ ಕಾರ್ಯಗಳನ್ನು ನಡೆಸಲು ಉದ್ದೇಶಿಸಲಾಗಿದೆ. ಎರಡು ವರ್ಷಗಳ ಅವಧಿಯಲ್ಲಿ ತೊಂದರೆಗೊಳಗಾದ ಜನರಿಗೆ ಪಡಿತರ ಕಿಟ್, ಆರೋಗ್ಯ ಕಿಟ್, ವೈದ್ಯರು, ಆಶಾ ಕಾರ್ಯಕರ್ತೆಯರು ಸಹಿತ ಕೊರೊನಾ ವಾರಿಯರ್ಸ್ ಗೆ ಗೌರವಾರ್ಪಣೆ ಸಹಿತ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಈದ್ ಸೌಹಾರ್ದ ಕೂಟದ ಮೂಲಕ ಜನರಿಗೆ ಇನ್ನಷ್ಟು ಹತ್ತಿರವಾಗುವ ಪ್ರಯತ್ನ ನಡೆಯುತ್ತಿದೆ ಎಂದರು.
ಸೌಹಾರ್ದಕೂಟ ಈದ್ ಆಚರಣೆಯ ಅಂಗವಾಗಿ ಸುಮಾರು150 ಕ್ಕೂ ಅಧಿಕ ಮಂದಿಗೆ ಫುಡ್ ಕಿಟ್ / ಆಹಾರ ಪೊಟ್ಟಣ ಗಳನ್ನು ವಿತರಿಸಲಾಯಿತು.
ಕಾಪು – ಕಳತ್ತೂರು ಸಮಾಜ ಸೇವಾ ವೇದಿಕೆಯ ಅಧ್ಯಕ್ಷ ಮಹಮ್ಮದ್ ಫಾರೂಕ್ ಚಂದ್ರನಗರ, ಸಫಿಯಾ ಉಮ್ಮರಬ್ಬ ಫ್ಯಾಮಿಲಿ ಟ್ರಸ್ಟ್ ನ ಸ್ಥಾಪಕ ಅಧ್ಯಕ್ಷ ಕೆ. ಉಮರಬ್ಬ, ವೇದಿಕೆಯ ಪದಾಧಿಕಾರಿಗಳಾದ ದಿವಾಕರ್ ಡಿ. ಶೆಟ್ಟಿ,ದಿವಾಕರ್ ಬಿ. ಶೆಟ್ಟಿ, ರಾಜೇಶ್ ಕುಲಾಲ್, ದಯಾನಂದ ಶೆಟ್ಟಿ ದೆಂದೂರುಕಟ್ಟೆ , ಪತ್ರಕರ್ತ ರಾಕೇಶ್ ಕುಂಜೂರು, ಉದ್ಯಮಿ ದಿನೇಶ್ ಆಚಾರ್ಯ ಶಿರ್ವ, ಫಕ್ರುದ್ದೀನ್ ಆಲಿ ಮೊದಲಾದವರು ಉಪಸ್ಥಿತರಿದ್ದರು.
ಕಾಪು – ಕಳತ್ತೂರು ಸಮಾಜ ಸೇವಾ ವೇದಿಕೆಯ ಸಂಚಾಲಕ ದಿವಾಕರ ಡಿ. ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…