ಉಡುಪಿ, ಜ.6: ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ವೇಳೆ ನಾಪತ್ತೆಯಾಗಿರುವ ಬೋಟ್ ಹಾಗೂ ಏಳು ಮೀನುಗಾರರ ಶೀಘ್ರ ಪತ್ತೆಗೆ ಆಗ್ರಹಿಸಿ ಮೀನುಗಾರರ ಬೃಹತ್ ಧರಣಿ ಮೆರವಣಿಗೆ ಇಂದು ಬೆಳಗ್ಗೆ ಮಲ್ಪೆಯಿಂದ ಆರಂಭಗೊಂಡಿದೆ.
ಮಲ್ಪೆ ಮೀನುಗಾರರ ಸಂಘದ ನೇತೃತ್ವದಲ್ಲಿ ಮಲ್ಪೆ ಬಂದರ್ನಿಂದ ಕರಾವಳಿ ಬೈಪಾಸ್ ವರೆಗೆ ನಡೆಯಲಿರುವ ಮೆರವಣಿಗೆಯಲ್ಲಿ ಉಡುಪಿ, ದ.ಕ. ಮತ್ತು ಉತ್ತರ ಕನ್ನಡ ಜಿಲ್ಲೆಯ 15 ಸಾವಿರಕ್ಕೂ ಅಧಿಕ ಮೀನುಗಾರರು ಭಾಗವಹಿಸಿದ್ದಾರೆ. ಧರಣಿಯ ಹಿನ್ನೆಲೆಯಲ್ಲಿ ಈ ಮೂರು ಜಿಲ್ಲೆಗಳಲ್ಲಿ ಮೀನುಗಾರಿಕೆ ಚಟುವಟಿಕೆಯನ್ನು ಸ್ಥಗಿತಗೊಳಿಸಲಾಗಿದೆ.
ಮೆರವಣಿಗೆಯು ಅಂಬಲಪಾಡಿ ಜಂಕ್ಷನ್ ತಲುಪಿ, ಅಲ್ಲಿ ಧರಣಿನಿರತರು ರಸ್ತೆ ತಡೆ ನಡೆಸಲಿದ್ದಾರೆ. ಬಳಿಕ ಪ್ರತಿಭಟನಾ ಸಭೆ ನಡೆಯಲಿದೆ.
ಈ ನಡುವೆ ಮೀನುಗಾರರ ಬೃಹತ್ ಮೆರವಣಿಗೆಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಬಲಪಾಡಿಯಿಂದ ಕಿನ್ನಿಮೂಲ್ಕಿಯ ವರೆಗೆ ಸುಮಾರು ನಾಲ್ಕು ಕಿ.ಮೀ. ರಸ್ತೆ ಸಂಚಾರವನ್ನು ಪೊಲೀಸರು ಸ್ಥಗಿತಗೊಳಿಸಿದ್ದಾರೆ.
ಶರಬತ್, ನೀರು ಪೂರೈಕೆ
ಬೃಹತ್ ಮೆರವಣಿಗೆಯಲ್ಲಿ ಪಾಲ್ಗೊಂಡವರಿಗೆ ಆದಿಉಡುಪಿಯ ಮಸೀದಿಯ ವತಿಯಿಂದ ಶರಬತ್ತು ವ್ಯವಸ್ಥೆ ಕಲ್ಪಿಸಲಾಗಿದೆ. ಅದೇರೀತಿ ಮಲ್ಪೆ ಮಸೀದಿಯ ವತಿಯಿಂದ ಮತ್ತು ಕಲ್ಮಾಡಿ ಚರ್ಚ್ ವತಿಯಿಂದ ಮೆರವಣಿಗೆಯಲ್ಲಿ ಸಾಗುವವರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ.
ಮೀನುಗಾರರ ಸಂಘದ ಅಧ್ಯಕ್ಷ ಆನಂದ್ ಸಿ. ಕುಂದರ್, ಮುಖಂಡರಾದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್,ಲಾಲಾಜಿ ಆರ್ ಮೆಂಡನ್, ಯಶ್ಪಾಲ್ ಸುವರ್ಣ ಮತ್ತಿತರರು ಧರಣಿಗೆ ನೇತೃತ್ವ ವಹಿಸಿದ್ದಾರೆ.
https://m.facebook.com/story.php?story_fbid=1643445759134736&id=193132874519477
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…