ರಾಮನಗರ : ಸಾಮಾಜಿಕ ಜಾಲತಾಣದಲ್ಲಿ ತಮ್ಮ ಪ್ರವಚನಗಳ ಮೂಲಕ ಸದಾ ಸುದ್ದಿಯಲ್ಲಿರುತ್ತಿದ್ದ ನಿತ್ಯಾನಂದ ಸ್ವಾಮಿಜಿ ಇದೀಗ ತಾವು ಸಮಾಧಿ ಸ್ಥಿತಿಯಲ್ಲಿರುವುದಾಗಿ ಘೋಷಿಸಿ ಮತ್ತೆ ಸುದ್ದಿಗೆ ಬಂದಿದ್ದಾರೆ.
ಇತ್ತೀಚೆಗೆ ನಿತ್ಯಾನಂದ ಸ್ವಾಮಿಜಿ ಅವರ ಯಾವುದೇ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಕಾಣದ ಹಿನ್ನಲೆ ನಿತ್ಯಾನಂದ ಸ್ವಾಮಿಜಿ ಸಾವನಪ್ಪಿದ್ದಾರೆ ಎಂದು ಸುದ್ದಿ ಹರಡಿಸಿದ್ದಾರೆ. ಆದರೆ ಈ ಬಗ್ಗೆ ಸ್ಪಷ್ಟನೆಯನ್ನು ನೀಡಿರುವ ನಿತ್ಯಾನಂದ ಸ್ವಾಮಿಜಿ ಕೈಲಾಸ ಪೀಠ ಹೆಸರಿನ ಫೇಸ್ಬುಕ್ ಪೇಜ್ನಲ್ಲಿ ಈ ಸಂಬಂಧ ಪೋಸ್ಟ್ ಹಾಕಲಾಗಿದ್ದು, ಅಲ್ಲಿ ನಿತ್ಯಾನಂದರ ಸಂದೇಶಗಳನ್ನು ಬರೆಯಲಾಗಿದೆ. ನಿತ್ಯಾನಂದ ಕೈ ಬರಹ ಇರುವ ಫೋಟೊ ಸಹ ಇದೆ. ‘ನಾನು ಸದ್ಯ ಸಮಾಧಿ ಸ್ಥಿತಿ ತಲುಪಿದ್ದು, ಮತ್ತೆ 2026ರ ವೇಳೆಗೆ ಲೌಕಿಕ ಜಗತ್ತಿನ ಚಟುವಟಿಕೆಗಳಿಗೆ ಹಿಂತಿರುಗುತ್ತೇನೆ’ ಎಂದು ಅದರಲ್ಲಿ ಬರೆಯಲಾಗಿದೆ.
ನಾನು ಈಗಾಗಲೇ ಸತ್ತು ಹೋಗಿದ್ದೇನೆ ಎಂದು ಕೆಲವರು ಸುದ್ದಿ ಹಬ್ಬಿಸಿದ್ದಾರೆ. ಅದೆಲ್ಲ ಸುಳ್ಳು. ಈಗಲೂ 27 ವೈದ್ಯರ ತಂಡ ನನ್ನನ್ನು ನೋಡಿಕೊಳ್ಳುತ್ತಿದೆ. ಸಮಾಧಿ ಸ್ಥಿತಿಯಲ್ಲಿದ್ದರೂ ನಿತ್ಯ ಶಿವ ಪೂಜೆ ಮಾಡುವುದನ್ನು ಬಿಟ್ಟಿಲ್ಲ. ಆದರೆ ನೀರು–ಆಹಾರ ಸ್ವೀಕರಿಸುತ್ತಿಲ್ಲ ಎಂದೂ ನಿತ್ಯಾನಂದ ಸ್ಪಷ್ಟನೆ ನೀಡಿದ್ದಾರೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…